Homeಮುಖಪುಟಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ ಹರಿಯಾಣ ಸರ್ಕಾರ

ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ ಹರಿಯಾಣ ಸರ್ಕಾರ

- Advertisement -
- Advertisement -

ಹರಿಯಾಣದ ನೂತನ ಬಿಜೆಪಿಯ ನಯಾಬ್ ಸಿಂಗ್ ಸೈನಿ ಸರ್ಕಾರ ಪರಿಶಿಷ್ಟ ಜಾತಿ (ಎಸ್‌ಸಿ)ಯ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ನಿರ್ಧಾರನ್ನು ಶುಕ್ರವಾರ ಕೈಗೊಂಡಿದೆ. ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ಮಹತ್ವದ ತೀರ್ಪನ್ನು ಜಾರಿಗೆ ತಂದ ಮೊದಲ ರಾಜ್ಯವಗಿ ಹರಿಯಾಣ ಹೊರಹೊಮ್ಮಿದೆ.

ಒಳ ಮೀಸಲಾತಿ ಜಾರಿ ಮಾಡುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ನಯಾಬ್ ಸಿಂಗ್, ತಮ್ಮ ಸರ್ಕಾರವು ಈ ಮೂಲಕ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಿದೆ ಎಂದು ಹೇಳಿದ್ದಾರೆ. ಹಿಂದುಳಿದಿರುವಿಕೆಯ ಆಧಾರದ ಮೇಲೆ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ರಾಜ್ಯಗಳಿಗೆ ಸಾಂವಿಧಾನಿಕ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಆಗಸ್ಟ್‌ನಲ್ಲಿ ತೀರ್ಪು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿ ವಂಚಿತ ಪರಿಶಿಷ್ಟ ಜಾತಿ (DSC) ಎಂದು ಕರೆಯುವ ಹೊಸ ವರ್ಗವನ್ನು ರಚಿಸಿದೆ. ಅದರಲ್ಲಿ 36 ಎಸ್‌ಸಿ ಜಾತಿಗಳು ಸೇರಿವೆ. ಎಸ್‌ಸಿಗಳಿಗೆ ನೀಡುವ 20% ಮೀಸಲಾತಿಯಲ್ಲಿ 10% ದಷ್ಟು ಡಿಎಸ್‌ಸಿಗಳಿಗೆ ಮೀಸಲಿಡಲಾಗುವುದು ಎಂದು ಸರ್ಕಾರ ಹೇಳಿದೆ. ಆಗಸ್ಟ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆಯ ಮೊದಲು, ಹರಿಯಾಣದ ಎಸ್‌ಸಿ ಆಯೋಗವು ಸಮುದಾಯಗಳನ್ನು ಎರಡು ವರ್ಗಗಳಾಗಿ ವಿಂಗಡಿಸಲು ಶಿಫಾರಸು ಮಾಡಿತ್ತು.

ರಾಜ್ಯ ಸಚಿವ ಸಂಪುಟದ ಮೊದಲ ಸಭೆಯು ಪ್ರಸ್ತಾವನೆಯನ್ನು ಅಂಗೀಕರಿಸಿದೆ ಎಂದು ಸೈನಿ ಶುಕ್ರವಾರ ಘೋಷಿಸಿದ್ದಾರೆ. “ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಗಳನ್ನು ಎರಡು ವರ್ಗಗಳಾಗಿ ಉಪವರ್ಗೀಕರಣಗೊಳಿಸಲು ಇಂದು ಸಚಿವರ ಪರಿಷತ್ತು ನಿರ್ಧರಿಸಿದೆ.ಒಳ ಮೀಸಲಾತಿಯು ಇಂದಿನಿಂದ ಅನ್ವಯವಾಗಲಿದೆ” ಮುಖ್ಯಮಂತ್ರಿ ಸೈನಿ ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ 20% ಎಸ್‌ಸಿ ಮೀಸಲಾತಿಯಲ್ಲಿ ತಲಾ 50% ರಷ್ಟು ಎರಡು ವರ್ಗಗಳಿಗೆ ಒದಗಿಸಲು ಸಮುದಾಯವನ್ನು DSC ಗಳು ಮತ್ತು OSC ಗಳಾಗಿ ಉಪವರ್ಗೀಕರಿಸುವ ಆದೇಶದ ಅಧಿಸೂಚನೆಯನ್ನು ಮುಖ್ಯ ಕಾರ್ಯದರ್ಶಿ ಹೊರಡಿಸುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹರಿಯಾಣ ಸರ್ಕಾರವು 2020 ರಲ್ಲಿ ಹರಿಯಾಣ ಪರಿಶಿಷ್ಟ ಜಾತಿಗಳ ಕಾಯಿದೆಯನ್ನು ಜಾರಿಗೆ ತಂದಿದ್ದು, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ 20% ಸ್ಥಾನಗಳಲ್ಲಿ 50% ವಂಚಿತ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟಿದೆ.

ಆಗಸ್ಟ್ 8 ರಂದು, ಸೈನಿ ನೇತೃತ್ವದ ಈ ಹಿಂದಿನ ಮಂತ್ರಿ ಮಂಡಲ, ಬಿಜೆಪಿಯ ಮಾಜಿ ಶಾಸಕ ರವೀಂದರ್ ಬಲಿಯಾಲ ನೇತೃತ್ವದ ಹರಿಯಾಣ ಎಸ್‌ಸಿ ಆಯೋಗವನ್ನು ಉಲ್ಲೇಖಿಸಿ, ರಾಜ್ಯದಲ್ಲಿ ದಲಿತರಿಗೆ ಸಂಬಂಧಿಸಿದ ಮಾಹಿತಿಯನ್ನು ಅಧ್ಯಯನ ಮಾಡಲು ಮತ್ತು ಎಸ್‌ಸಿಗಳ ಒಳ ಮೀಸಲಾತಿ ಅನುಕೂಲವಾಗುವಂತೆ ಶಿಫಾರಸುಗಳನ್ನು ಮಾಡಿತ್ತು.

ಇದನ್ನೂ ಓದಿ: ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...