Homeಮುಖಪುಟಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ ಹರಿಯಾಣ ಸರ್ಕಾರ

ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ನಿರ್ಧರಿಸಿದ ಹರಿಯಾಣ ಸರ್ಕಾರ

- Advertisement -
- Advertisement -

ಹರಿಯಾಣದ ನೂತನ ಬಿಜೆಪಿಯ ನಯಾಬ್ ಸಿಂಗ್ ಸೈನಿ ಸರ್ಕಾರ ಪರಿಶಿಷ್ಟ ಜಾತಿ (ಎಸ್‌ಸಿ)ಯ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ನಿರ್ಧಾರನ್ನು ಶುಕ್ರವಾರ ಕೈಗೊಂಡಿದೆ. ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಎಸ್‌ಸಿ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ಮಹತ್ವದ ತೀರ್ಪನ್ನು ಜಾರಿಗೆ ತಂದ ಮೊದಲ ರಾಜ್ಯವಗಿ ಹರಿಯಾಣ ಹೊರಹೊಮ್ಮಿದೆ.

ಒಳ ಮೀಸಲಾತಿ ಜಾರಿ ಮಾಡುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ನಯಾಬ್ ಸಿಂಗ್, ತಮ್ಮ ಸರ್ಕಾರವು ಈ ಮೂಲಕ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಿದೆ ಎಂದು ಹೇಳಿದ್ದಾರೆ. ಹಿಂದುಳಿದಿರುವಿಕೆಯ ಆಧಾರದ ಮೇಲೆ ಎಸ್‌ಸಿ ಮತ್ತು ಎಸ್‌ಟಿ ಮೀಸಲಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡಲು ರಾಜ್ಯಗಳಿಗೆ ಸಾಂವಿಧಾನಿಕ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ಆಗಸ್ಟ್‌ನಲ್ಲಿ ತೀರ್ಪು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹರಿಯಾಣ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿ ವಂಚಿತ ಪರಿಶಿಷ್ಟ ಜಾತಿ (DSC) ಎಂದು ಕರೆಯುವ ಹೊಸ ವರ್ಗವನ್ನು ರಚಿಸಿದೆ. ಅದರಲ್ಲಿ 36 ಎಸ್‌ಸಿ ಜಾತಿಗಳು ಸೇರಿವೆ. ಎಸ್‌ಸಿಗಳಿಗೆ ನೀಡುವ 20% ಮೀಸಲಾತಿಯಲ್ಲಿ 10% ದಷ್ಟು ಡಿಎಸ್‌ಸಿಗಳಿಗೆ ಮೀಸಲಿಡಲಾಗುವುದು ಎಂದು ಸರ್ಕಾರ ಹೇಳಿದೆ. ಆಗಸ್ಟ್‌ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆಯ ಮೊದಲು, ಹರಿಯಾಣದ ಎಸ್‌ಸಿ ಆಯೋಗವು ಸಮುದಾಯಗಳನ್ನು ಎರಡು ವರ್ಗಗಳಾಗಿ ವಿಂಗಡಿಸಲು ಶಿಫಾರಸು ಮಾಡಿತ್ತು.

ರಾಜ್ಯ ಸಚಿವ ಸಂಪುಟದ ಮೊದಲ ಸಭೆಯು ಪ್ರಸ್ತಾವನೆಯನ್ನು ಅಂಗೀಕರಿಸಿದೆ ಎಂದು ಸೈನಿ ಶುಕ್ರವಾರ ಘೋಷಿಸಿದ್ದಾರೆ. “ಸುಪ್ರೀಂಕೋರ್ಟ್‌ನ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಗಳನ್ನು ಎರಡು ವರ್ಗಗಳಾಗಿ ಉಪವರ್ಗೀಕರಣಗೊಳಿಸಲು ಇಂದು ಸಚಿವರ ಪರಿಷತ್ತು ನಿರ್ಧರಿಸಿದೆ.ಒಳ ಮೀಸಲಾತಿಯು ಇಂದಿನಿಂದ ಅನ್ವಯವಾಗಲಿದೆ” ಮುಖ್ಯಮಂತ್ರಿ ಸೈನಿ ತಿಳಿಸಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ 20% ಎಸ್‌ಸಿ ಮೀಸಲಾತಿಯಲ್ಲಿ ತಲಾ 50% ರಷ್ಟು ಎರಡು ವರ್ಗಗಳಿಗೆ ಒದಗಿಸಲು ಸಮುದಾಯವನ್ನು DSC ಗಳು ಮತ್ತು OSC ಗಳಾಗಿ ಉಪವರ್ಗೀಕರಿಸುವ ಆದೇಶದ ಅಧಿಸೂಚನೆಯನ್ನು ಮುಖ್ಯ ಕಾರ್ಯದರ್ಶಿ ಹೊರಡಿಸುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹರಿಯಾಣ ಸರ್ಕಾರವು 2020 ರಲ್ಲಿ ಹರಿಯಾಣ ಪರಿಶಿಷ್ಟ ಜಾತಿಗಳ ಕಾಯಿದೆಯನ್ನು ಜಾರಿಗೆ ತಂದಿದ್ದು, ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟ 20% ಸ್ಥಾನಗಳಲ್ಲಿ 50% ವಂಚಿತ ಪರಿಶಿಷ್ಟ ಜಾತಿಗಳಿಗೆ ಮೀಸಲಿಟ್ಟಿದೆ.

ಆಗಸ್ಟ್ 8 ರಂದು, ಸೈನಿ ನೇತೃತ್ವದ ಈ ಹಿಂದಿನ ಮಂತ್ರಿ ಮಂಡಲ, ಬಿಜೆಪಿಯ ಮಾಜಿ ಶಾಸಕ ರವೀಂದರ್ ಬಲಿಯಾಲ ನೇತೃತ್ವದ ಹರಿಯಾಣ ಎಸ್‌ಸಿ ಆಯೋಗವನ್ನು ಉಲ್ಲೇಖಿಸಿ, ರಾಜ್ಯದಲ್ಲಿ ದಲಿತರಿಗೆ ಸಂಬಂಧಿಸಿದ ಮಾಹಿತಿಯನ್ನು ಅಧ್ಯಯನ ಮಾಡಲು ಮತ್ತು ಎಸ್‌ಸಿಗಳ ಒಳ ಮೀಸಲಾತಿ ಅನುಕೂಲವಾಗುವಂತೆ ಶಿಫಾರಸುಗಳನ್ನು ಮಾಡಿತ್ತು.

ಇದನ್ನೂ ಓದಿ: ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನ್ಯಾಯಾಲಯಕ್ಕೆ ಹಾಜರುಪಡಿಸದ ಪೊಲೀಸರು | ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಎಲ್ಗರ್ ಪರಿಷತ್ ಪ್ರಕರಣದ ಬಂಧಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...