Homeಮುಖಪುಟಆರೋಪಿ ಕುಕಿ ಸಮುದಾಯದವನು ಎಂಬ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯದ ಮಣಿಪುರದ ಬಿಜೆಪಿ ಸರ್ಕಾರ: ಸುಪ್ರೀಂ ಕೋರ್ಟ್...

ಆರೋಪಿ ಕುಕಿ ಸಮುದಾಯದವನು ಎಂಬ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯದ ಮಣಿಪುರದ ಬಿಜೆಪಿ ಸರ್ಕಾರ: ಸುಪ್ರೀಂ ಕೋರ್ಟ್ ಗರಂ

- Advertisement -
- Advertisement -

ಮಣಿಪುರ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬ ಕುಕಿ ಸಮುದಾಯಕ್ಕೆ ಸೇರಿದವನೆಂಬ ಕಾರಣಕ್ಕೆ ಆತನನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಧೋರಣೆ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಆಘಾತ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ರಜಾಕಾಲೀನ ಪೀಠ, ಮಣಿಪುರದ ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

“ಕ್ಷಮಿಸಿ ವಕೀಲರೇ, ನಾವು ಮಣಿಪುರ ಸರ್ಕಾರವನ್ನು ನಂಬುವುದಿಲ್ಲ. ನಮಗೆ ನಂಬಿಕೆ ಬರುತ್ತಿಲ್ಲ. ಕುಕಿ ಸಮುದಾಯದವರೆಂಬ ಕಾರಣಕ್ಕೆ ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಿಲ್ಲವೇ? ತುಂಬಾ ದುಃಖವಾಗುತ್ತಿದೆ. ಆತನ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಈಗ ನಿರ್ದೇಶಿಸುತ್ತಿದ್ದೇವೆ. ವೈದ್ಯಕೀಯ ವರದಿಯಲ್ಲಿ ಗಂಭೀರ ವಿಚಾರವೇನಾದರೂ ಕಂಡು ಬಂದರೆ ನಾವು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ, ಇದನ್ನು ನೆನಪಿಡಿ” ಎಂದು ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.

ವಿಚಾರಣಾಧೀನ ಕೈದಿಯ ವಿಚಾರಣೆ ಇನ್ನಷ್ಟೇ ಆರಂಭವಾಗಬೇಕಿದ್ದು. ಆತ ಪೈಲ್ಸ್‌, ಕ್ಷಯರೋಗ ಹಾಗೂ ವಿಪರೀತ ಬೆನ್ನು ನೋವಿನಿಂದ ಬಳಲುತ್ತಿರುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದ. ಆರೋಪಿಯ ಸೊಂಟದ ಭಾಗದಲ್ಲಿ ಮೂಳೆ ಸವೆತ ಉಂಟಾಗಿರುವುದನ್ನು ಕಳೆದ ನವೆಂಬರ್‌ನಲ್ಲಿ ಗಮನಿಸಿದ್ದ ಜೈಲು ವೈದ್ಯಾಧಿಕಾರಿಗಳು ಎಕ್ಸ್‌ ರೇಗೆ ಶಿಫಾರಸು ಮಾಡಿದ್ದರು. ಆದರೆ ಈ ಸೌಲಭ್ಯ ಜೈಲಿನಲ್ಲಿರಲಿಲ್ಲ.

ಆರೋಪಿಗೆ ಹೈಕೋರ್ಟ್‌ ಜಾಮೀನು ನೀಡುವ ವೇಳೆ ಆತ ಕುಕಿ ಸಮುದಾಯಕ್ಕೆ ಸೇರಿದವನಾದ್ದರಿಂದ ಆತನನ್ನು ಆಸ್ಪತ್ರೆಗೆ ಸ್ಥಳಾಂತರಿಸುವುದು ಕಾನೂನು ಮತ್ತು ಸುವ್ಯವಸ್ಥೆಗೆ ಅಪಾಯಕಾರಿಯಾಗುತ್ತದೆ ಎಂಬ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿಲ್ಲ ಎಂದು ಸರ್ಕಾರ ತಿಳಿಸಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌, ಆತನ ವೈದ್ಯಕೀಯ ತಪಾಸಣೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದೆ. ಅಲ್ಲದೆ ಅದಕ್ಕೆ ತಗಲುವ ಎಲ್ಲಾ ವೆಚ್ಚವನ್ನೂ ಸರ್ಕಾರವೇ ಭರಿಸಬೇಕು. ವೈದ್ಯಕೀಯ ವರದಿಯನ್ನು ಜುಲೈ 15 ಅಥವಾ ಅದಕ್ಕಿಂತ ಮೊದಲು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.

ಗುವಾಹಟಿ ಮೆಡಿಕಲ್ ಕಾಲೇಜಿನಲ್ಲಿ ಟಿಬಿ, ಪೈಲ್ಸ್ ಸೇರಿದಂತೆ ಎಲ್ಲಾ ರೀತಿಯ ತಪಾಸಣೆಗಳನ್ನು ಆರೋಪಿಗೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದನ್ನೂ ಓದಿ : ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ: ಹೇಮಂತ್ ಸೊರೇನ್ ಮತ್ತೆ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...