Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

- Advertisement -
- Advertisement -

ಉತ್ತರಪ್ರದೇಶದಲ್ಲಿ ಹೋಮ್‌ವರ್ಕ್ ಮಾಡದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡದಿರುವ ಉತ್ತರಪ್ರದೇಶ ಸರಕಾರವನ್ನು ಸುಪ್ರೀಂಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ ಈ ಮೊದಲು ಕೂಡ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್‌ ಮಾಡಲು ವ್ಯವಸ್ಥೆ ಮಾಡುವಂತೆ ಸೂಚಿಸಿತ್ತು. ಆದರೆ ಯೋಗಿ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಡೆಗಣಿಸಿರುವುದು ಕಂಡು ಬಂದಿದೆ.

ನಾವು ಇತ್ತೀಚಿನ TISS [ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್] ವರದಿಯನ್ನು ಪರಿಶೀಲಿಸಿದ್ದೇವೆ, ವರದಿಯು ಘಟನೆಯಲ್ಲಿ ಸಂತ್ರಸ್ತ ಬಾಲಕನಿಗೆ ಮತ್ತು ಇತರ ಸಹಪಾಠಿಗಳಿಗೆ ಕೌನ್ಸಿಲಿಂಗ್‌ಗೆ ಸೂಚಿಸಿದೆ.  ಆದರೆ ರಾಜ್ಯ ಸರಕಾರ ಈ ಬಗ್ಗೆ ಏನನ್ನೂ ಮಾಡಿಲ್ಲ, ಈಗ ತಡವಾಗಿದೆ ಎಂದು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಹೇಳಿದೆ.

ಈ ಕುರಿತು ಹೆಚ್ಚಿನ ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿದ ನ್ಯಾಯಾಲಯ, ಘಟನೆಯ ಭಾಗವಾಗಿರುವ ಮಕ್ಕಳಿಗೆ ಕೌನ್ಸೆಲಿಂಗ್ ನೀಡಲು ಮತ್ತು ಎರಡು ವಾರಗಳೊಳಗೆ ಈ ಕುರಿತು ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಉತ್ತರಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಈ ಕುರಿತು ಕೋರ್ಟ್‌ಗೆ ಪ್ರತಿಕ್ರಿಯಿಸಿದ್ದು, ಎರಡು ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡಲು ಸ್ವಯಂಪ್ರೇರಿತವಾಗಿ ಮುಂದೆ ಬಂದಿದೆ ಎಂದು ತಿಳಿಸಿದ್ದಾರೆ.

ಏನಿದು ಘಟನೆ?

2023ರ ಆಗಸ್ಟ್ ಕೊನೆಯ ವಾರದಲ್ಲಿ ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ  ಶಿಕ್ಷಕಿ ತೃಪ್ತಿ ತ್ಯಾಗಿ ಕಪಾಳಮೋಕ್ಷ ಮಾಡಲು  ಇತರ ಸಹಪಠಿಗಳಿಗೆ ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಶಿಕ್ಷಕಿ ವಿಡಿಯೋದಲ್ಲಿ ಬಾಲಕನ ಬಗ್ಗೆ ಕೋಮುವಾದಿ ಹೇಳಿಕೆ ನೀಡಿರುವುದು ಕೂಡ ಸೆರೆಯಾಗಿತ್ತು. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾದಂತಹ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಇಂತಹ ಘಟನೆಗಳಿಗೆ ಬಿಜೆಪಿ ಬಿತ್ತಿರುವ ದ್ವೇಷ ಮತ್ತು ಕೋಮು ವಾತಾವರಣವೇ ಕಾರಣ ಎಂದು ಟೀಕಿಸಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದರು. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ. ಬಾಲಕನಿಗೆ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ನದೀಮ್ ಹೇಳಿದ್ದರು.

ಈ ಬಗ್ಗೆ ಸಂತ್ರಸ್ತ ಬಾಲಕ ಮತ್ತು ಆತನ  ಸಹಪಾಠಿಗಳಿಗೆ ಕೌನ್ಸೆಲಿಂಗ್ ಮಾಡುವ ಕುರಿತು ಸೂಚಿಸಲು ನ್ಯಾಯಾಲಯವು TISS ಮುಂಬೈ ಸಂಸ್ಥೆಯನ್ನು ನೇಮಿಸಿತ್ತು. ಕಳೆದ ವರ್ಷ ನವೆಂಬರ್ 6ರಂದು ಬಾಲಕನನ್ನು ಖಾಸಗಿ ಶಾಲೆಗೆ ಸೇರಿಸಲು ಅನುಕೂಲವಾಗುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಅವರು ಪ್ರಕರಣದ ತನಿಖೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಘಟನೆ ಬಳಿಕ ಶಾಲಾ ಆಡಳಿತ ಮಂಡಳಿಗೆ ಈ ಕುರಿತು ಶಿಕ್ಷಣ ಇಲಾಖೆ ನೊಟೀಸ್ ಜಾರಿಗೊಳಿಸಿ ಶಾಲೆಯನ್ನು ಮುಚ್ಚುವಂತೆ ಸೂಚಿಸಿತ್ತು. ಇದಲ್ಲದೆ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಸ್ಥಳೀಯ ಶಾಲೆಗೆ ಸೇರಿಸಬೇಕು, ಶಾಲೆ ಸಧ್ಯ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿತ್ತು.

ಇದನ್ನು ಓದಿ: ಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...