Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

- Advertisement -
- Advertisement -

ಉತ್ತರಪ್ರದೇಶದಲ್ಲಿ ಹೋಮ್‌ವರ್ಕ್ ಮಾಡದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡದಿರುವ ಉತ್ತರಪ್ರದೇಶ ಸರಕಾರವನ್ನು ಸುಪ್ರೀಂಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ ಈ ಮೊದಲು ಕೂಡ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್‌ ಮಾಡಲು ವ್ಯವಸ್ಥೆ ಮಾಡುವಂತೆ ಸೂಚಿಸಿತ್ತು. ಆದರೆ ಯೋಗಿ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಡೆಗಣಿಸಿರುವುದು ಕಂಡು ಬಂದಿದೆ.

ನಾವು ಇತ್ತೀಚಿನ TISS [ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್] ವರದಿಯನ್ನು ಪರಿಶೀಲಿಸಿದ್ದೇವೆ, ವರದಿಯು ಘಟನೆಯಲ್ಲಿ ಸಂತ್ರಸ್ತ ಬಾಲಕನಿಗೆ ಮತ್ತು ಇತರ ಸಹಪಾಠಿಗಳಿಗೆ ಕೌನ್ಸಿಲಿಂಗ್‌ಗೆ ಸೂಚಿಸಿದೆ.  ಆದರೆ ರಾಜ್ಯ ಸರಕಾರ ಈ ಬಗ್ಗೆ ಏನನ್ನೂ ಮಾಡಿಲ್ಲ, ಈಗ ತಡವಾಗಿದೆ ಎಂದು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಹೇಳಿದೆ.

ಈ ಕುರಿತು ಹೆಚ್ಚಿನ ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿದ ನ್ಯಾಯಾಲಯ, ಘಟನೆಯ ಭಾಗವಾಗಿರುವ ಮಕ್ಕಳಿಗೆ ಕೌನ್ಸೆಲಿಂಗ್ ನೀಡಲು ಮತ್ತು ಎರಡು ವಾರಗಳೊಳಗೆ ಈ ಕುರಿತು ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಉತ್ತರಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಈ ಕುರಿತು ಕೋರ್ಟ್‌ಗೆ ಪ್ರತಿಕ್ರಿಯಿಸಿದ್ದು, ಎರಡು ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡಲು ಸ್ವಯಂಪ್ರೇರಿತವಾಗಿ ಮುಂದೆ ಬಂದಿದೆ ಎಂದು ತಿಳಿಸಿದ್ದಾರೆ.

ಏನಿದು ಘಟನೆ?

2023ರ ಆಗಸ್ಟ್ ಕೊನೆಯ ವಾರದಲ್ಲಿ ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ  ಶಿಕ್ಷಕಿ ತೃಪ್ತಿ ತ್ಯಾಗಿ ಕಪಾಳಮೋಕ್ಷ ಮಾಡಲು  ಇತರ ಸಹಪಠಿಗಳಿಗೆ ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಶಿಕ್ಷಕಿ ವಿಡಿಯೋದಲ್ಲಿ ಬಾಲಕನ ಬಗ್ಗೆ ಕೋಮುವಾದಿ ಹೇಳಿಕೆ ನೀಡಿರುವುದು ಕೂಡ ಸೆರೆಯಾಗಿತ್ತು. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾದಂತಹ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಇಂತಹ ಘಟನೆಗಳಿಗೆ ಬಿಜೆಪಿ ಬಿತ್ತಿರುವ ದ್ವೇಷ ಮತ್ತು ಕೋಮು ವಾತಾವರಣವೇ ಕಾರಣ ಎಂದು ಟೀಕಿಸಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದರು. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ. ಬಾಲಕನಿಗೆ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ನದೀಮ್ ಹೇಳಿದ್ದರು.

ಈ ಬಗ್ಗೆ ಸಂತ್ರಸ್ತ ಬಾಲಕ ಮತ್ತು ಆತನ  ಸಹಪಾಠಿಗಳಿಗೆ ಕೌನ್ಸೆಲಿಂಗ್ ಮಾಡುವ ಕುರಿತು ಸೂಚಿಸಲು ನ್ಯಾಯಾಲಯವು TISS ಮುಂಬೈ ಸಂಸ್ಥೆಯನ್ನು ನೇಮಿಸಿತ್ತು. ಕಳೆದ ವರ್ಷ ನವೆಂಬರ್ 6ರಂದು ಬಾಲಕನನ್ನು ಖಾಸಗಿ ಶಾಲೆಗೆ ಸೇರಿಸಲು ಅನುಕೂಲವಾಗುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಅವರು ಪ್ರಕರಣದ ತನಿಖೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಘಟನೆ ಬಳಿಕ ಶಾಲಾ ಆಡಳಿತ ಮಂಡಳಿಗೆ ಈ ಕುರಿತು ಶಿಕ್ಷಣ ಇಲಾಖೆ ನೊಟೀಸ್ ಜಾರಿಗೊಳಿಸಿ ಶಾಲೆಯನ್ನು ಮುಚ್ಚುವಂತೆ ಸೂಚಿಸಿತ್ತು. ಇದಲ್ಲದೆ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಸ್ಥಳೀಯ ಶಾಲೆಗೆ ಸೇರಿಸಬೇಕು, ಶಾಲೆ ಸಧ್ಯ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿತ್ತು.

ಇದನ್ನು ಓದಿ: ಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...