Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಸುಪ್ರೀಂ ನಿರ್ದೇಶನವನ್ನು ಕಡೆಗಣಿಸಿದ ಯೋಗಿ ಸರಕಾರ!

- Advertisement -
- Advertisement -

ಉತ್ತರಪ್ರದೇಶದಲ್ಲಿ ಹೋಮ್‌ವರ್ಕ್ ಮಾಡದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಶಿಕ್ಷಕಿ ತೃಪ್ತಿ ತ್ಯಾಗಿ ಸೂಚಿಸಿದ ಪ್ರಕರಣದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡದಿರುವ ಉತ್ತರಪ್ರದೇಶ ಸರಕಾರವನ್ನು ಸುಪ್ರೀಂಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂಕೋರ್ಟ್‌ ಈ ಮೊದಲು ಕೂಡ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್‌ ಮಾಡಲು ವ್ಯವಸ್ಥೆ ಮಾಡುವಂತೆ ಸೂಚಿಸಿತ್ತು. ಆದರೆ ಯೋಗಿ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕಡೆಗಣಿಸಿರುವುದು ಕಂಡು ಬಂದಿದೆ.

ನಾವು ಇತ್ತೀಚಿನ TISS [ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್] ವರದಿಯನ್ನು ಪರಿಶೀಲಿಸಿದ್ದೇವೆ, ವರದಿಯು ಘಟನೆಯಲ್ಲಿ ಸಂತ್ರಸ್ತ ಬಾಲಕನಿಗೆ ಮತ್ತು ಇತರ ಸಹಪಾಠಿಗಳಿಗೆ ಕೌನ್ಸಿಲಿಂಗ್‌ಗೆ ಸೂಚಿಸಿದೆ.  ಆದರೆ ರಾಜ್ಯ ಸರಕಾರ ಈ ಬಗ್ಗೆ ಏನನ್ನೂ ಮಾಡಿಲ್ಲ, ಈಗ ತಡವಾಗಿದೆ ಎಂದು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠ ಹೇಳಿದೆ.

ಈ ಕುರಿತು ಹೆಚ್ಚಿನ ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿದ ನ್ಯಾಯಾಲಯ, ಘಟನೆಯ ಭಾಗವಾಗಿರುವ ಮಕ್ಕಳಿಗೆ ಕೌನ್ಸೆಲಿಂಗ್ ನೀಡಲು ಮತ್ತು ಎರಡು ವಾರಗಳೊಳಗೆ ಈ ಕುರಿತು ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಉತ್ತರಪ್ರದೇಶದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಈ ಕುರಿತು ಕೋರ್ಟ್‌ಗೆ ಪ್ರತಿಕ್ರಿಯಿಸಿದ್ದು, ಎರಡು ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮಾಡಲು ಸ್ವಯಂಪ್ರೇರಿತವಾಗಿ ಮುಂದೆ ಬಂದಿದೆ ಎಂದು ತಿಳಿಸಿದ್ದಾರೆ.

ಏನಿದು ಘಟನೆ?

2023ರ ಆಗಸ್ಟ್ ಕೊನೆಯ ವಾರದಲ್ಲಿ ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಎಂಟು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ  ಶಿಕ್ಷಕಿ ತೃಪ್ತಿ ತ್ಯಾಗಿ ಕಪಾಳಮೋಕ್ಷ ಮಾಡಲು  ಇತರ ಸಹಪಠಿಗಳಿಗೆ ಸೂಚಿಸುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಶಿಕ್ಷಕಿ ವಿಡಿಯೋದಲ್ಲಿ ಬಾಲಕನ ಬಗ್ಗೆ ಕೋಮುವಾದಿ ಹೇಳಿಕೆ ನೀಡಿರುವುದು ಕೂಡ ಸೆರೆಯಾಗಿತ್ತು. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕವಾದಂತಹ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ಹೆಚ್ಚಿನ ಸಂಖ್ಯೆಯ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಇಂತಹ ಘಟನೆಗಳಿಗೆ ಬಿಜೆಪಿ ಬಿತ್ತಿರುವ ದ್ವೇಷ ಮತ್ತು ಕೋಮು ವಾತಾವರಣವೇ ಕಾರಣ ಎಂದು ಟೀಕಿಸಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸಂಚಲನವನ್ನು ಮೂಡಿಸಿತ್ತು. ಬಳಿಕ ಶಿಕ್ಷಕಿಯ ವಿರುದ್ಧ ಮುಜಪ್ಫರನಗರ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದರು.

ಬಾಲಕನ ಸೋದರ ಸಂಬಂಧಿ ಮೊಹಮ್ಮದ್ ನದೀಮ್ (25) ಎನ್ನುವವರು ಈ ವಿಡಿಯೋವನ್ನು ಚಿತ್ರೀಕರಿಸಿದ್ದರು. ಅವರು ಬೇರೆ ಯಾವುದೋ ಕೆಲಸಕ್ಕೆಂದು ಶಾಲೆಗೆ ಹೋಗಿದ್ದರು ಆ ವೇಳೆ ಈ ಘಟನೆ ನಡೆಯುತ್ತಿದ್ದಾಗ ವಿಡಿಯೋ ಚಿತ್ರಿಕರಿಸಿದ್ದಾರೆ ಎಂದು ಹೇಳಿದ್ದಾರೆ. ಬಾಲಕನಿಗೆ ಪ್ರತ್ಯೇಕವಾಗಿ ನಿಲ್ಲಿಸಲಾಗಿತ್ತು, ಶಿಕ್ಷಕರು ಆದೇಶಿಸಿದಂತೆ ಅವನ ಸಹಪಾಠಿಗಳು ಕಪಾಳಮೋಕ್ಷ ಮಾಡುವುದನ್ನು ನಾನು ನೋಡಿದೆ. ಆಗ ನಾನು ಯಾರ ಗಮನಕ್ಕೂ ಬಾರದಂತೆ ವಿಡಿಯೋ ಮಾಡಿದೆ. ಆ ಶಿಕ್ಷಕಿ ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದರು ಎಂದು ನದೀಮ್ ಹೇಳಿದ್ದರು.

ಈ ಬಗ್ಗೆ ಸಂತ್ರಸ್ತ ಬಾಲಕ ಮತ್ತು ಆತನ  ಸಹಪಾಠಿಗಳಿಗೆ ಕೌನ್ಸೆಲಿಂಗ್ ಮಾಡುವ ಕುರಿತು ಸೂಚಿಸಲು ನ್ಯಾಯಾಲಯವು TISS ಮುಂಬೈ ಸಂಸ್ಥೆಯನ್ನು ನೇಮಿಸಿತ್ತು. ಕಳೆದ ವರ್ಷ ನವೆಂಬರ್ 6ರಂದು ಬಾಲಕನನ್ನು ಖಾಸಗಿ ಶಾಲೆಗೆ ಸೇರಿಸಲು ಅನುಕೂಲವಾಗುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಮಹಾತ್ಮ ಗಾಂಧಿ ಅವರ ಮೊಮ್ಮಗ ತುಷಾರ್ ಗಾಂಧಿ ಅವರು ಪ್ರಕರಣದ ತನಿಖೆಯನ್ನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಘಟನೆ ಬಳಿಕ ಶಾಲಾ ಆಡಳಿತ ಮಂಡಳಿಗೆ ಈ ಕುರಿತು ಶಿಕ್ಷಣ ಇಲಾಖೆ ನೊಟೀಸ್ ಜಾರಿಗೊಳಿಸಿ ಶಾಲೆಯನ್ನು ಮುಚ್ಚುವಂತೆ ಸೂಚಿಸಿತ್ತು. ಇದಲ್ಲದೆ ಶಾಲೆಯಲ್ಲಿ ಕಲಿಯುತ್ತಿದ್ದ ಮಕ್ಕಳನ್ನು ಸ್ಥಳೀಯ ಶಾಲೆಗೆ ಸೇರಿಸಬೇಕು, ಶಾಲೆ ಸಧ್ಯ ಮುಚ್ಚುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದು ಹೇಳಿತ್ತು.

ಇದನ್ನು ಓದಿ: ಮೋದಿ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್‌ ಬಿಡುಗಡೆ: 8 ಪ್ರಮುಖ ದೋಷಾರೋಪಗಳ ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...