Homeಮುಖಪುಟಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10...

ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಹಾಗೂ ಇತರರು ಸೇರಿ ಆರು ಜನರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದಿರುವ ಸುಪ್ರೀಂ ಕೋರ್ಟ್, ಸಂತ್ರಸ್ತರಿಗೆ ಆರು ವಾರಗಳಲ್ಲಿ ತಲಾ 10 ಲಕ್ಷ ರೂಪಾಯಿಗಳನ್ನು ಪಾವತಿಸಲು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ಮೇಲ್ಮನವಿ ಸಲ್ಲಿಸಿದವರಿಗೆ ಮನೆ ಕೆಡವುವ ಮುನ್ನ ತಮ್ಮ ನಿಲುವನ್ನು ವಿವರಿಸಲು ಪ್ರಾಧಿಕಾರ ಸಮಂಜಸವಾದ ಅವಕಾಶ ನೀಡಿರಲಿಲ್ಲ” ಎಂದು ಹೇಳಿದೆ.

“ಧ್ವಂಸ ಪ್ರಕ್ರಿಯೆಯನ್ನು ‘ಉಗ್ರ’ ರೀತಿಯಲ್ಲಿ ನಡೆಸಲಾಗಿದೆ. ಈ ದೇಶದಲ್ಲಿ ಕಾನೂನಿನ ಆಳ್ವಿಕೆ ಇದೆ. ನಾಗರಿಕರ ಮನೆಗಳನ್ನು ಈ ರೀತಿ ಕೆಡವಲು ಸಾಧ್ಯವಿಲ್ಲ” ಎಂದಿದೆ.

“ಆಶ್ರಯ ಅಥವಾ ವಸತಿ ಹಕ್ಕು ಭಾರತದ ಸಂವಿಧಾನದ 21ನೇ ವಿಧಿಯ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಅಧಿಕಾರಿಗಳು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ ಅಭಿವೃದ್ಧಿ ಪ್ರಾಧಿಕಾರ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ನ್ಯಾಯಾಲಯವು ಸೂಚಿಸಿದೆ.

ಮನೆಗಳನ್ನು ಧ್ವಂಸ ನಡೆಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿದೆ. ಅರ್ಜಿದಾರರಲ್ಲಿ ಪ್ರಾಧ್ಯಾಪಕರು, ವಕೀಲರು ಮತ್ತು ನಾಲ್ವರು ಸೇರಿದ್ದಾರೆ.

ಕಾನೂನುಬಾಹಿರವಾಗಿ ಮನೆಗಳನ್ನು ಕೆಡವಿದ್ದಕ್ಕೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮತ್ತು ಪ್ರಯಾಗ್‌ರಾಜ್‌ ಅಭಿವೃದ್ದಿ ಪ್ರಾಧಿಕಾರವನ್ನು ಮಾರ್ಚ್‌ 6ರಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ, ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿತ್ತು. ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿತ್ತು.

“ಸಂವಿಧಾನದಲ್ಲಿ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದರು.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದರು. “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದರು.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈಗ ಬಾಕಿಯಿರುವುದು” ಎಂದು ಹೇಳಿದ್ದರು.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಹಾಗೂ ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಿಚಾರಣೆ ವೇಳೆ ವಾದಿಸಿದ್ದರು.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದರು.

ಆದರೆ, ಅರ್ಜಿದಾರರಿಗೆ ನೋಟಿಸ್‌ಗೆ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದರು. ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದರು.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿತ್ತು.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿತ್ತು ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ..ಹೊಸ ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...