Homeಮುಖಪುಟಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10...

ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

- Advertisement -
- Advertisement -

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಹಾಗೂ ಇತರರು ಸೇರಿ ಆರು ಜನರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದಿರುವ ಸುಪ್ರೀಂ ಕೋರ್ಟ್, ಸಂತ್ರಸ್ತರಿಗೆ ಆರು ವಾರಗಳಲ್ಲಿ ತಲಾ 10 ಲಕ್ಷ ರೂಪಾಯಿಗಳನ್ನು ಪಾವತಿಸಲು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ಮೇಲ್ಮನವಿ ಸಲ್ಲಿಸಿದವರಿಗೆ ಮನೆ ಕೆಡವುವ ಮುನ್ನ ತಮ್ಮ ನಿಲುವನ್ನು ವಿವರಿಸಲು ಪ್ರಾಧಿಕಾರ ಸಮಂಜಸವಾದ ಅವಕಾಶ ನೀಡಿರಲಿಲ್ಲ” ಎಂದು ಹೇಳಿದೆ.

“ಧ್ವಂಸ ಪ್ರಕ್ರಿಯೆಯನ್ನು ‘ಉಗ್ರ’ ರೀತಿಯಲ್ಲಿ ನಡೆಸಲಾಗಿದೆ. ಈ ದೇಶದಲ್ಲಿ ಕಾನೂನಿನ ಆಳ್ವಿಕೆ ಇದೆ. ನಾಗರಿಕರ ಮನೆಗಳನ್ನು ಈ ರೀತಿ ಕೆಡವಲು ಸಾಧ್ಯವಿಲ್ಲ” ಎಂದಿದೆ.

“ಆಶ್ರಯ ಅಥವಾ ವಸತಿ ಹಕ್ಕು ಭಾರತದ ಸಂವಿಧಾನದ 21ನೇ ವಿಧಿಯ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಅಧಿಕಾರಿಗಳು ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ ಅಭಿವೃದ್ಧಿ ಪ್ರಾಧಿಕಾರ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ನ್ಯಾಯಾಲಯವು ಸೂಚಿಸಿದೆ.

ಮನೆಗಳನ್ನು ಧ್ವಂಸ ನಡೆಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿದೆ. ಅರ್ಜಿದಾರರಲ್ಲಿ ಪ್ರಾಧ್ಯಾಪಕರು, ವಕೀಲರು ಮತ್ತು ನಾಲ್ವರು ಸೇರಿದ್ದಾರೆ.

ಕಾನೂನುಬಾಹಿರವಾಗಿ ಮನೆಗಳನ್ನು ಕೆಡವಿದ್ದಕ್ಕೆ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮತ್ತು ಪ್ರಯಾಗ್‌ರಾಜ್‌ ಅಭಿವೃದ್ದಿ ಪ್ರಾಧಿಕಾರವನ್ನು ಮಾರ್ಚ್‌ 6ರಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ಪೀಠ, ಸರ್ಕಾರದ ಕ್ರಮಕ್ಕೆ ಅಸಮ್ಮತಿ ವ್ಯಕ್ತಪಡಿಸಿತ್ತು. ಇಂತಹ ಕ್ರಮಗಳು ‘ಆಘಾತಕಾರಿ ಮತ್ತು ತಪ್ಪು ಸಂದೇಶವ’ನ್ನು ರವಾನಿಸುತ್ತವೆ ಎಂದು ಹೇಳಿತ್ತು.

“ಸಂವಿಧಾನದಲ್ಲಿ ವಿಧಿ 21 ಎಂದು ಕರೆಯಲ್ಪಡುವ ಒಂದು ವಿಷಯವಿದೆ” ಎಂದು ನ್ಯಾಯಮೂರ್ತಿ ಓಕಾ ಕಠುವಾಗಿ ಹೇಳಿದ್ದರು.

ಧ್ವಂಸ ಕಾರ್ಯಾಚರಣೆಗೆ ಮುನ್ನ ಅನುಸರಿಸಬೇಕಾದ ಕಾರ್ಯವಿಧಾನವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ತೀರ್ಪನ್ನು ನ್ಯಾಯಮೂರ್ತಿ ಓಕಾ ಅವರು ಉಲ್ಲೇಖಿಸಿದ್ದರು. “ನಿಮ್ಮ ಬುಲ್ಡೋಝರ್ ನ್ಯಾಯಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಮನ್ವಯ ಪೀಠ ತೀರ್ಪು ನೀಡಿದೆ” ಎಂದಿದ್ದರು.

ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಮೂರ್ತಿ ಓಕಾ ಅವರು, “ಕೆಡವಲಾದ ಕಟ್ಟಡಗಳನ್ನು ನಿಮ್ಮದೇ ಖರ್ಚಿನಲ್ಲಿ ಮರು ನಿರ್ಮಿಸಲು ಸರ್ಕಾರಕ್ಕೆ ಆದೇಶಿಸುತ್ತೇವೆ. ಅದೊಂದೆ ಮಾರ್ಗ ಈಗ ಬಾಕಿಯಿರುವುದು” ಎಂದು ಹೇಳಿದ್ದರು.

ಸರ್ಕಾರದ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ ನಂತರ ವಕೀಲ ಝುಲ್ಫಿಕರ್ ಹೈದರ್, ಪ್ರಾಧ್ಯಾಪಕ ಅಲಿ ಅಹ್ಮದ್, ಇಬ್ಬರು ವಿಧವೆಯರು ಹಾಗೂ ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

“ಶನಿವಾರ ನೋಟಿಸ್ ನೀಡಿ, ಭಾನುವಾರ ಮನೆಗಳನ್ನು ಸರ್ಕಾರ ಧ್ವಂಸಗೊಳಿಸಿದೆ. ಇದನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡಿಲ್ಲ. ಅರ್ಜಿದಾರರು ಭೂಮಿಯ ಕಾನೂನುಬದ್ಧ ಗುತ್ತಿಗೆದಾರರು. ಅವರ ಗುತ್ತಿಗೆ ಹಕ್ಕುಗಳನ್ನು ಫ್ರೀಹೋಲ್ಡ್ ಆಸ್ತಿಯಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು” ಎಂದು ಅರ್ಜಿದಾರ ಪರ ವಕೀಲರು ವಿಚಾರಣೆ ವೇಳೆ ವಾದಿಸಿದ್ದರು.

“ಸರ್ಕಾರ ಅರ್ಜಿದಾರರ ಜಾಗವನ್ನು 2023ರಲ್ಲಿ ಕೊಲ್ಲಲ್ಪಟ್ಟ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ರೊಂದಿಗೆ ತಪ್ಪಾಗಿ ಜೋಡಿಸಿದೆ” ಎಂದು ಆರೋಪಿಸಿದ್ದರು.

ಆದರೆ, ಅರ್ಜಿದಾರರಿಗೆ ನೋಟಿಸ್‌ಗೆ ಉತ್ತರ ನೀಡಲು ಸಾಕಷ್ಟು ಸಮಯ ಇತ್ತು ಎಂದು ಸರ್ಕಾರದ ಪರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ವಾದ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾ. ಓಕಾ ಅವರು, ನೋಟಿಸ್ ಜಾರಿ ಮಾಡಿದ ವಿಧಾನವನ್ನು ಪ್ರಶ್ನಿಸಿದ್ದರು. ನೋಟಿಸ್ ಕಳುಹಿಸುವ ವಿಧಾನದ ಕುರಿತ ರಾಜ್ಯದ ವಾದದಲ್ಲಿ ಬದ್ದತೆ ಕೊರೆತೆಯನ್ನು ಎತ್ತಿ ತೋರಿಸಿದ್ದರು.

ಅಟಾರ್ನಿ ಜನರಲ್ ಈ ಪ್ರಕರಣವನ್ನು ಹೈಕೋರ್ಟ್‌ಗೆ ಹಿಂತಿರುಗಿಸಬೇಕೆಂದು ಮನವಿ ಮಾಡಿದ್ದರು. ಅದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಪ್ರಕರಣವನ್ನು ವಾಪಸ್ ಕಳುಹಿಸುವುದರಿಂದ ಅನಗತ್ಯ ವಿಳಂಬವಾಗುತ್ತದೆ ಎಂದು ಹೇಳಿತ್ತು.

“ಅರ್ಜಿದಾರರು ತಾವು ಅತಿಕ್ರಮಣಕಾರರಲ್ಲ, ಬದಲಾಗಿ ತಮ್ಮ ಗುತ್ತಿಗೆ ಹಕ್ಕನ್ನು ಫ್ರೀಹೋಲ್ಡಾಗಿ ಪರಿವರ್ತಿಸಲು ಅರ್ಜಿ ಸಲ್ಲಿಸಿದ್ದರು. ಮಾರ್ಚ್ 1, 2021ರಂದು ಅವರ ಮನೆಗಳನ್ನು ಕೆಡವಲು ನೋಟಿಸ್ ಜಾರಿ ಮಾಡಲಾಗಿದ್ದು, ಮಾರ್ಚ್ 6, 2021 ರಂದು ಅದು ಅವರಿಗೆ ತಲುಪಿದೆ. ಮರುದಿನ ಮಾರ್ಚ್ 7, 2021ರಂದು ಅವರ ಮನೆಗಳನ್ನು ಕೆಡವಲಾಗಿದೆ. ಯುಪಿ ನಗರ ಯೋಜನೆ ಮತ್ತು ಅಭಿವೃದ್ಧಿ ಕಾಯ್ದೆಯ ಸೆಕ್ಷನ್ 27(2) ರ ಅಡಿಯಲ್ಲಿ ಮೇಲ್ಮನವಿ ಪ್ರಾಧಿಕಾರದ ಮುಂದೆ ಧ್ವಂಸ ಕಾರ್ಯಾಚರಣೆ ಕುರಿತು ಪ್ರಶ್ನಿಸಲು ಅವರಿಗೆ ಸರಿಯಾದ ಅವಕಾಶ ನೀಡಿಲ್ಲ. ಅರ್ಜಿದಾರರಲ್ಲಿ ವಕೀಲರು ಮತ್ತು ಪ್ರಾಧ್ಯಾಪಕರು ಸೇರಿದ್ದಾರೆ, ಅವರ ಸಂಪೂರ್ಣ ಗ್ರಂಥಾಲಯವನ್ನು ಕೆಡವಲಾಗಿದೆ. ಅಲಹಾಬಾದ್ ಹೈಕೋರ್ಟ್ ಸೆಪ್ಟೆಂಬರ್ 15, 2020ರಂದು ಬರೆದ ಪತ್ರವನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿದೆ. ಅವರಿಗೆ ಅದನ್ನು ಸಮರ್ಥಿಸಿಕೊಳ್ಳಲೂ ಅವಕಾಶ ನೀಡಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

ಈ ಪ್ರಕರಣ ಪ್ರಯಾಗ್‌ರಾಜ್‌ನಲ್ಲಿರುವ ನಜುಲ್ ಪ್ಲಾಟ್‌ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದೆ. ವಿವಾದಿತ ಭೂಮಿಯನ್ನು 1906 ರಲ್ಲಿ ಗುತ್ತಿಗೆಗೆ ನೀಡಲಾಗಿತ್ತು. ಗುತ್ತಿಗೆ 1996 ರಲ್ಲಿ ಮುಕ್ತಾಯಗೊಂಡಿತ್ತು. ಅದನ್ನು ಫ್ರೀಹೋಲ್ಡ್ ಪರಿವರ್ತನೆಗಾಗಿ ಸಲ್ಲಿಸಿದ್ದ ಅರ್ಜಿಯನ್ನು 2015 ಮತ್ತು 2019 ರಲ್ಲಿ ತಿರಸ್ಕರಿಸಲಾಗಿದೆ. ಭೂಮಿಯನ್ನು ಸಾರ್ವಜನಿಕ ಬಳಕೆಗಾಗಿ ಮೀಸಲಿಡಲಾಗಿದೆ ಎಂದು ಸರ್ಕಾರ ವಾದಿಸಿತ್ತು ಮತ್ತು ಅರ್ಜಿದಾರರು ತಮ್ಮ ವಹಿವಾಟುಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಇಲ್ಲದ ಕಾರಣ ಅವರಿಗೆ ಯಾವುದೇ ಕಾನೂನು ಹಕ್ಕುಗಳಿಲ್ಲ. ಅಲ್ಲಿನ ನಿರ್ಮಾಣಗಳು ಅನಧಿಕೃತವಾಗಿವೆ ಎಂದು ತೀರ್ಮಾನಿಸಿ ಹೈಕೋರ್ಟ್ ಅರ್ಜಿದಾರರ  ಅರ್ಜಿಗಳನ್ನು ವಜಾಗೊಳಿಸಿತ್ತು.

ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ..ಹೊಸ ಅರ್ಜಿ ಪರಿಗಣಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...