Homeಮುಖಪುಟಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ...

ಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ ಶೇ.10 : ಕೇಂದ್ರ ಸರ್ಕಾರ

- Advertisement -
- Advertisement -

ಐಐಟಿಗಳು ಮತ್ತು ಐಐಎಂಗಳು ಮೀಸಲು ವರ್ಗಗಳಿಂದ ಅಧ್ಯಾಪಕರನ್ನು ಭರ್ತಿ ಮಾಡಿಕೊಳ್ಳಲು ಅಭಿಯಾನವನ್ನು ಹಮ್ಮಿಕೊಂಡಾಗಿನಿಂದ ಎರಡು ವರ್ಷಗಳಲ್ಲಿ ಈ ಸಂಸ್ಥೆಗಳು ಒಟ್ಟಾಗಿ ನೇಮಕ ಮಾಡಿಕೊಂಡಿರುವ ಬೋಧಕರ ಪೈಕಿ ಕೇವಲ ಶೇ.10ರಷ್ಟು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು(ಎಸ್‌ಸಿ) ಮತ್ತು ಪರಿಶಿಷ್ಟ ವರ್ಗ(ಎಸ್‌ಟಿ)ಗಳಿಗೆ ಸೇರಿದವರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯವು ಸಂಸತ್ತಿನಲ್ಲಿ ತಿಳಿಸಿದೆ ಎಂದು thewire.in ವರದಿ ಮಾಡಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜೂಮ್ದಾರ್ ಸೋಮವಾರ (ಫೆಬ್ರವರಿ 10) ಲೋಕಸಭೆಗೆ ನೀಡಿದ ಲಿಖಿತ ಉತ್ತರದ ಪ್ರಕಾರ, ಸೆಪ್ಟೆಂಬರ್ 2022ರಿಂದ ಎಲ್ಲಾ ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಡಿಸೆಂಬರ್ 23, 2024 ರವರೆಗೆ ಒಟ್ಟು 3,027 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಈ ಪೈಕಿ ಎಸ್‌ಸಿಗಳ ಸಂಖ್ಯೆ 276 ಮತ್ತು ಎಸ್‌ಟಿಗಳ ಸಂಖ್ಯೆ 52 ಇದೆ.

ಆಗಸ್ಟ್ 2021ರಲ್ಲಿ ಕೇಂದ್ರ ಸರ್ಕಾರ ಎಸ್‌ಸಿಗಳು, ಎಸ್‌ಟಿಗಳು, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆ (ಸಿಎಹೆಚ್‌ಇಐ)ಗಳ ಬೋಧಕರ ಹುದ್ದೆಗಳಲ್ಲಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಒದಗಿಸಲು ಕೇಂದ್ರೀಯ ಶಿಕ್ಷಣ ಸಂಸ್ಥೆಗಳ (ಬೋಧಕ ಹುದ್ದೆಗಳಲ್ಲಿ ಮೀಸಲಾತಿ) 2019ನ್ನು ಅಧಿಸೂಚಿಸಿತ್ತು. ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ಅಭಿಯಾನವನ್ನು ಆರಂಭಿಸುವಂತೆ ಅದೇ ತಿಂಗಳು ಎಲ್ಲಾ ಸಿಎಹೆಚ್‌ಇಐಗಳಿಗೆ ಸೂಚಿಸಲಾಗಿತ್ತು.

3,027 ಬೋಧಕ ಹುದ್ದೆಗಳಲ್ಲಿ 328 ಎಸ್‌ಸಿ/ಎಸ್‌ಟಿ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

“ಸೆಪ್ಟೆಂಬರ್ 2022ರಿಂದ, ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಡಿಸೆಂಬರ್ 23,2024 ರವರೆಗೆ ಎಲ್ಲಾ ಸಿಹೆಚ್‌ಇಐಗಳು ಅಭಿಯಾನ ರೀತಿಯಲ್ಲಿ ಒಟ್ಟು 26,751 ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಇದರಲ್ಲಿ 15,637 ಅಧ್ಯಾಪಕರ ಹುದ್ದೆಗಳು ಸೇರಿವೆ. ಐಐಟಿಗಳು ಮತ್ತು ಐಐಎಂಗಳು ಒಟ್ಟಾರೆಯಾಗಿ 7,239 ಹುದ್ದೆಗಳನ್ನು ಭರ್ತಿ ಮಾಡಿವೆ. ಅವುಗಳಲ್ಲಿ 276 ಎಸ್‌ಸಿ ಮತ್ತು 52 ಎಸ್‌ಟಿ ಸೇರಿದಂತೆ 3027 ಅಧ್ಯಾಪಕರ ಹುದ್ದೆಗಳು ಒಳಗೊಂಡಿವೆ ಎಂದು ಸಚಿವ ಮಜೂಂದ್ದಾರ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕನಿಷ್ಠ ಎರಡು ಐಐಟಿಗಳು ಮತ್ತು ಮೂರು ಐಐಎಂಗಳಲ್ಲಿ ಶೇ.90ಕ್ಕಿಂತ ಅಧಿಕ ಬೋಧಕ ಹುದ್ದೆಗಳನ್ನು ಸಾಮಾನ್ಯ ವರ್ಗದವರು ಹೊಂದಿದ್ದಾರೆ. ಹೆಚ್ಚುವರಿಯಾಗಿ ಆರು ಐಐಟಿಗಳು ಮತ್ತು ನಾಲ್ಕು ಐಐಎಂಗಳಲ್ಲಿ ಈ ಪ್ರಮಾಣ ಶೇ.80ರಿಂದ ಶೇ.90ರಷ್ಟಿದೆ ಎನ್ನುವುದನ್ನು ಡಿಸೆಂಬರ್‌ನಲ್ಲಿ ಮಾಹಿತಿ ಹಕ್ಕು(ಆರ್‌ಟಿಐ) ಕಾಯ್ದೆಯಡಿ ಪಡೆಯಲಾದ ಉತ್ತರಗಳು ಬಹಿರಂಗಗೊಳಿಸಿತ್ತು.

ಕೇಂದ್ರದ ನೀತಿಯ ಪ್ರಕಾರ, ಐಐಟಿಗಳು ಮತ್ತು ಐಐಎಂಗಳು ಸೇರಿದಂತೆ ಬಹುತೇಕ ಎಲ್ಲಾ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.27 ರಷ್ಟು ಬೋಧಕ ಹುದ್ದೆಗಳು ಒಬಿಸಿಗಳಿಗೆ, ಶೇ.15 ರಷ್ಟು ಎಸ್‌ಸಿಗಳಿಗೆ ಮತ್ತು ಶೇ.7.5 ರಷ್ಟು ಎಸ್‌ಟಿಗಳಿಗೆ ಮೀಸಲಾಗಿವೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)2018-19ರಲ್ಲಿ 172 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದ್ದು, ಅದರಲ್ಲಿ ಶೇ. 12ರಷ್ಟು ಹುದ್ದೆಗಳು ಎಸ್‌ಸಿ/ಎಸ್‌ಟಿ ವರ್ಗಗಳಿಂದ ಭರ್ತಿಯಾಗಿವೆ. 2021-22ರಲ್ಲಿ 270 ಅಧ್ಯಾಪಕರ ಹುದ್ದೆಗಳಲ್ಲಿ ಶೇ. 14 ರಷ್ಟು ಹುದ್ದೆಗಳಿಗೆ ಎಸ್‌ಸಿ/ಎಸ್‌ಟಿಗಳು ನೇಮಕಗೊಂಡಿದ್ದಾರೆ ಎಂದು ಸಚಿವ ಮಜೂಮ್ದಾರ್ ತಿಳಿಸಿದ್ದಾರೆ.

“ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲ್ಪಟ್ಟಿದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, AIIMS ದೆಹಲಿ 2018-19 ಮತ್ತು 2021-22ರಲ್ಲಿ ಕ್ರಮವಾಗಿ 172 ಮತ್ತು 270 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದೆ. ಅದರಲ್ಲಿ ಕ್ರಮವಾಗಿ 22 ಮತ್ತು 40 ಎಸ್‌/ಎಸ್‌ಟಿ ಹುದ್ದೆಗಳನ್ನು ಭರ್ತಿ ಮಾಡಿದೆ” ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ.

ಸೌಜನ್ಯ : thewire.in

ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...