Homeಮುಖಪುಟಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ...

ಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ ಶೇ.10 : ಕೇಂದ್ರ ಸರ್ಕಾರ

- Advertisement -
- Advertisement -

ಐಐಟಿಗಳು ಮತ್ತು ಐಐಎಂಗಳು ಮೀಸಲು ವರ್ಗಗಳಿಂದ ಅಧ್ಯಾಪಕರನ್ನು ಭರ್ತಿ ಮಾಡಿಕೊಳ್ಳಲು ಅಭಿಯಾನವನ್ನು ಹಮ್ಮಿಕೊಂಡಾಗಿನಿಂದ ಎರಡು ವರ್ಷಗಳಲ್ಲಿ ಈ ಸಂಸ್ಥೆಗಳು ಒಟ್ಟಾಗಿ ನೇಮಕ ಮಾಡಿಕೊಂಡಿರುವ ಬೋಧಕರ ಪೈಕಿ ಕೇವಲ ಶೇ.10ರಷ್ಟು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು(ಎಸ್‌ಸಿ) ಮತ್ತು ಪರಿಶಿಷ್ಟ ವರ್ಗ(ಎಸ್‌ಟಿ)ಗಳಿಗೆ ಸೇರಿದವರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯವು ಸಂಸತ್ತಿನಲ್ಲಿ ತಿಳಿಸಿದೆ ಎಂದು thewire.in ವರದಿ ಮಾಡಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜೂಮ್ದಾರ್ ಸೋಮವಾರ (ಫೆಬ್ರವರಿ 10) ಲೋಕಸಭೆಗೆ ನೀಡಿದ ಲಿಖಿತ ಉತ್ತರದ ಪ್ರಕಾರ, ಸೆಪ್ಟೆಂಬರ್ 2022ರಿಂದ ಎಲ್ಲಾ ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಡಿಸೆಂಬರ್ 23, 2024 ರವರೆಗೆ ಒಟ್ಟು 3,027 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಈ ಪೈಕಿ ಎಸ್‌ಸಿಗಳ ಸಂಖ್ಯೆ 276 ಮತ್ತು ಎಸ್‌ಟಿಗಳ ಸಂಖ್ಯೆ 52 ಇದೆ.

ಆಗಸ್ಟ್ 2021ರಲ್ಲಿ ಕೇಂದ್ರ ಸರ್ಕಾರ ಎಸ್‌ಸಿಗಳು, ಎಸ್‌ಟಿಗಳು, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆ (ಸಿಎಹೆಚ್‌ಇಐ)ಗಳ ಬೋಧಕರ ಹುದ್ದೆಗಳಲ್ಲಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಒದಗಿಸಲು ಕೇಂದ್ರೀಯ ಶಿಕ್ಷಣ ಸಂಸ್ಥೆಗಳ (ಬೋಧಕ ಹುದ್ದೆಗಳಲ್ಲಿ ಮೀಸಲಾತಿ) 2019ನ್ನು ಅಧಿಸೂಚಿಸಿತ್ತು. ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ಅಭಿಯಾನವನ್ನು ಆರಂಭಿಸುವಂತೆ ಅದೇ ತಿಂಗಳು ಎಲ್ಲಾ ಸಿಎಹೆಚ್‌ಇಐಗಳಿಗೆ ಸೂಚಿಸಲಾಗಿತ್ತು.

3,027 ಬೋಧಕ ಹುದ್ದೆಗಳಲ್ಲಿ 328 ಎಸ್‌ಸಿ/ಎಸ್‌ಟಿ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

“ಸೆಪ್ಟೆಂಬರ್ 2022ರಿಂದ, ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಡಿಸೆಂಬರ್ 23,2024 ರವರೆಗೆ ಎಲ್ಲಾ ಸಿಹೆಚ್‌ಇಐಗಳು ಅಭಿಯಾನ ರೀತಿಯಲ್ಲಿ ಒಟ್ಟು 26,751 ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಇದರಲ್ಲಿ 15,637 ಅಧ್ಯಾಪಕರ ಹುದ್ದೆಗಳು ಸೇರಿವೆ. ಐಐಟಿಗಳು ಮತ್ತು ಐಐಎಂಗಳು ಒಟ್ಟಾರೆಯಾಗಿ 7,239 ಹುದ್ದೆಗಳನ್ನು ಭರ್ತಿ ಮಾಡಿವೆ. ಅವುಗಳಲ್ಲಿ 276 ಎಸ್‌ಸಿ ಮತ್ತು 52 ಎಸ್‌ಟಿ ಸೇರಿದಂತೆ 3027 ಅಧ್ಯಾಪಕರ ಹುದ್ದೆಗಳು ಒಳಗೊಂಡಿವೆ ಎಂದು ಸಚಿವ ಮಜೂಂದ್ದಾರ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕನಿಷ್ಠ ಎರಡು ಐಐಟಿಗಳು ಮತ್ತು ಮೂರು ಐಐಎಂಗಳಲ್ಲಿ ಶೇ.90ಕ್ಕಿಂತ ಅಧಿಕ ಬೋಧಕ ಹುದ್ದೆಗಳನ್ನು ಸಾಮಾನ್ಯ ವರ್ಗದವರು ಹೊಂದಿದ್ದಾರೆ. ಹೆಚ್ಚುವರಿಯಾಗಿ ಆರು ಐಐಟಿಗಳು ಮತ್ತು ನಾಲ್ಕು ಐಐಎಂಗಳಲ್ಲಿ ಈ ಪ್ರಮಾಣ ಶೇ.80ರಿಂದ ಶೇ.90ರಷ್ಟಿದೆ ಎನ್ನುವುದನ್ನು ಡಿಸೆಂಬರ್‌ನಲ್ಲಿ ಮಾಹಿತಿ ಹಕ್ಕು(ಆರ್‌ಟಿಐ) ಕಾಯ್ದೆಯಡಿ ಪಡೆಯಲಾದ ಉತ್ತರಗಳು ಬಹಿರಂಗಗೊಳಿಸಿತ್ತು.

ಕೇಂದ್ರದ ನೀತಿಯ ಪ್ರಕಾರ, ಐಐಟಿಗಳು ಮತ್ತು ಐಐಎಂಗಳು ಸೇರಿದಂತೆ ಬಹುತೇಕ ಎಲ್ಲಾ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.27 ರಷ್ಟು ಬೋಧಕ ಹುದ್ದೆಗಳು ಒಬಿಸಿಗಳಿಗೆ, ಶೇ.15 ರಷ್ಟು ಎಸ್‌ಸಿಗಳಿಗೆ ಮತ್ತು ಶೇ.7.5 ರಷ್ಟು ಎಸ್‌ಟಿಗಳಿಗೆ ಮೀಸಲಾಗಿವೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)2018-19ರಲ್ಲಿ 172 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದ್ದು, ಅದರಲ್ಲಿ ಶೇ. 12ರಷ್ಟು ಹುದ್ದೆಗಳು ಎಸ್‌ಸಿ/ಎಸ್‌ಟಿ ವರ್ಗಗಳಿಂದ ಭರ್ತಿಯಾಗಿವೆ. 2021-22ರಲ್ಲಿ 270 ಅಧ್ಯಾಪಕರ ಹುದ್ದೆಗಳಲ್ಲಿ ಶೇ. 14 ರಷ್ಟು ಹುದ್ದೆಗಳಿಗೆ ಎಸ್‌ಸಿ/ಎಸ್‌ಟಿಗಳು ನೇಮಕಗೊಂಡಿದ್ದಾರೆ ಎಂದು ಸಚಿವ ಮಜೂಮ್ದಾರ್ ತಿಳಿಸಿದ್ದಾರೆ.

“ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲ್ಪಟ್ಟಿದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, AIIMS ದೆಹಲಿ 2018-19 ಮತ್ತು 2021-22ರಲ್ಲಿ ಕ್ರಮವಾಗಿ 172 ಮತ್ತು 270 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದೆ. ಅದರಲ್ಲಿ ಕ್ರಮವಾಗಿ 22 ಮತ್ತು 40 ಎಸ್‌/ಎಸ್‌ಟಿ ಹುದ್ದೆಗಳನ್ನು ಭರ್ತಿ ಮಾಡಿದೆ” ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ.

ಸೌಜನ್ಯ : thewire.in

ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...