Homeಮುಖಪುಟಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ...

ಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ ಶೇ.10 : ಕೇಂದ್ರ ಸರ್ಕಾರ

- Advertisement -
- Advertisement -

ಐಐಟಿಗಳು ಮತ್ತು ಐಐಎಂಗಳು ಮೀಸಲು ವರ್ಗಗಳಿಂದ ಅಧ್ಯಾಪಕರನ್ನು ಭರ್ತಿ ಮಾಡಿಕೊಳ್ಳಲು ಅಭಿಯಾನವನ್ನು ಹಮ್ಮಿಕೊಂಡಾಗಿನಿಂದ ಎರಡು ವರ್ಷಗಳಲ್ಲಿ ಈ ಸಂಸ್ಥೆಗಳು ಒಟ್ಟಾಗಿ ನೇಮಕ ಮಾಡಿಕೊಂಡಿರುವ ಬೋಧಕರ ಪೈಕಿ ಕೇವಲ ಶೇ.10ರಷ್ಟು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು(ಎಸ್‌ಸಿ) ಮತ್ತು ಪರಿಶಿಷ್ಟ ವರ್ಗ(ಎಸ್‌ಟಿ)ಗಳಿಗೆ ಸೇರಿದವರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯವು ಸಂಸತ್ತಿನಲ್ಲಿ ತಿಳಿಸಿದೆ ಎಂದು thewire.in ವರದಿ ಮಾಡಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜೂಮ್ದಾರ್ ಸೋಮವಾರ (ಫೆಬ್ರವರಿ 10) ಲೋಕಸಭೆಗೆ ನೀಡಿದ ಲಿಖಿತ ಉತ್ತರದ ಪ್ರಕಾರ, ಸೆಪ್ಟೆಂಬರ್ 2022ರಿಂದ ಎಲ್ಲಾ ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಡಿಸೆಂಬರ್ 23, 2024 ರವರೆಗೆ ಒಟ್ಟು 3,027 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಈ ಪೈಕಿ ಎಸ್‌ಸಿಗಳ ಸಂಖ್ಯೆ 276 ಮತ್ತು ಎಸ್‌ಟಿಗಳ ಸಂಖ್ಯೆ 52 ಇದೆ.

ಆಗಸ್ಟ್ 2021ರಲ್ಲಿ ಕೇಂದ್ರ ಸರ್ಕಾರ ಎಸ್‌ಸಿಗಳು, ಎಸ್‌ಟಿಗಳು, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆ (ಸಿಎಹೆಚ್‌ಇಐ)ಗಳ ಬೋಧಕರ ಹುದ್ದೆಗಳಲ್ಲಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಒದಗಿಸಲು ಕೇಂದ್ರೀಯ ಶಿಕ್ಷಣ ಸಂಸ್ಥೆಗಳ (ಬೋಧಕ ಹುದ್ದೆಗಳಲ್ಲಿ ಮೀಸಲಾತಿ) 2019ನ್ನು ಅಧಿಸೂಚಿಸಿತ್ತು. ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ಅಭಿಯಾನವನ್ನು ಆರಂಭಿಸುವಂತೆ ಅದೇ ತಿಂಗಳು ಎಲ್ಲಾ ಸಿಎಹೆಚ್‌ಇಐಗಳಿಗೆ ಸೂಚಿಸಲಾಗಿತ್ತು.

3,027 ಬೋಧಕ ಹುದ್ದೆಗಳಲ್ಲಿ 328 ಎಸ್‌ಸಿ/ಎಸ್‌ಟಿ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

“ಸೆಪ್ಟೆಂಬರ್ 2022ರಿಂದ, ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಡಿಸೆಂಬರ್ 23,2024 ರವರೆಗೆ ಎಲ್ಲಾ ಸಿಹೆಚ್‌ಇಐಗಳು ಅಭಿಯಾನ ರೀತಿಯಲ್ಲಿ ಒಟ್ಟು 26,751 ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಇದರಲ್ಲಿ 15,637 ಅಧ್ಯಾಪಕರ ಹುದ್ದೆಗಳು ಸೇರಿವೆ. ಐಐಟಿಗಳು ಮತ್ತು ಐಐಎಂಗಳು ಒಟ್ಟಾರೆಯಾಗಿ 7,239 ಹುದ್ದೆಗಳನ್ನು ಭರ್ತಿ ಮಾಡಿವೆ. ಅವುಗಳಲ್ಲಿ 276 ಎಸ್‌ಸಿ ಮತ್ತು 52 ಎಸ್‌ಟಿ ಸೇರಿದಂತೆ 3027 ಅಧ್ಯಾಪಕರ ಹುದ್ದೆಗಳು ಒಳಗೊಂಡಿವೆ ಎಂದು ಸಚಿವ ಮಜೂಂದ್ದಾರ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕನಿಷ್ಠ ಎರಡು ಐಐಟಿಗಳು ಮತ್ತು ಮೂರು ಐಐಎಂಗಳಲ್ಲಿ ಶೇ.90ಕ್ಕಿಂತ ಅಧಿಕ ಬೋಧಕ ಹುದ್ದೆಗಳನ್ನು ಸಾಮಾನ್ಯ ವರ್ಗದವರು ಹೊಂದಿದ್ದಾರೆ. ಹೆಚ್ಚುವರಿಯಾಗಿ ಆರು ಐಐಟಿಗಳು ಮತ್ತು ನಾಲ್ಕು ಐಐಎಂಗಳಲ್ಲಿ ಈ ಪ್ರಮಾಣ ಶೇ.80ರಿಂದ ಶೇ.90ರಷ್ಟಿದೆ ಎನ್ನುವುದನ್ನು ಡಿಸೆಂಬರ್‌ನಲ್ಲಿ ಮಾಹಿತಿ ಹಕ್ಕು(ಆರ್‌ಟಿಐ) ಕಾಯ್ದೆಯಡಿ ಪಡೆಯಲಾದ ಉತ್ತರಗಳು ಬಹಿರಂಗಗೊಳಿಸಿತ್ತು.

ಕೇಂದ್ರದ ನೀತಿಯ ಪ್ರಕಾರ, ಐಐಟಿಗಳು ಮತ್ತು ಐಐಎಂಗಳು ಸೇರಿದಂತೆ ಬಹುತೇಕ ಎಲ್ಲಾ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.27 ರಷ್ಟು ಬೋಧಕ ಹುದ್ದೆಗಳು ಒಬಿಸಿಗಳಿಗೆ, ಶೇ.15 ರಷ್ಟು ಎಸ್‌ಸಿಗಳಿಗೆ ಮತ್ತು ಶೇ.7.5 ರಷ್ಟು ಎಸ್‌ಟಿಗಳಿಗೆ ಮೀಸಲಾಗಿವೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)2018-19ರಲ್ಲಿ 172 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದ್ದು, ಅದರಲ್ಲಿ ಶೇ. 12ರಷ್ಟು ಹುದ್ದೆಗಳು ಎಸ್‌ಸಿ/ಎಸ್‌ಟಿ ವರ್ಗಗಳಿಂದ ಭರ್ತಿಯಾಗಿವೆ. 2021-22ರಲ್ಲಿ 270 ಅಧ್ಯಾಪಕರ ಹುದ್ದೆಗಳಲ್ಲಿ ಶೇ. 14 ರಷ್ಟು ಹುದ್ದೆಗಳಿಗೆ ಎಸ್‌ಸಿ/ಎಸ್‌ಟಿಗಳು ನೇಮಕಗೊಂಡಿದ್ದಾರೆ ಎಂದು ಸಚಿವ ಮಜೂಮ್ದಾರ್ ತಿಳಿಸಿದ್ದಾರೆ.

“ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲ್ಪಟ್ಟಿದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, AIIMS ದೆಹಲಿ 2018-19 ಮತ್ತು 2021-22ರಲ್ಲಿ ಕ್ರಮವಾಗಿ 172 ಮತ್ತು 270 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದೆ. ಅದರಲ್ಲಿ ಕ್ರಮವಾಗಿ 22 ಮತ್ತು 40 ಎಸ್‌/ಎಸ್‌ಟಿ ಹುದ್ದೆಗಳನ್ನು ಭರ್ತಿ ಮಾಡಿದೆ” ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ.

ಸೌಜನ್ಯ : thewire.in

ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...