Homeಮುಖಪುಟಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ...

ಕಳೆದ ಎರಡು ವರ್ಷಗಳಲ್ಲಿ ಐಐಟಿ, ಐಐಎಂಗಳಿಗೆ ನೇಮಕಗೊಂಡ ಬೋಧಕ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಸಂಖ್ಯೆ ಕೇವಲ ಶೇ.10 : ಕೇಂದ್ರ ಸರ್ಕಾರ

- Advertisement -
- Advertisement -

ಐಐಟಿಗಳು ಮತ್ತು ಐಐಎಂಗಳು ಮೀಸಲು ವರ್ಗಗಳಿಂದ ಅಧ್ಯಾಪಕರನ್ನು ಭರ್ತಿ ಮಾಡಿಕೊಳ್ಳಲು ಅಭಿಯಾನವನ್ನು ಹಮ್ಮಿಕೊಂಡಾಗಿನಿಂದ ಎರಡು ವರ್ಷಗಳಲ್ಲಿ ಈ ಸಂಸ್ಥೆಗಳು ಒಟ್ಟಾಗಿ ನೇಮಕ ಮಾಡಿಕೊಂಡಿರುವ ಬೋಧಕರ ಪೈಕಿ ಕೇವಲ ಶೇ.10ರಷ್ಟು ಅಭ್ಯರ್ಥಿಗಳು ಪರಿಶಿಷ್ಟ ಜಾತಿಗಳು(ಎಸ್‌ಸಿ) ಮತ್ತು ಪರಿಶಿಷ್ಟ ವರ್ಗ(ಎಸ್‌ಟಿ)ಗಳಿಗೆ ಸೇರಿದವರಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯವು ಸಂಸತ್ತಿನಲ್ಲಿ ತಿಳಿಸಿದೆ ಎಂದು thewire.in ವರದಿ ಮಾಡಿದೆ.

ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜೂಮ್ದಾರ್ ಸೋಮವಾರ (ಫೆಬ್ರವರಿ 10) ಲೋಕಸಭೆಗೆ ನೀಡಿದ ಲಿಖಿತ ಉತ್ತರದ ಪ್ರಕಾರ, ಸೆಪ್ಟೆಂಬರ್ 2022ರಿಂದ ಎಲ್ಲಾ ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಡಿಸೆಂಬರ್ 23, 2024 ರವರೆಗೆ ಒಟ್ಟು 3,027 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, ಈ ಪೈಕಿ ಎಸ್‌ಸಿಗಳ ಸಂಖ್ಯೆ 276 ಮತ್ತು ಎಸ್‌ಟಿಗಳ ಸಂಖ್ಯೆ 52 ಇದೆ.

ಆಗಸ್ಟ್ 2021ರಲ್ಲಿ ಕೇಂದ್ರ ಸರ್ಕಾರ ಎಸ್‌ಸಿಗಳು, ಎಸ್‌ಟಿಗಳು, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು ಹಾಗೂ ಆರ್ಥಿಕ ದುರ್ಬಲ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆ (ಸಿಎಹೆಚ್‌ಇಐ)ಗಳ ಬೋಧಕರ ಹುದ್ದೆಗಳಲ್ಲಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಒದಗಿಸಲು ಕೇಂದ್ರೀಯ ಶಿಕ್ಷಣ ಸಂಸ್ಥೆಗಳ (ಬೋಧಕ ಹುದ್ದೆಗಳಲ್ಲಿ ಮೀಸಲಾತಿ) 2019ನ್ನು ಅಧಿಸೂಚಿಸಿತ್ತು. ಬ್ಯಾಕ್‌ಲಾಗ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಶೇಷ ಅಭಿಯಾನವನ್ನು ಆರಂಭಿಸುವಂತೆ ಅದೇ ತಿಂಗಳು ಎಲ್ಲಾ ಸಿಎಹೆಚ್‌ಇಐಗಳಿಗೆ ಸೂಚಿಸಲಾಗಿತ್ತು.

3,027 ಬೋಧಕ ಹುದ್ದೆಗಳಲ್ಲಿ 328 ಎಸ್‌ಸಿ/ಎಸ್‌ಟಿ ಹುದ್ದೆಗಳು ಮಾತ್ರ ಭರ್ತಿಯಾಗಿವೆ.

“ಸೆಪ್ಟೆಂಬರ್ 2022ರಿಂದ, ಐಐಟಿಗಳು ಮತ್ತು ಐಐಎಂಗಳು ಎಸ್‌ಸಿ ಮತ್ತು ಎಸ್‌ಟಿ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಭಿಯಾನದ ರೀತಿಯ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಡಿಸೆಂಬರ್ 23,2024 ರವರೆಗೆ ಎಲ್ಲಾ ಸಿಹೆಚ್‌ಇಐಗಳು ಅಭಿಯಾನ ರೀತಿಯಲ್ಲಿ ಒಟ್ಟು 26,751 ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ. ಇದರಲ್ಲಿ 15,637 ಅಧ್ಯಾಪಕರ ಹುದ್ದೆಗಳು ಸೇರಿವೆ. ಐಐಟಿಗಳು ಮತ್ತು ಐಐಎಂಗಳು ಒಟ್ಟಾರೆಯಾಗಿ 7,239 ಹುದ್ದೆಗಳನ್ನು ಭರ್ತಿ ಮಾಡಿವೆ. ಅವುಗಳಲ್ಲಿ 276 ಎಸ್‌ಸಿ ಮತ್ತು 52 ಎಸ್‌ಟಿ ಸೇರಿದಂತೆ 3027 ಅಧ್ಯಾಪಕರ ಹುದ್ದೆಗಳು ಒಳಗೊಂಡಿವೆ ಎಂದು ಸಚಿವ ಮಜೂಂದ್ದಾರ್ ತಮ್ಮ ಉತ್ತರದಲ್ಲಿ ತಿಳಿಸಿದ್ದಾರೆ.

ಕನಿಷ್ಠ ಎರಡು ಐಐಟಿಗಳು ಮತ್ತು ಮೂರು ಐಐಎಂಗಳಲ್ಲಿ ಶೇ.90ಕ್ಕಿಂತ ಅಧಿಕ ಬೋಧಕ ಹುದ್ದೆಗಳನ್ನು ಸಾಮಾನ್ಯ ವರ್ಗದವರು ಹೊಂದಿದ್ದಾರೆ. ಹೆಚ್ಚುವರಿಯಾಗಿ ಆರು ಐಐಟಿಗಳು ಮತ್ತು ನಾಲ್ಕು ಐಐಎಂಗಳಲ್ಲಿ ಈ ಪ್ರಮಾಣ ಶೇ.80ರಿಂದ ಶೇ.90ರಷ್ಟಿದೆ ಎನ್ನುವುದನ್ನು ಡಿಸೆಂಬರ್‌ನಲ್ಲಿ ಮಾಹಿತಿ ಹಕ್ಕು(ಆರ್‌ಟಿಐ) ಕಾಯ್ದೆಯಡಿ ಪಡೆಯಲಾದ ಉತ್ತರಗಳು ಬಹಿರಂಗಗೊಳಿಸಿತ್ತು.

ಕೇಂದ್ರದ ನೀತಿಯ ಪ್ರಕಾರ, ಐಐಟಿಗಳು ಮತ್ತು ಐಐಎಂಗಳು ಸೇರಿದಂತೆ ಬಹುತೇಕ ಎಲ್ಲಾ ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಶೇ.27 ರಷ್ಟು ಬೋಧಕ ಹುದ್ದೆಗಳು ಒಬಿಸಿಗಳಿಗೆ, ಶೇ.15 ರಷ್ಟು ಎಸ್‌ಸಿಗಳಿಗೆ ಮತ್ತು ಶೇ.7.5 ರಷ್ಟು ಎಸ್‌ಟಿಗಳಿಗೆ ಮೀಸಲಾಗಿವೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)2018-19ರಲ್ಲಿ 172 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದ್ದು, ಅದರಲ್ಲಿ ಶೇ. 12ರಷ್ಟು ಹುದ್ದೆಗಳು ಎಸ್‌ಸಿ/ಎಸ್‌ಟಿ ವರ್ಗಗಳಿಂದ ಭರ್ತಿಯಾಗಿವೆ. 2021-22ರಲ್ಲಿ 270 ಅಧ್ಯಾಪಕರ ಹುದ್ದೆಗಳಲ್ಲಿ ಶೇ. 14 ರಷ್ಟು ಹುದ್ದೆಗಳಿಗೆ ಎಸ್‌ಸಿ/ಎಸ್‌ಟಿಗಳು ನೇಮಕಗೊಂಡಿದ್ದಾರೆ ಎಂದು ಸಚಿವ ಮಜೂಮ್ದಾರ್ ತಿಳಿಸಿದ್ದಾರೆ.

“ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸಂಸತ್ತಿನ ಕಾಯ್ದೆಯ ಮೂಲಕ ಸ್ಥಾಪಿಸಲ್ಪಟ್ಟಿದೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಒದಗಿಸಿದ ಮಾಹಿತಿಯ ಪ್ರಕಾರ, AIIMS ದೆಹಲಿ 2018-19 ಮತ್ತು 2021-22ರಲ್ಲಿ ಕ್ರಮವಾಗಿ 172 ಮತ್ತು 270 ಅಧ್ಯಾಪಕರ ಹುದ್ದೆಗಳಿಗೆ ಜಾಹೀರಾತು ನೀಡಿದೆ. ಅದರಲ್ಲಿ ಕ್ರಮವಾಗಿ 22 ಮತ್ತು 40 ಎಸ್‌/ಎಸ್‌ಟಿ ಹುದ್ದೆಗಳನ್ನು ಭರ್ತಿ ಮಾಡಿದೆ” ಎಂದು ಸಚಿವರ ಉತ್ತರದಲ್ಲಿ ತಿಳಿಸಲಾಗಿದೆ.

ಸೌಜನ್ಯ : thewire.in

ರೋಹಿಂಗ್ಯಾ ಮಕ್ಕಳ ಶಿಕ್ಷಣದಲ್ಲಿ ತಾರತಮ್ಯ ಇರಬಾರದು – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...