Homeಮುಖಪುಟಬಂಧನ ಕೇಂದ್ರವಾಗಿ SC/ST ಹಾಸ್ಟೆಲ್: ಯೋಜನೆ ಕೈಬಿಟ್ಟ ಯುಪಿ ಸರ್ಕಾರ

ಬಂಧನ ಕೇಂದ್ರವಾಗಿ SC/ST ಹಾಸ್ಟೆಲ್: ಯೋಜನೆ ಕೈಬಿಟ್ಟ ಯುಪಿ ಸರ್ಕಾರ

ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರವನ್ನು "ದಲಿತ ವಿರೋಧಿ" ಎಂದು ಕರೆದು ಆಕ್ರೋಶ ಹೊರಹಾಕಿದ್ದರು.

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗಿದ್ದ ಡಾ.ಅಂಬೇಡ್ಕರ್ ಹಾಸ್ಟೆಲ್ ಅನ್ನು ಅಕ್ರಮ ವಿದೇಶಿಗರನ್ನು ಬಂಧಿಸುವ ಕೇಂದ್ರವಾಗಿಸುವ ಯೋಜನೆ ಕೈಬಿಡಲಾಗಿದೆ.  2010-11 ರಲ್ಲಿ ಮಾಯಾವತಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿದ್ಯಾರ್ಥಿಗಳಿಗಾಗಿ ಈ ಕಟ್ಟಡ ನಿರ್ಮಿಸಲಾಗಿತ್ತು.

ಹಾಸ್ಟೆಲ್ ದೆಹಲಿ-ಮೀರತ್ ಹೆದ್ದಾರಿಗೆ ಹತ್ತಿರದಲ್ಲಿದ್ದು, ಆರಂಭದಲ್ಲಿ ಪಶ್ಚಿಮ ಯುಪಿ ಮತ್ತು ಪಕ್ಕದ ಪ್ರದೇಶಗಳ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ವಸತಿ ಪಡೆಯುತ್ತಿದ್ದರು. ಕಳೆದ ಐದು ವರ್ಷಗಳಿಂದ ಹಾಸ್ಟೆಲ್ ಖಾಲಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ಹಾಸ್ಟೆಲ್ ‌ಅನ್ನು ವೀಸಾ ನಿಯಮಗಳನ್ನು ಉಲ್ಲಂಘಿಸುವವರಿಗೆ ಮುಕ್ತ ಜೈಲಾಗಿ ಪರಿವರ್ತಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ವಸತಿ ನಿಲಯವನ್ನು ಮಾರ್ಪಾಡು ಮಾಡಲಾಗಿತ್ತು. ಕೊರೊನಾ ಕಾರಣದಿಂದ ಕೆಲ ಕಾಲ ಕೆಲಸ ನಿಲ್ಲಿಸಲಾಗಿದ್ದರೂ ಮತ್ತೆ ಬಂಧನ ಕೇಂದ್ರವನ್ನಾಗಿಸಲಾಗಿತ್ತು. ವಿದ್ಯುತ್ ಸೌಲಭ್ಯ, ನೀರು, ಶಾಚಾಲಯಗಳನ್ನು ನಿರ್ಮಿಸಲಾಗಿತ್ತು.

ಆದರೆ ಹಾಸ್ಟೆಲ್ ನಿರ್ಮಾಣಕ್ಕೆ ಮುನ್ನುಡಿ ಹಾಡಿದ್ದ ಮಾಜಿ ಮುಖ್ಯಮಂತ್ರಿ ಮಾಯಾವತಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಸರ್ಕಾರವನ್ನು “ದಲಿತ ವಿರೋಧಿ” ಎಂದು ಕರೆದು ಆಕ್ರೋಶ ಹೊರಹಾಕಿದ್ದರು. ಈ  ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಯೋಜನೆ ಕೈಬಿಟ್ಟಿದೆ.

ಹಾಸ್ಟೆಲ್ ಅನ್ನು ಅಕ್ರಮ ವಿದೇಶಿಯರಿಗಾಗಿ ರಾಜ್ಯದ ಮೊದಲ ಬಂಧನ ಕೇಂದ್ರ ಮಾಡುವ ಯೋಜನೆ ಉತ್ತರಪ್ರದೇಶ ಸರ್ಕಾರ ರೂಪಿಸಿತ್ತು. ಹಾಸ್ಟಲ್ ನವೀಕರಣ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದ್ದು, ಮುಂದಿನ ತಿಂಗಳ ವೇಳೆಗೆ ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇತ್ತು.

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಹಿರಿಯ ಆಡಳಿತ ಅಧಿಕಾರಿಯೊಬ್ಬರ ಪ್ರಕಾರ, ಕಟ್ಟಡವನ್ನು ಹಾಸ್ಟೆಲ್‌ನ ಮೂಲ ಸ್ಥಿತಿಗೆ ಹಿಂದಿರುಗಿಸಲಾಗಿದೆ. ಆರಂಭದಲ್ಲಿ, ವೀಸಾ ಮಾನದಂಡಗಳನ್ನು ಉಲ್ಲಂಘಿಸುವವರಿಗೆ ಒಂದು ವಿಭಾಗವನ್ನು ಬಂಧನ ಕೇಂದ್ರವಾಗಿ ಪರಿವರ್ತಿಸಲಾಗುತ್ತಿತ್ತು. ಈ ಕೇಂದ್ರವನ್ನು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸಬೇಕಿತ್ತು. ಮತ್ತೆ  ಜಿಲ್ಲೆಯಲ್ಲಿ ಹೊಸ ಬಂಧನ ಕೇಂದ್ರದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ.

ಸರ್ಕಾರಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಬೇಕಿದೆ. ಇಂತಹ ಸ್ಥಿತಿಯಲ್ಲಿ ಇರುವ ಸವಲತ್ತುಗಳನ್ನು ಕಿತ್ತುಕೊಂಡರೆ ವಿದ್ಯಾರ್ಥಿಗಳ ಭವಿಷ್ಯ ಕಠಿಣವಾಗುತ್ತದೆ. ಮಾಯಾವತಿಯವರ ಒತ್ತಡಕ್ಕೆ ಮಣಿದ ಉತ್ತರಪ್ರದೇಶ ಸರ್ಕಾರ ಯೋಜನೆಯನ್ನು ಕೈಬಿಟ್ಟಿದೆ.


ಇದನ್ನೂ ಓದಿ: ಎಲ್ಲರನ್ನೂ ದಾಟಿ ಮುಂದಕ್ಕೆ ಸಾಗಬೇಕಿದೆ ಒಳಮೀಸಲಾತಿ ಹೋರಾಟ – ಭಾಸ್ಕರ್ ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...