Homeಮುಖಪುಟಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ 'ಅರ್ಹರಲ್ಲ' ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

"Not Found Suitable ಈಗ ಹೊಸ ಮನುವಾದ"

- Advertisement -
- Advertisement -

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಅರ್ಹ ಅಭ್ಯರ್ಥಿಗಳನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಸದಸ್ಯರೊಂದಿಗೆ ಇತ್ತೀಚೆಗೆ ನಡೆಸಿದ ಸಂವಾದದ ವಿಡಿಯೋವನ್ನು ರಾಹುಲ್ ಗಾಂಧಿ ಮಂಗಳವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಮೇಲಿನ ಹೇಳಿಕೆ ನೀಡಿರುವುದು ನೋಡಬಹುದು.

‘ಅರ್ಹರಲ್ಲ’ ಎಂಬುದು ಈಗ ಹೊಸ ಮನುವಾದ. ಎಸ್‌ಸಿ, ಎಸ್‌ಟಿ, ಒಬಿಸಿಯ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ. ಈ ಮೂಲಕ ಅವರನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಮನುವಾದ’ ಎಂಬುದು ಮನುಸ್ಮೃತಿಯಿಂದ ಆಳಲ್ಪಡುವ ನೀತಿಯಾಗಿದೆ. ಶಿಕ್ಷಣವು ಸಮಾನತೆಗೆ ದೊಡ್ಡ ಅಸ್ತ್ರವಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆರ್‌ಎಸ್‌ಎಸ್ ಈ ಶಕ್ತಿಯನ್ನು ಬುಡಮೇಲು ಮಾಡುತ್ತಿವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಮೋದಿ ಸರ್ಕಾರ ಈ ಅಸ್ತ್ರವನ್ನು ಮೊಂಡಾಗಿಸುವಲ್ಲಿ ನಿರತವಾಗಿದೆ” ಎಂದಿದ್ದಾರೆ.

‘ಅರ್ಹರಲ್ಲ’ (Not Found Suitable-NFS) ಎಂದು ಹೇಳಿಕೊಂಡು ದೆಹಲಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಮತ್ತು ಸಹಾಯಕ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ. 30ಕ್ಕಿಂತ ಹೆಚ್ಚು ಖಾಲಿ ಇಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಐಐಟಿಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳು ಇದಕ್ಕೆ ಹೊರತಾಗಿಲ್ಲ. ಎಲ್ಲೆಡೆ ಒಂದೇ ರೀತಿಯ ಪಿತೂರಿ ನಡೆಯುತ್ತಿದೆ. ‘ಅರ್ಹರಲ್ಲ’ ಎಂಬುವುದು ಸಂವಿಧಾನದ ಮೇಲಿನ ದಾಳಿಯಾಗಿದೆ. ಸಾಮಾಜಿಕ ನ್ಯಾಯಕ್ಕೆ ಮಾಡುವ ದ್ರೋಹವಾಗಿದೆ ಎಂದಿದ್ದಾರೆ.

ಮೀಸಲಾತಿ ಪಡೆಯುವುದು ಹಕ್ಕು, ಗೌರವ ಮತ್ತು ಭಾಗವಹಿಸುವಿಕೆಗಾಗಿ ಹೋರಾಡುವ ವಿಷಯ ಎಂದಿರುವ ರಾಹುಲ್ ಗಾಂಧಿ, “ನಾನು ಡಿಯುಎಸ್‌ಯು ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ/ಆರೆಸ್ಸೆಸ್‌ನ ಪ್ರತಿಯೊಂದು ಮೀಸಲಾತಿ ವಿರೋಧಿ ಕ್ರಮಕ್ಕೂ ಸಂವಿಧಾನದ ಶಕ್ತಿಯೊಂದಿಗೆ ಉತ್ತರಿಸುತ್ತೇವೆ” ಎಂದು ತಿಳಿಸಿದ್ದಾರೆ.

ವಿಡಿಯೋದಲ್ಲಿ ‘ಹಿಂದುತ್ವ’ ಯೋಜನೆಯ ಅಡಿಪಾಯ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಇತಿಹಾಸವನ್ನು ಅಳಿಸುವುದು ಎಂದು ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳಿಗೆ ಹೇಳುವುದನ್ನು ನೋಡಬಹುದು.

“ಶೇಕಡಾ 90ರಷ್ಟು ಜನರ ಇತಿಹಾಸ ನಮ್ಮ ಪುಸ್ತಕಗಳಲ್ಲಿ ಏಕಿಲ್ಲ? ಕೇವಲ 10ರಷ್ಟು ಜನರ ಇತಿಹಾಸ ಮಾತ್ರ ಏಕೆ ಇದೆ? ಉದಾಹರಣೆಗೆ: ನಮ್ಮ ಇತಿಹಾಸ ಪುಸ್ತಕಗಳಲ್ಲಿ 3,000 ವರ್ಷಗಳಿಂದ ದಲಿತರನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ, ಗೌರವಿಸಲಾಗಿಲ್ಲ, ನಮ್ಮ ಸಮಾಜದಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಲಾಗಿಲ್ಲ ಎಂದು ಏಕೆ ಬರೆದಿಲ್ಲ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಮೇ 22ರಂದು ದೆಹಲಿ ವಿಶ್ವ ವಿದ್ಯಾಲಯವು ತನ್ನ ಉತ್ತರ ಕ್ಯಾಂಪಸ್‌ಗೆ ರಾಹುಲ್ ಗಾಂಧಿಯವರ ಅಘೋಷಿತ ಭೇಟಿಯನ್ನು ಆಕ್ಷೇಪಿಸಿತ್ತು. ಇದು ಸಾಂಸ್ಥಿಕ ಶಿಷ್ಟಾಚಾರದ ಉಲ್ಲಂಘನೆ ಮತ್ತು ವಿದ್ಯಾರ್ಥಿ ಆಡಳಿತ ಕಾರ್ಯಾಚರಣೆಗಳಿಗೆ ಅಡ್ಡಿ ಎಂದಿತ್ತು.

ಈ ರೀತಿ ಯಾವುದೇ ಮುನ್ಸೂಚನೆ ನೀಡದೆ ರಾಹುಲ್ ಗಾಂಧಿ ಭೇಟಿ ನೀಡಿರುವುದು ಎರಡನೆ ಬಾರಿಯಾಗಿದೆ ಎಂದು ವಿವಿಯ ಪ್ರಾಕ್ಟರ್ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.

ರಾಹುಲ್ ಗಾಂಧಿಯವರು ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು.

ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಬೆಂಬಲಿತ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರ ಕಚೇರಿಯಲ್ಲಿ ರಾಹುಲ್ ಗಾಂಧಿ ಸಭೆ ನಡೆಸಿದ್ದರು.

ಬ್ರಿಜ್‌ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ: ದೆಹಲಿ ಪೊಲೀಸರಿಂದ ಮುಕ್ತಾಯ ವರದಿ; ಅಂಗೀಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...