Homeಮುಖಪುಟಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ 'ಅರ್ಹರಲ್ಲ' ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

"Not Found Suitable ಈಗ ಹೊಸ ಮನುವಾದ"

- Advertisement -
- Advertisement -

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಅರ್ಹ ಅಭ್ಯರ್ಥಿಗಳನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಸದಸ್ಯರೊಂದಿಗೆ ಇತ್ತೀಚೆಗೆ ನಡೆಸಿದ ಸಂವಾದದ ವಿಡಿಯೋವನ್ನು ರಾಹುಲ್ ಗಾಂಧಿ ಮಂಗಳವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಮೇಲಿನ ಹೇಳಿಕೆ ನೀಡಿರುವುದು ನೋಡಬಹುದು.

‘ಅರ್ಹರಲ್ಲ’ ಎಂಬುದು ಈಗ ಹೊಸ ಮನುವಾದ. ಎಸ್‌ಸಿ, ಎಸ್‌ಟಿ, ಒಬಿಸಿಯ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ. ಈ ಮೂಲಕ ಅವರನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಮನುವಾದ’ ಎಂಬುದು ಮನುಸ್ಮೃತಿಯಿಂದ ಆಳಲ್ಪಡುವ ನೀತಿಯಾಗಿದೆ. ಶಿಕ್ಷಣವು ಸಮಾನತೆಗೆ ದೊಡ್ಡ ಅಸ್ತ್ರವಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆರ್‌ಎಸ್‌ಎಸ್ ಈ ಶಕ್ತಿಯನ್ನು ಬುಡಮೇಲು ಮಾಡುತ್ತಿವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಮೋದಿ ಸರ್ಕಾರ ಈ ಅಸ್ತ್ರವನ್ನು ಮೊಂಡಾಗಿಸುವಲ್ಲಿ ನಿರತವಾಗಿದೆ” ಎಂದಿದ್ದಾರೆ.

‘ಅರ್ಹರಲ್ಲ’ (Not Found Suitable-NFS) ಎಂದು ಹೇಳಿಕೊಂಡು ದೆಹಲಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಮತ್ತು ಸಹಾಯಕ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ. 30ಕ್ಕಿಂತ ಹೆಚ್ಚು ಖಾಲಿ ಇಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಐಐಟಿಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳು ಇದಕ್ಕೆ ಹೊರತಾಗಿಲ್ಲ. ಎಲ್ಲೆಡೆ ಒಂದೇ ರೀತಿಯ ಪಿತೂರಿ ನಡೆಯುತ್ತಿದೆ. ‘ಅರ್ಹರಲ್ಲ’ ಎಂಬುವುದು ಸಂವಿಧಾನದ ಮೇಲಿನ ದಾಳಿಯಾಗಿದೆ. ಸಾಮಾಜಿಕ ನ್ಯಾಯಕ್ಕೆ ಮಾಡುವ ದ್ರೋಹವಾಗಿದೆ ಎಂದಿದ್ದಾರೆ.

ಮೀಸಲಾತಿ ಪಡೆಯುವುದು ಹಕ್ಕು, ಗೌರವ ಮತ್ತು ಭಾಗವಹಿಸುವಿಕೆಗಾಗಿ ಹೋರಾಡುವ ವಿಷಯ ಎಂದಿರುವ ರಾಹುಲ್ ಗಾಂಧಿ, “ನಾನು ಡಿಯುಎಸ್‌ಯು ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ/ಆರೆಸ್ಸೆಸ್‌ನ ಪ್ರತಿಯೊಂದು ಮೀಸಲಾತಿ ವಿರೋಧಿ ಕ್ರಮಕ್ಕೂ ಸಂವಿಧಾನದ ಶಕ್ತಿಯೊಂದಿಗೆ ಉತ್ತರಿಸುತ್ತೇವೆ” ಎಂದು ತಿಳಿಸಿದ್ದಾರೆ.

ವಿಡಿಯೋದಲ್ಲಿ ‘ಹಿಂದುತ್ವ’ ಯೋಜನೆಯ ಅಡಿಪಾಯ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಇತಿಹಾಸವನ್ನು ಅಳಿಸುವುದು ಎಂದು ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳಿಗೆ ಹೇಳುವುದನ್ನು ನೋಡಬಹುದು.

“ಶೇಕಡಾ 90ರಷ್ಟು ಜನರ ಇತಿಹಾಸ ನಮ್ಮ ಪುಸ್ತಕಗಳಲ್ಲಿ ಏಕಿಲ್ಲ? ಕೇವಲ 10ರಷ್ಟು ಜನರ ಇತಿಹಾಸ ಮಾತ್ರ ಏಕೆ ಇದೆ? ಉದಾಹರಣೆಗೆ: ನಮ್ಮ ಇತಿಹಾಸ ಪುಸ್ತಕಗಳಲ್ಲಿ 3,000 ವರ್ಷಗಳಿಂದ ದಲಿತರನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ, ಗೌರವಿಸಲಾಗಿಲ್ಲ, ನಮ್ಮ ಸಮಾಜದಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಲಾಗಿಲ್ಲ ಎಂದು ಏಕೆ ಬರೆದಿಲ್ಲ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಮೇ 22ರಂದು ದೆಹಲಿ ವಿಶ್ವ ವಿದ್ಯಾಲಯವು ತನ್ನ ಉತ್ತರ ಕ್ಯಾಂಪಸ್‌ಗೆ ರಾಹುಲ್ ಗಾಂಧಿಯವರ ಅಘೋಷಿತ ಭೇಟಿಯನ್ನು ಆಕ್ಷೇಪಿಸಿತ್ತು. ಇದು ಸಾಂಸ್ಥಿಕ ಶಿಷ್ಟಾಚಾರದ ಉಲ್ಲಂಘನೆ ಮತ್ತು ವಿದ್ಯಾರ್ಥಿ ಆಡಳಿತ ಕಾರ್ಯಾಚರಣೆಗಳಿಗೆ ಅಡ್ಡಿ ಎಂದಿತ್ತು.

ಈ ರೀತಿ ಯಾವುದೇ ಮುನ್ಸೂಚನೆ ನೀಡದೆ ರಾಹುಲ್ ಗಾಂಧಿ ಭೇಟಿ ನೀಡಿರುವುದು ಎರಡನೆ ಬಾರಿಯಾಗಿದೆ ಎಂದು ವಿವಿಯ ಪ್ರಾಕ್ಟರ್ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.

ರಾಹುಲ್ ಗಾಂಧಿಯವರು ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು.

ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಬೆಂಬಲಿತ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರ ಕಚೇರಿಯಲ್ಲಿ ರಾಹುಲ್ ಗಾಂಧಿ ಸಭೆ ನಡೆಸಿದ್ದರು.

ಬ್ರಿಜ್‌ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ: ದೆಹಲಿ ಪೊಲೀಸರಿಂದ ಮುಕ್ತಾಯ ವರದಿ; ಅಂಗೀಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...