Homeಮುಖಪುಟಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ 'ಅರ್ಹರಲ್ಲ' ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

"Not Found Suitable ಈಗ ಹೊಸ ಮನುವಾದ"

- Advertisement -
- Advertisement -

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಅರ್ಹ ಅಭ್ಯರ್ಥಿಗಳನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಸದಸ್ಯರೊಂದಿಗೆ ಇತ್ತೀಚೆಗೆ ನಡೆಸಿದ ಸಂವಾದದ ವಿಡಿಯೋವನ್ನು ರಾಹುಲ್ ಗಾಂಧಿ ಮಂಗಳವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಮೇಲಿನ ಹೇಳಿಕೆ ನೀಡಿರುವುದು ನೋಡಬಹುದು.

‘ಅರ್ಹರಲ್ಲ’ ಎಂಬುದು ಈಗ ಹೊಸ ಮನುವಾದ. ಎಸ್‌ಸಿ, ಎಸ್‌ಟಿ, ಒಬಿಸಿಯ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ. ಈ ಮೂಲಕ ಅವರನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲಾಗುತ್ತಿದೆ” ಎಂದು ರಾಹುಲ್ ಗಾಂಧಿ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಮನುವಾದ’ ಎಂಬುದು ಮನುಸ್ಮೃತಿಯಿಂದ ಆಳಲ್ಪಡುವ ನೀತಿಯಾಗಿದೆ. ಶಿಕ್ಷಣವು ಸಮಾನತೆಗೆ ದೊಡ್ಡ ಅಸ್ತ್ರವಾಗಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಆರ್‌ಎಸ್‌ಎಸ್ ಈ ಶಕ್ತಿಯನ್ನು ಬುಡಮೇಲು ಮಾಡುತ್ತಿವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಮೋದಿ ಸರ್ಕಾರ ಈ ಅಸ್ತ್ರವನ್ನು ಮೊಂಡಾಗಿಸುವಲ್ಲಿ ನಿರತವಾಗಿದೆ” ಎಂದಿದ್ದಾರೆ.

‘ಅರ್ಹರಲ್ಲ’ (Not Found Suitable-NFS) ಎಂದು ಹೇಳಿಕೊಂಡು ದೆಹಲಿಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಮತ್ತು ಸಹಾಯಕ ಪ್ರಾಧ್ಯಾಪಕರ ಮೀಸಲು ಹುದ್ದೆಗಳಲ್ಲಿ ಶೇ. 30ಕ್ಕಿಂತ ಹೆಚ್ಚು ಖಾಲಿ ಇಡಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಐಐಟಿಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳು ಇದಕ್ಕೆ ಹೊರತಾಗಿಲ್ಲ. ಎಲ್ಲೆಡೆ ಒಂದೇ ರೀತಿಯ ಪಿತೂರಿ ನಡೆಯುತ್ತಿದೆ. ‘ಅರ್ಹರಲ್ಲ’ ಎಂಬುವುದು ಸಂವಿಧಾನದ ಮೇಲಿನ ದಾಳಿಯಾಗಿದೆ. ಸಾಮಾಜಿಕ ನ್ಯಾಯಕ್ಕೆ ಮಾಡುವ ದ್ರೋಹವಾಗಿದೆ ಎಂದಿದ್ದಾರೆ.

ಮೀಸಲಾತಿ ಪಡೆಯುವುದು ಹಕ್ಕು, ಗೌರವ ಮತ್ತು ಭಾಗವಹಿಸುವಿಕೆಗಾಗಿ ಹೋರಾಡುವ ವಿಷಯ ಎಂದಿರುವ ರಾಹುಲ್ ಗಾಂಧಿ, “ನಾನು ಡಿಯುಎಸ್‌ಯು ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ/ಆರೆಸ್ಸೆಸ್‌ನ ಪ್ರತಿಯೊಂದು ಮೀಸಲಾತಿ ವಿರೋಧಿ ಕ್ರಮಕ್ಕೂ ಸಂವಿಧಾನದ ಶಕ್ತಿಯೊಂದಿಗೆ ಉತ್ತರಿಸುತ್ತೇವೆ” ಎಂದು ತಿಳಿಸಿದ್ದಾರೆ.

ವಿಡಿಯೋದಲ್ಲಿ ‘ಹಿಂದುತ್ವ’ ಯೋಜನೆಯ ಅಡಿಪಾಯ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳ ಇತಿಹಾಸವನ್ನು ಅಳಿಸುವುದು ಎಂದು ರಾಹುಲ್ ಗಾಂಧಿಯವರು ವಿದ್ಯಾರ್ಥಿಗಳಿಗೆ ಹೇಳುವುದನ್ನು ನೋಡಬಹುದು.

“ಶೇಕಡಾ 90ರಷ್ಟು ಜನರ ಇತಿಹಾಸ ನಮ್ಮ ಪುಸ್ತಕಗಳಲ್ಲಿ ಏಕಿಲ್ಲ? ಕೇವಲ 10ರಷ್ಟು ಜನರ ಇತಿಹಾಸ ಮಾತ್ರ ಏಕೆ ಇದೆ? ಉದಾಹರಣೆಗೆ: ನಮ್ಮ ಇತಿಹಾಸ ಪುಸ್ತಕಗಳಲ್ಲಿ 3,000 ವರ್ಷಗಳಿಂದ ದಲಿತರನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ, ಗೌರವಿಸಲಾಗಿಲ್ಲ, ನಮ್ಮ ಸಮಾಜದಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಲಾಗಿಲ್ಲ ಎಂದು ಏಕೆ ಬರೆದಿಲ್ಲ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಮೇ 22ರಂದು ದೆಹಲಿ ವಿಶ್ವ ವಿದ್ಯಾಲಯವು ತನ್ನ ಉತ್ತರ ಕ್ಯಾಂಪಸ್‌ಗೆ ರಾಹುಲ್ ಗಾಂಧಿಯವರ ಅಘೋಷಿತ ಭೇಟಿಯನ್ನು ಆಕ್ಷೇಪಿಸಿತ್ತು. ಇದು ಸಾಂಸ್ಥಿಕ ಶಿಷ್ಟಾಚಾರದ ಉಲ್ಲಂಘನೆ ಮತ್ತು ವಿದ್ಯಾರ್ಥಿ ಆಡಳಿತ ಕಾರ್ಯಾಚರಣೆಗಳಿಗೆ ಅಡ್ಡಿ ಎಂದಿತ್ತು.

ಈ ರೀತಿ ಯಾವುದೇ ಮುನ್ಸೂಚನೆ ನೀಡದೆ ರಾಹುಲ್ ಗಾಂಧಿ ಭೇಟಿ ನೀಡಿರುವುದು ಎರಡನೆ ಬಾರಿಯಾಗಿದೆ ಎಂದು ವಿವಿಯ ಪ್ರಾಕ್ಟರ್ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.

ರಾಹುಲ್ ಗಾಂಧಿಯವರು ವಿವಿಯ ಉತ್ತರ ಕ್ಯಾಂಪಸ್‌ನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದರು.

ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐ ಬೆಂಬಲಿತ ದೆಹಲಿ ವಿವಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರ ಕಚೇರಿಯಲ್ಲಿ ರಾಹುಲ್ ಗಾಂಧಿ ಸಭೆ ನಡೆಸಿದ್ದರು.

ಬ್ರಿಜ್‌ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ: ದೆಹಲಿ ಪೊಲೀಸರಿಂದ ಮುಕ್ತಾಯ ವರದಿ; ಅಂಗೀಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...