Homeಮುಖಪುಟಕೇಂದ್ರೀಯ ವಿವಿಗಳಲ್ಲಿ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ 13,000ಕ್ಕೂ ಅಧಿಕ ಎಸ್ಸಿ-ಎಸ್ಟಿ,OBC ವಿದ್ಯಾರ್ಥಿಗಳು

ಕೇಂದ್ರೀಯ ವಿವಿಗಳಲ್ಲಿ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ 13,000ಕ್ಕೂ ಅಧಿಕ ಎಸ್ಸಿ-ಎಸ್ಟಿ,OBC ವಿದ್ಯಾರ್ಥಿಗಳು

- Advertisement -
- Advertisement -

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಗಣನೀಯ ಪ್ರಮಾಣದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವುದು ಬಹಿರಗವಾಗಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿಗಳು) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಸಂಸ್ಥೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಸುಮಾರು 13,626 ವಿದ್ಯಾರ್ಥಿಗಳು ಕಳೆದ 5 ವರ್ಷಗಳಲ್ಲಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಡ್ರಾಪ್ಔಟ್ ದರಗಳ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳಲು ಸರ್ಕಾರವು ಯಾವುದೇ ಅಧ್ಯಯನಗಳನ್ನು ನಡೆಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಭಾಸ್ ಸರ್ಕಾರ್, ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳು ಅನೇಕ ಆಯ್ಕೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ವಿವರ ನೀಡಿದ ಸಚಿವರು ಕಳೆದ 5 ವರ್ಷಗಳಲ್ಲಿ ಸುಮಾರು 4,596 OBC ಅಭ್ಯರ್ಥಿಗಳು, 2,424 SC ಮತ್ತು 2,622 ST ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ ಡ್ರಾಪ್‌ಔಟ್‌ ಮಾಡಿದ್ದಾರೆ. ಅದೇ ಅವಧಿಯಲ್ಲಿ 2,066 ಒಬಿಸಿ ಅಭ್ಯರ್ಥಿಗಳು, 1,068 ಎಸ್ಸಿ ಮತ್ತು 408 ಎಸ್ಟಿ ವಿದ್ಯಾರ್ಥಿಗಳು ಐಐಟಿಯಿಂದ ಡ್ರಾಪ್‌ಔಟ್‌ ಮಾಡಿದ್ದಾರೆ ಮತ್ತು 163 ಒಬಿಸಿ, 188 ಎಸ್ಸಿ ಮತ್ತು 91 ಎಸ್ಟಿ ಅಭ್ಯರ್ಥಿಗಳು ಐಐಎಂಗಳಿಂದ ಶಿಕ್ಷಣವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಸುಭಾಸ್ ಅವರು ಹೇಳಿದ್ದಾರೆ.

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳನ್ನು ಪೂರ್ವಭಾವಿಯಾಗಿ ಪರಿಹರಿಸಲು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಘಟಕ, ಸಮಾನ ಅವಕಾಶ ಘಟಕ, ವಿದ್ಯಾರ್ಥಿ ಕುಂದುಕೊರತೆ ನಿವಾರಣೆ ಘಟಕ, ವಿದ್ಯಾರ್ಥಿಗಳ ಸಾಮಾಜಿಕ ಕ್ಲಬ್ ಮುಂತಾದವುಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಕಾಲಕಾಲಕ್ಕೆ ವಿದ್ಯಾರ್ಥಿಗಳ ನಡುವೆ ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಸೂಚನೆಗಳನ್ನು ನೀಡಿದೆ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರವು ಶುಲ್ಕ ಕಡಿತ, ಹೆಚ್ಚಿನ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುವುದು ಮತ್ತು ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆದ್ಯತೆ ನೀಡಿದೆ ಎಂದು ಸರ್ಕಾರ್ ಹೇಳಿದ್ದಾರೆ.

ವಿವಿಧ ಐಐಟಿ ಮತ್ತು ಐಐಎಂ ಕ್ಯಾಂಪಸ್‌ಗಳಲ್ಲಿ 33ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವಾಲಯ ಈ ವರ್ಷದ ಆರಂಭದಲ್ಲಿ ಸಂಸತ್ತಿಗೆ ಮಾಹಿತಿ ನೀಡಿತ್ತು. 2014 ಮತ್ತು 2021ರ ನಡುವೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರವು 2014ರಲ್ಲಿ ಸಂಸತ್ತಿಗೆ ತಿಳಿಸಿತ್ತು. ಆತ್ಮಹತ್ಯೆ ಮಾಡಿಕೊಂಡ 122 ವಿದ್ಯಾರ್ಥಿಗಳಲ್ಲಿ 24 ಎಸ್‌ಸಿ ಸಮುದಾಯಕ್ಕೆ ಸೇರಿದವರು, ಮೂವರು ಎಸ್‌ಟಿಗಳು ಮತ್ತು 41 ಒಬಿಸಿಗಳು ವಿದ್ಯಾರ್ಥಿಗಳು ಸೇರಿದ್ದಾರೆ.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...