Homeಮುಖಪುಟಕೇಂದ್ರೀಯ ವಿವಿಗಳಲ್ಲಿ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ 13,000ಕ್ಕೂ ಅಧಿಕ ಎಸ್ಸಿ-ಎಸ್ಟಿ,OBC ವಿದ್ಯಾರ್ಥಿಗಳು

ಕೇಂದ್ರೀಯ ವಿವಿಗಳಲ್ಲಿ ಶಿಕ್ಷಣ ಅರ್ಧಕ್ಕೆ ಮೊಟಕುಗೊಳಿಸಿದ 13,000ಕ್ಕೂ ಅಧಿಕ ಎಸ್ಸಿ-ಎಸ್ಟಿ,OBC ವಿದ್ಯಾರ್ಥಿಗಳು

- Advertisement -
- Advertisement -

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಗಣನೀಯ ಪ್ರಮಾಣದಲ್ಲಿ ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುತ್ತಿರುವುದು ಬಹಿರಗವಾಗಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿಗಳು) ಮತ್ತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ ಸಂಸ್ಥೆಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಸುಮಾರು 13,626 ವಿದ್ಯಾರ್ಥಿಗಳು ಕಳೆದ 5 ವರ್ಷಗಳಲ್ಲಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಹೇಳಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಡ್ರಾಪ್ಔಟ್ ದರಗಳ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳಲು ಸರ್ಕಾರವು ಯಾವುದೇ ಅಧ್ಯಯನಗಳನ್ನು ನಡೆಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಭಾಸ್ ಸರ್ಕಾರ್, ಉನ್ನತ ಶಿಕ್ಷಣ ವಲಯದಲ್ಲಿ ವಿದ್ಯಾರ್ಥಿಗಳು ಅನೇಕ ಆಯ್ಕೆಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಹೊರಗುಳಿದ ವಿದ್ಯಾರ್ಥಿಗಳ ವಿವರ ನೀಡಿದ ಸಚಿವರು ಕಳೆದ 5 ವರ್ಷಗಳಲ್ಲಿ ಸುಮಾರು 4,596 OBC ಅಭ್ಯರ್ಥಿಗಳು, 2,424 SC ಮತ್ತು 2,622 ST ವಿದ್ಯಾರ್ಥಿಗಳು ಕೇಂದ್ರೀಯ ವಿಶ್ವವಿದ್ಯಾಲಯಗಳಿಂದ ಡ್ರಾಪ್‌ಔಟ್‌ ಮಾಡಿದ್ದಾರೆ. ಅದೇ ಅವಧಿಯಲ್ಲಿ 2,066 ಒಬಿಸಿ ಅಭ್ಯರ್ಥಿಗಳು, 1,068 ಎಸ್ಸಿ ಮತ್ತು 408 ಎಸ್ಟಿ ವಿದ್ಯಾರ್ಥಿಗಳು ಐಐಟಿಯಿಂದ ಡ್ರಾಪ್‌ಔಟ್‌ ಮಾಡಿದ್ದಾರೆ ಮತ್ತು 163 ಒಬಿಸಿ, 188 ಎಸ್ಸಿ ಮತ್ತು 91 ಎಸ್ಟಿ ಅಭ್ಯರ್ಥಿಗಳು ಐಐಎಂಗಳಿಂದ ಶಿಕ್ಷಣವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಸುಭಾಸ್ ಅವರು ಹೇಳಿದ್ದಾರೆ.

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳನ್ನು ಪೂರ್ವಭಾವಿಯಾಗಿ ಪರಿಹರಿಸಲು, ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಘಟಕ, ಸಮಾನ ಅವಕಾಶ ಘಟಕ, ವಿದ್ಯಾರ್ಥಿ ಕುಂದುಕೊರತೆ ನಿವಾರಣೆ ಘಟಕ, ವಿದ್ಯಾರ್ಥಿಗಳ ಸಾಮಾಜಿಕ ಕ್ಲಬ್ ಮುಂತಾದವುಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ ಕಾಲಕಾಲಕ್ಕೆ ವಿದ್ಯಾರ್ಥಿಗಳ ನಡುವೆ ಸಮಾನತೆ ಮತ್ತು ಭ್ರಾತೃತ್ವವನ್ನು ಉತ್ತೇಜಿಸಲು ಸೂಚನೆಗಳನ್ನು ನೀಡಿದೆ ಎಂದು ಸಚಿವರು ಹೇಳಿದ್ದಾರೆ.

ಸರ್ಕಾರವು ಶುಲ್ಕ ಕಡಿತ, ಹೆಚ್ಚಿನ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುವುದು ಮತ್ತು ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆದ್ಯತೆ ನೀಡಿದೆ ಎಂದು ಸರ್ಕಾರ್ ಹೇಳಿದ್ದಾರೆ.

ವಿವಿಧ ಐಐಟಿ ಮತ್ತು ಐಐಎಂ ಕ್ಯಾಂಪಸ್‌ಗಳಲ್ಲಿ 33ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಿಕ್ಷಣ ಸಚಿವಾಲಯ ಈ ವರ್ಷದ ಆರಂಭದಲ್ಲಿ ಸಂಸತ್ತಿಗೆ ಮಾಹಿತಿ ನೀಡಿತ್ತು. 2014 ಮತ್ತು 2021ರ ನಡುವೆ ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 122 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರವು 2014ರಲ್ಲಿ ಸಂಸತ್ತಿಗೆ ತಿಳಿಸಿತ್ತು. ಆತ್ಮಹತ್ಯೆ ಮಾಡಿಕೊಂಡ 122 ವಿದ್ಯಾರ್ಥಿಗಳಲ್ಲಿ 24 ಎಸ್‌ಸಿ ಸಮುದಾಯಕ್ಕೆ ಸೇರಿದವರು, ಮೂವರು ಎಸ್‌ಟಿಗಳು ಮತ್ತು 41 ಒಬಿಸಿಗಳು ವಿದ್ಯಾರ್ಥಿಗಳು ಸೇರಿದ್ದಾರೆ.

ಇದನ್ನು ಓದಿ: ಮಾಜಿ ಶಾಸಕ ಮುಖ್ತಾರ್ ಹತ್ಯೆಗೆ ಸಂಚು? ಯುಪಿ ಜೈಲಿನಿಂದ ಸ್ಥಳಾಂತರಿಸುವಂತೆ ಸುಪ್ರೀಂ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...