Homeಮುಖಪುಟಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಹಗರಣ: ಶೈಕ್ಷಣಿಕ ಸಂಸ್ಥೆಗೆ ಸೇರಿದ 2 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಹಗರಣ: ಶೈಕ್ಷಣಿಕ ಸಂಸ್ಥೆಗೆ ಸೇರಿದ 2 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

- Advertisement -
- Advertisement -

ಉತ್ತರಾಖಂಡದ ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಶೈಕ್ಷಣಿಕ ಸಂಸ್ಥೆಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಡ ಮತ್ತು ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ರೂರ್ಕಿಯಲ್ಲಿನ ದೀನ್ ದಯಾಳ್ ಶರ್ಮಾ ಎಜುಕೇಷನಲ್ ಟ್ರಸ್ಟ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.

2013-14 ಮತ್ತು 2016-17ರ ಅವಧಿಗೆ ಹರಿದ್ವಾರದ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವಿದ್ಯಾರ್ಥಿಗಳ ಹೆಸರಿನಲ್ಲಿ ಸಂಸ್ಥೆಯು ವಂಚನೆಯಿಂದ ವಿದ್ಯಾರ್ಥಿ ವೇತನವನ್ನು ಪಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದೆ.

ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ಯೋಜನೆಯಡಿ ಹಣವನ್ನು ಪಡೆಯಲು ಸಂಸ್ಥೆಯು ಸುಳ್ಳು ಸಾಕ್ಷಿಗಳನ್ನು  ನೀಡಿದೆ ಮತ್ತು ವಿದ್ಯಾರ್ಥಿಗಳ ವೈಯಕ್ತಿಕ ವೆಚ್ಚಗಳು ಮತ್ತು ಕಾಲೇಜು ಬೋಧನಾ ಶುಲ್ಕದ ರೂಪದಲ್ಲಿ ಮೊತ್ತವನ್ನು ಕಾಲೇಜಿನ ಖಾತೆಗೆ ಜಮಾ ಮಾಡಲಾಗಿದೆ ಎಂದು ಇಡಿ ಹೇಳಿದೆ.

ಈ ಮೊತ್ತವನ್ನು ದೀನ್ ದಯಾಳ್ ಶರ್ಮಾ ಎಜುಕೇಷನಲ್ ಟ್ರಸ್ಟ್‌ನ ಟ್ರಸ್ಟಿಗಳಾದ ವಿವೇಕ್ ಶರ್ಮಾ ಮತ್ತು ಅಂಕುರ್ ಶರ್ಮಾ ಅವರು ಕಬಳಿಸಿದ್ದಾರೆ ಮತ್ತು ಇದು ಸಾರ್ವಜನಿಕ ಬೊಕ್ಕಸಕ್ಕೆ ಭಾರಿ ಆರ್ಥಿಕ ನಷ್ಟವನ್ನು ಉಂಟುಮಾಡಿದೆ ಎಂದು ಇಡಿ ಆರೋಪಿಸಿದೆ. ಈ ಹಣವನ್ನು ಶೈಕ್ಷಣಿಕ ಟ್ರಸ್ಟ್‌ನ ಬ್ಯಾಂಕ್ ಖಾತೆಗಳಿಗೆ ಅಥವಾ ಕಾಲೇಜಿನ ಇತರ ಖಾತೆಗಳಿಗೆ ವರ್ಗಾಯಿಸಲಾಗಿದೆ ಮತ್ತು ನಗದನ್ನು ಟ್ರಸ್ಟಿಗಳು ತಮ್ಮ ವೆಚ್ಚಗಳಿಗಾಗಿ ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

1.97 ಕೋಟಿ ಮೌಲ್ಯದ ಡೆಹ್ರಾಡೂನ್‌ನ ಮತ್ತು ಹರಿದ್ವಾರದಲ್ಲಿನ ಟ್ರಸ್ಟ್‌ನ ಭೂಮಿ ಮತ್ತು ಕಟ್ಟಡವನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಾತ್ಕಾಲಿಕವಾಗಿ ಜಪ್ತಿ ಮಾಡಲಾಗಿದೆ. ಈ ಬಗ್ಗೆ ಹರಿದ್ವಾರ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಡೆಹ್ರಾಡೂನ್ ಮೂಲದ ರವೀಂದ್ರ ಜುಗ್ರಾನ್ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ 2004ರಿಂದ ಈ ಹಗರಣ ನಡೆಯುತ್ತಿದೆ. ಈವರೆಗೆ 500 ಕೋಟಿ ರೂ.ಗಳಷ್ಟು ಭ್ರಷ್ಟಾಚಾರ ನಡೆದಿರುವ ಸಾಧ್ಯತೆ ಇದೆ. ವಂಚನೆ ದೊಡ್ಡದಾಗಿದೆ ಮತ್ತು ಹಣವನ್ನು ಅನೇಕರು ಕಬಳಿಸುತ್ತಿದ್ದಾರೆ. ಇದರಲ್ಲಿ ದಲ್ಲಾಳಿಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳು ಭಾಗಿಯಾಗಿದ್ದಾರೆ. ದಲಿತ ಸಮುದಾಯಕ್ಕೆ ಮೀಸಲಾದ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ನಾನು ಅರ್ಜಿಯನ್ನು ಸಲ್ಲಿಸಿದ್ದೇನೆ ಎಂದು ರವೀಂದ್ರ ಜುಗ್ರಾನ್ ಹೇಳಿದ್ದರು.

2018ರಲ್ಲಿ ಉತ್ತರಾಖಂಡದಲ್ಲಿ ಎಸ್ಸಿ-ಎಸ್ಟಿ ವಿದ್ಯಾರ್ಥಿವೇತನ ವಿತರಣೆಯಲ್ಲಿನ ಹಣಕಾಸಿನ ಅವ್ಯವಹಾರಗಳ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಉತ್ತರಾಖಂಡದ ಕೆಲ ಕಾಲೇಜುಗಳು ವಿದ್ಯಾರ್ಥಿಗಳ ನಕಲಿ ದಾಖಲೆ ಸೃಷ್ಟಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಪಡೆದು ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.

ಇದನ್ನು ಓದಿ: ‘ಭಗವಾನ್ ರಾಮನನ್ನು’ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲು ಮಾತ್ರ ಬಾಕಿ ಉಳಿದಿದೆ: ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...