HomeಮುಖಪುಟSC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು 'Pradhan Mantri Young Achievers Scholarship Award Scheme for Vibrant India (PM-YASASVI)' ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

- Advertisement -
- Advertisement -

1944ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್ಶಿಪ್” (ಪಿಎಂಎಸ್)” ಅಂಬೇಡ್ಕರ್ ಅವರ ಪ್ರಿಯವಾದ ಯೋಜನೆಯಾಗಿತ್ತು. ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಶಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಕುಟುಂಬದ ಮಕ್ಕಳಿಗೆ ಸ್ಕಾಲರ್ಶಿಪ್ ದೊರಕುತ್ತಿತ್ತು. (ಇಂದಿಗೂ ಆದಾಯದ ಮಿತಿಯನ್ನು ಹೆಚ್ಚಿಸಿಲ್ಲ ಮತ್ತು 2013 ರಿಂದ ಸ್ಕಾಲರ್ಶಿಪ್ ಮೊತ್ತವನ್ನು ಹೆಚ್ಚಿಸಿಲ್ಲ)

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುವ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಈ ಸ್ಕಾಲರ್ಶಿಪನ್ನು ಮೋದಿ ಸರಕಾರ ನಿಲ್ಲಿಸುವ ಎಲ್ಲಾ ಸೂಚನೆಗಳಿವೆ.

ಎರಡನೇ ಬಾರಿ ಗೆದ್ದ ನಂತರ ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಅಂದರೆ ಶೇ. 60 ರಶ್ಟು ಕೇಂದ್ರ, ಶೇ. 40 ರಶ್ಟು ರಾಜ್ಯಗಳು ಆರ್ಥಿಕ ಅನುದಾನವನ್ನು ಹಂಚಿಕೊಳ್ಳಬೇಕು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ದಿಢೀರನೆ ಮೇಲೆರಗಿದ ಈ ಜವಬ್ದಾರಿಯನ್ನು ಹೊರಲು ರಾಜ್ಯ ಸರಕಾರಗಳು ತಯಾರಿಲ್ಲ. ಅಲ್ಲದೆ ಕಳೆದ ಎರಡು ವರ್ಶಗಳಿಂದ ಕೇಂದ್ರ ಸರಕಾರವು ಈ ‘ಪಿಎಂಎಸ್’ ಸ್ಕಾಲರ್ಶಿಪ್ ಗೆ ಆರ್ಥಿಕ ಅನುದಾನವನ್ನೂ ಕೊಡುತ್ತಿಲ್ಲ.

2019-20 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 7,150 ಕೋಟಿ ಕೇಳಿದ್ದಕ್ಕೆ ಕೇಂದ್ರ ಹಣಕಾಸು ಇಲಾಖೆಯು ಕೇವಲ 2,927 ಕೋಟಿ ನೀಡಿದೆ. 4,198 ಕೋಟಿ ಮೊತ್ತದ ಕೊರತೆಯ ದುಶ್ಪರಿಣಾಮ ದಲಿತ ಮಕ್ಕಳ ಮೇಲಾಗಿದೆ. ಈ ಹಿಂದೆ 5.8 ಮಿಲಿಯನ್ ಮಕ್ಕಳು ಇದರ ಅನುಕೂಲ ಪಡೆದುಕೊಂಡಿದ್ದರೆ, 2019 ರಲ್ಲಿ ಆ ಸಂಖ್ಯೆ 3 ಮಿಲಿಯನ್ ಗೆ ಕುಸಿದಿದೆ. ಇನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಹಣವನ್ನು ಕೊಡದೇ ಇರುವುದರಿಂದ ದಲಿತ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುವ ಸಾಧ್ಯತೆಗಳಿಲ್ಲ.

ಇದೆಲ್ಲದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಾರ್ಚ್ 2020ರಲ್ಲಿ ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು ‘Pradhan Mantri Young Achievers Scholarship Award Scheme for Vibrant India (PM-YASASVI)’ ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

ಇದನ್ನೂ ಓದಿ:ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಈ ಯೋಜನೆಯ ಅನುಕೂಲ ಪಡೆದುಕೊಳ್ಳಲು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅಂದರೆ ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸದೆ ಕೇವಲ ಮೆರಿಟ್ ಆದಾರದಲ್ಲಿ ಸ್ಕಾಲರ್ಶಿಪ್ ಕೊಡಲು ಮೋದಿ ಸರಕಾರ ನಿರ್ದರಿಸಿದೆ.

ಆದರೆ ಭಾರತದಂತಹ ಜಾತಿ ಅಸಮಾನತೆ ದೇಶದಲ್ಲಿ ಮೆರಿಟ್ ಎನ್ನುವ ಪರಿಕಲ್ಪನೆಯು ‘leagalises the exclusion’ ಉಳ್ಳವರು ಮಾತ್ರ ಮುಂದುವರೆಯುತ್ತಾರೆ. ಮೋದಿ ಸರಕಾರದ ಈ ನಿರ್ದಾರದಿಂದ ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತಗೊಳ್ಳಲಿವೆ. ಜಾತಿ ತಾರತಮ್ಯದ ಈ ದೇಶದಲ್ಲಿ ಓಬಿಸಿ, ಪ. ಜಾತಿ, ಪ. ಪಂಗಡಗಳನ್ನು ಒಂದೇ ತಕ್ಕಡಿಯಲ್ಲಿಡುವುದು ದಲಿತ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಲಿದೆ.

ಆದರೆ ಈ ಕುರಿತು ಯಾರೂ ತಲೆಕೆಡಿಸಿಕೊಂಡಂತಿಲ್ಲ. ಸಾಮಾಜಿಕ ನ್ಯಾಯದ ಆರಂಬಿಕ ಮೆಟ್ಟಿಲಾದ ಸ್ಕಾಲರ್ಶಿಪ್, ಹಾಸ್ಟೆಲ್ ವ್ಯವಸ್ಥೆಯನ್ನು ಕಳೆದುಕೊಳ್ಳಬಾರದು. ಸಾಮಾಜಿಕ ಸಂಘಟನೆಗಳು ಈ ಕುರಿತು ಗಂಬೀರವಾಗಿ ಆಲೋಚಿಸಬೇಕು.

(ಈ ಬರಹದಲ್ಲಿ ಕನ್ನಡ ನುಡಿಗೆ ಹೊಂದದ ಮಹಾಪ್ರಾಣಗಳನ್ನು ಕೈಬಿಡಲಾಗಿದೆ ಅಥವಾ ಮಿತವಾಗಿ ಬಳಸಲಾಗಿದೆ)

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. If you stop the scholarship I think soo many people we’re not able to continue their education. Bcz of only scholarship many students are still studying including me..if this is the case we will going to spoil our life’s.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...