HomeಮುಖಪುಟSC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು 'Pradhan Mantri Young Achievers Scholarship Award Scheme for Vibrant India (PM-YASASVI)' ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

- Advertisement -
- Advertisement -

1944ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್ಶಿಪ್” (ಪಿಎಂಎಸ್)” ಅಂಬೇಡ್ಕರ್ ಅವರ ಪ್ರಿಯವಾದ ಯೋಜನೆಯಾಗಿತ್ತು. ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಶಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಕುಟುಂಬದ ಮಕ್ಕಳಿಗೆ ಸ್ಕಾಲರ್ಶಿಪ್ ದೊರಕುತ್ತಿತ್ತು. (ಇಂದಿಗೂ ಆದಾಯದ ಮಿತಿಯನ್ನು ಹೆಚ್ಚಿಸಿಲ್ಲ ಮತ್ತು 2013 ರಿಂದ ಸ್ಕಾಲರ್ಶಿಪ್ ಮೊತ್ತವನ್ನು ಹೆಚ್ಚಿಸಿಲ್ಲ)

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುವ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಈ ಸ್ಕಾಲರ್ಶಿಪನ್ನು ಮೋದಿ ಸರಕಾರ ನಿಲ್ಲಿಸುವ ಎಲ್ಲಾ ಸೂಚನೆಗಳಿವೆ.

ಎರಡನೇ ಬಾರಿ ಗೆದ್ದ ನಂತರ ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಅಂದರೆ ಶೇ. 60 ರಶ್ಟು ಕೇಂದ್ರ, ಶೇ. 40 ರಶ್ಟು ರಾಜ್ಯಗಳು ಆರ್ಥಿಕ ಅನುದಾನವನ್ನು ಹಂಚಿಕೊಳ್ಳಬೇಕು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ದಿಢೀರನೆ ಮೇಲೆರಗಿದ ಈ ಜವಬ್ದಾರಿಯನ್ನು ಹೊರಲು ರಾಜ್ಯ ಸರಕಾರಗಳು ತಯಾರಿಲ್ಲ. ಅಲ್ಲದೆ ಕಳೆದ ಎರಡು ವರ್ಶಗಳಿಂದ ಕೇಂದ್ರ ಸರಕಾರವು ಈ ‘ಪಿಎಂಎಸ್’ ಸ್ಕಾಲರ್ಶಿಪ್ ಗೆ ಆರ್ಥಿಕ ಅನುದಾನವನ್ನೂ ಕೊಡುತ್ತಿಲ್ಲ.

2019-20 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 7,150 ಕೋಟಿ ಕೇಳಿದ್ದಕ್ಕೆ ಕೇಂದ್ರ ಹಣಕಾಸು ಇಲಾಖೆಯು ಕೇವಲ 2,927 ಕೋಟಿ ನೀಡಿದೆ. 4,198 ಕೋಟಿ ಮೊತ್ತದ ಕೊರತೆಯ ದುಶ್ಪರಿಣಾಮ ದಲಿತ ಮಕ್ಕಳ ಮೇಲಾಗಿದೆ. ಈ ಹಿಂದೆ 5.8 ಮಿಲಿಯನ್ ಮಕ್ಕಳು ಇದರ ಅನುಕೂಲ ಪಡೆದುಕೊಂಡಿದ್ದರೆ, 2019 ರಲ್ಲಿ ಆ ಸಂಖ್ಯೆ 3 ಮಿಲಿಯನ್ ಗೆ ಕುಸಿದಿದೆ. ಇನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಹಣವನ್ನು ಕೊಡದೇ ಇರುವುದರಿಂದ ದಲಿತ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುವ ಸಾಧ್ಯತೆಗಳಿಲ್ಲ.

ಇದೆಲ್ಲದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಾರ್ಚ್ 2020ರಲ್ಲಿ ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು ‘Pradhan Mantri Young Achievers Scholarship Award Scheme for Vibrant India (PM-YASASVI)’ ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

ಇದನ್ನೂ ಓದಿ:ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಈ ಯೋಜನೆಯ ಅನುಕೂಲ ಪಡೆದುಕೊಳ್ಳಲು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅಂದರೆ ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸದೆ ಕೇವಲ ಮೆರಿಟ್ ಆದಾರದಲ್ಲಿ ಸ್ಕಾಲರ್ಶಿಪ್ ಕೊಡಲು ಮೋದಿ ಸರಕಾರ ನಿರ್ದರಿಸಿದೆ.

ಆದರೆ ಭಾರತದಂತಹ ಜಾತಿ ಅಸಮಾನತೆ ದೇಶದಲ್ಲಿ ಮೆರಿಟ್ ಎನ್ನುವ ಪರಿಕಲ್ಪನೆಯು ‘leagalises the exclusion’ ಉಳ್ಳವರು ಮಾತ್ರ ಮುಂದುವರೆಯುತ್ತಾರೆ. ಮೋದಿ ಸರಕಾರದ ಈ ನಿರ್ದಾರದಿಂದ ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತಗೊಳ್ಳಲಿವೆ. ಜಾತಿ ತಾರತಮ್ಯದ ಈ ದೇಶದಲ್ಲಿ ಓಬಿಸಿ, ಪ. ಜಾತಿ, ಪ. ಪಂಗಡಗಳನ್ನು ಒಂದೇ ತಕ್ಕಡಿಯಲ್ಲಿಡುವುದು ದಲಿತ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಲಿದೆ.

ಆದರೆ ಈ ಕುರಿತು ಯಾರೂ ತಲೆಕೆಡಿಸಿಕೊಂಡಂತಿಲ್ಲ. ಸಾಮಾಜಿಕ ನ್ಯಾಯದ ಆರಂಬಿಕ ಮೆಟ್ಟಿಲಾದ ಸ್ಕಾಲರ್ಶಿಪ್, ಹಾಸ್ಟೆಲ್ ವ್ಯವಸ್ಥೆಯನ್ನು ಕಳೆದುಕೊಳ್ಳಬಾರದು. ಸಾಮಾಜಿಕ ಸಂಘಟನೆಗಳು ಈ ಕುರಿತು ಗಂಬೀರವಾಗಿ ಆಲೋಚಿಸಬೇಕು.

(ಈ ಬರಹದಲ್ಲಿ ಕನ್ನಡ ನುಡಿಗೆ ಹೊಂದದ ಮಹಾಪ್ರಾಣಗಳನ್ನು ಕೈಬಿಡಲಾಗಿದೆ ಅಥವಾ ಮಿತವಾಗಿ ಬಳಸಲಾಗಿದೆ)

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. If you stop the scholarship I think soo many people we’re not able to continue their education. Bcz of only scholarship many students are still studying including me..if this is the case we will going to spoil our life’s.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...