HomeಮುಖಪುಟSC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು 'Pradhan Mantri Young Achievers Scholarship Award Scheme for Vibrant India (PM-YASASVI)' ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

- Advertisement -
- Advertisement -

1944ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್ಶಿಪ್” (ಪಿಎಂಎಸ್)” ಅಂಬೇಡ್ಕರ್ ಅವರ ಪ್ರಿಯವಾದ ಯೋಜನೆಯಾಗಿತ್ತು. ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಶಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಕುಟುಂಬದ ಮಕ್ಕಳಿಗೆ ಸ್ಕಾಲರ್ಶಿಪ್ ದೊರಕುತ್ತಿತ್ತು. (ಇಂದಿಗೂ ಆದಾಯದ ಮಿತಿಯನ್ನು ಹೆಚ್ಚಿಸಿಲ್ಲ ಮತ್ತು 2013 ರಿಂದ ಸ್ಕಾಲರ್ಶಿಪ್ ಮೊತ್ತವನ್ನು ಹೆಚ್ಚಿಸಿಲ್ಲ)

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುವ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಈ ಸ್ಕಾಲರ್ಶಿಪನ್ನು ಮೋದಿ ಸರಕಾರ ನಿಲ್ಲಿಸುವ ಎಲ್ಲಾ ಸೂಚನೆಗಳಿವೆ.

ಎರಡನೇ ಬಾರಿ ಗೆದ್ದ ನಂತರ ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಅಂದರೆ ಶೇ. 60 ರಶ್ಟು ಕೇಂದ್ರ, ಶೇ. 40 ರಶ್ಟು ರಾಜ್ಯಗಳು ಆರ್ಥಿಕ ಅನುದಾನವನ್ನು ಹಂಚಿಕೊಳ್ಳಬೇಕು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ದಿಢೀರನೆ ಮೇಲೆರಗಿದ ಈ ಜವಬ್ದಾರಿಯನ್ನು ಹೊರಲು ರಾಜ್ಯ ಸರಕಾರಗಳು ತಯಾರಿಲ್ಲ. ಅಲ್ಲದೆ ಕಳೆದ ಎರಡು ವರ್ಶಗಳಿಂದ ಕೇಂದ್ರ ಸರಕಾರವು ಈ ‘ಪಿಎಂಎಸ್’ ಸ್ಕಾಲರ್ಶಿಪ್ ಗೆ ಆರ್ಥಿಕ ಅನುದಾನವನ್ನೂ ಕೊಡುತ್ತಿಲ್ಲ.

2019-20 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 7,150 ಕೋಟಿ ಕೇಳಿದ್ದಕ್ಕೆ ಕೇಂದ್ರ ಹಣಕಾಸು ಇಲಾಖೆಯು ಕೇವಲ 2,927 ಕೋಟಿ ನೀಡಿದೆ. 4,198 ಕೋಟಿ ಮೊತ್ತದ ಕೊರತೆಯ ದುಶ್ಪರಿಣಾಮ ದಲಿತ ಮಕ್ಕಳ ಮೇಲಾಗಿದೆ. ಈ ಹಿಂದೆ 5.8 ಮಿಲಿಯನ್ ಮಕ್ಕಳು ಇದರ ಅನುಕೂಲ ಪಡೆದುಕೊಂಡಿದ್ದರೆ, 2019 ರಲ್ಲಿ ಆ ಸಂಖ್ಯೆ 3 ಮಿಲಿಯನ್ ಗೆ ಕುಸಿದಿದೆ. ಇನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಹಣವನ್ನು ಕೊಡದೇ ಇರುವುದರಿಂದ ದಲಿತ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುವ ಸಾಧ್ಯತೆಗಳಿಲ್ಲ.

ಇದೆಲ್ಲದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಾರ್ಚ್ 2020ರಲ್ಲಿ ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು ‘Pradhan Mantri Young Achievers Scholarship Award Scheme for Vibrant India (PM-YASASVI)’ ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

ಇದನ್ನೂ ಓದಿ:ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಈ ಯೋಜನೆಯ ಅನುಕೂಲ ಪಡೆದುಕೊಳ್ಳಲು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅಂದರೆ ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸದೆ ಕೇವಲ ಮೆರಿಟ್ ಆದಾರದಲ್ಲಿ ಸ್ಕಾಲರ್ಶಿಪ್ ಕೊಡಲು ಮೋದಿ ಸರಕಾರ ನಿರ್ದರಿಸಿದೆ.

ಆದರೆ ಭಾರತದಂತಹ ಜಾತಿ ಅಸಮಾನತೆ ದೇಶದಲ್ಲಿ ಮೆರಿಟ್ ಎನ್ನುವ ಪರಿಕಲ್ಪನೆಯು ‘leagalises the exclusion’ ಉಳ್ಳವರು ಮಾತ್ರ ಮುಂದುವರೆಯುತ್ತಾರೆ. ಮೋದಿ ಸರಕಾರದ ಈ ನಿರ್ದಾರದಿಂದ ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತಗೊಳ್ಳಲಿವೆ. ಜಾತಿ ತಾರತಮ್ಯದ ಈ ದೇಶದಲ್ಲಿ ಓಬಿಸಿ, ಪ. ಜಾತಿ, ಪ. ಪಂಗಡಗಳನ್ನು ಒಂದೇ ತಕ್ಕಡಿಯಲ್ಲಿಡುವುದು ದಲಿತ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಲಿದೆ.

ಆದರೆ ಈ ಕುರಿತು ಯಾರೂ ತಲೆಕೆಡಿಸಿಕೊಂಡಂತಿಲ್ಲ. ಸಾಮಾಜಿಕ ನ್ಯಾಯದ ಆರಂಬಿಕ ಮೆಟ್ಟಿಲಾದ ಸ್ಕಾಲರ್ಶಿಪ್, ಹಾಸ್ಟೆಲ್ ವ್ಯವಸ್ಥೆಯನ್ನು ಕಳೆದುಕೊಳ್ಳಬಾರದು. ಸಾಮಾಜಿಕ ಸಂಘಟನೆಗಳು ಈ ಕುರಿತು ಗಂಬೀರವಾಗಿ ಆಲೋಚಿಸಬೇಕು.

(ಈ ಬರಹದಲ್ಲಿ ಕನ್ನಡ ನುಡಿಗೆ ಹೊಂದದ ಮಹಾಪ್ರಾಣಗಳನ್ನು ಕೈಬಿಡಲಾಗಿದೆ ಅಥವಾ ಮಿತವಾಗಿ ಬಳಸಲಾಗಿದೆ)

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. If you stop the scholarship I think soo many people we’re not able to continue their education. Bcz of only scholarship many students are still studying including me..if this is the case we will going to spoil our life’s.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...