HomeಮುಖಪುಟSC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು 'Pradhan Mantri Young Achievers Scholarship Award Scheme for Vibrant India (PM-YASASVI)' ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

- Advertisement -
- Advertisement -

1944ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್ಶಿಪ್” (ಪಿಎಂಎಸ್)” ಅಂಬೇಡ್ಕರ್ ಅವರ ಪ್ರಿಯವಾದ ಯೋಜನೆಯಾಗಿತ್ತು. ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಶಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಕುಟುಂಬದ ಮಕ್ಕಳಿಗೆ ಸ್ಕಾಲರ್ಶಿಪ್ ದೊರಕುತ್ತಿತ್ತು. (ಇಂದಿಗೂ ಆದಾಯದ ಮಿತಿಯನ್ನು ಹೆಚ್ಚಿಸಿಲ್ಲ ಮತ್ತು 2013 ರಿಂದ ಸ್ಕಾಲರ್ಶಿಪ್ ಮೊತ್ತವನ್ನು ಹೆಚ್ಚಿಸಿಲ್ಲ)

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುವ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಈ ಸ್ಕಾಲರ್ಶಿಪನ್ನು ಮೋದಿ ಸರಕಾರ ನಿಲ್ಲಿಸುವ ಎಲ್ಲಾ ಸೂಚನೆಗಳಿವೆ.

ಎರಡನೇ ಬಾರಿ ಗೆದ್ದ ನಂತರ ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಅಂದರೆ ಶೇ. 60 ರಶ್ಟು ಕೇಂದ್ರ, ಶೇ. 40 ರಶ್ಟು ರಾಜ್ಯಗಳು ಆರ್ಥಿಕ ಅನುದಾನವನ್ನು ಹಂಚಿಕೊಳ್ಳಬೇಕು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ದಿಢೀರನೆ ಮೇಲೆರಗಿದ ಈ ಜವಬ್ದಾರಿಯನ್ನು ಹೊರಲು ರಾಜ್ಯ ಸರಕಾರಗಳು ತಯಾರಿಲ್ಲ. ಅಲ್ಲದೆ ಕಳೆದ ಎರಡು ವರ್ಶಗಳಿಂದ ಕೇಂದ್ರ ಸರಕಾರವು ಈ ‘ಪಿಎಂಎಸ್’ ಸ್ಕಾಲರ್ಶಿಪ್ ಗೆ ಆರ್ಥಿಕ ಅನುದಾನವನ್ನೂ ಕೊಡುತ್ತಿಲ್ಲ.

2019-20 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 7,150 ಕೋಟಿ ಕೇಳಿದ್ದಕ್ಕೆ ಕೇಂದ್ರ ಹಣಕಾಸು ಇಲಾಖೆಯು ಕೇವಲ 2,927 ಕೋಟಿ ನೀಡಿದೆ. 4,198 ಕೋಟಿ ಮೊತ್ತದ ಕೊರತೆಯ ದುಶ್ಪರಿಣಾಮ ದಲಿತ ಮಕ್ಕಳ ಮೇಲಾಗಿದೆ. ಈ ಹಿಂದೆ 5.8 ಮಿಲಿಯನ್ ಮಕ್ಕಳು ಇದರ ಅನುಕೂಲ ಪಡೆದುಕೊಂಡಿದ್ದರೆ, 2019 ರಲ್ಲಿ ಆ ಸಂಖ್ಯೆ 3 ಮಿಲಿಯನ್ ಗೆ ಕುಸಿದಿದೆ. ಇನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಹಣವನ್ನು ಕೊಡದೇ ಇರುವುದರಿಂದ ದಲಿತ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುವ ಸಾಧ್ಯತೆಗಳಿಲ್ಲ.

ಇದೆಲ್ಲದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಾರ್ಚ್ 2020ರಲ್ಲಿ ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು ‘Pradhan Mantri Young Achievers Scholarship Award Scheme for Vibrant India (PM-YASASVI)’ ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

ಇದನ್ನೂ ಓದಿ:ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಈ ಯೋಜನೆಯ ಅನುಕೂಲ ಪಡೆದುಕೊಳ್ಳಲು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅಂದರೆ ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸದೆ ಕೇವಲ ಮೆರಿಟ್ ಆದಾರದಲ್ಲಿ ಸ್ಕಾಲರ್ಶಿಪ್ ಕೊಡಲು ಮೋದಿ ಸರಕಾರ ನಿರ್ದರಿಸಿದೆ.

ಆದರೆ ಭಾರತದಂತಹ ಜಾತಿ ಅಸಮಾನತೆ ದೇಶದಲ್ಲಿ ಮೆರಿಟ್ ಎನ್ನುವ ಪರಿಕಲ್ಪನೆಯು ‘leagalises the exclusion’ ಉಳ್ಳವರು ಮಾತ್ರ ಮುಂದುವರೆಯುತ್ತಾರೆ. ಮೋದಿ ಸರಕಾರದ ಈ ನಿರ್ದಾರದಿಂದ ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತಗೊಳ್ಳಲಿವೆ. ಜಾತಿ ತಾರತಮ್ಯದ ಈ ದೇಶದಲ್ಲಿ ಓಬಿಸಿ, ಪ. ಜಾತಿ, ಪ. ಪಂಗಡಗಳನ್ನು ಒಂದೇ ತಕ್ಕಡಿಯಲ್ಲಿಡುವುದು ದಲಿತ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಲಿದೆ.

ಆದರೆ ಈ ಕುರಿತು ಯಾರೂ ತಲೆಕೆಡಿಸಿಕೊಂಡಂತಿಲ್ಲ. ಸಾಮಾಜಿಕ ನ್ಯಾಯದ ಆರಂಬಿಕ ಮೆಟ್ಟಿಲಾದ ಸ್ಕಾಲರ್ಶಿಪ್, ಹಾಸ್ಟೆಲ್ ವ್ಯವಸ್ಥೆಯನ್ನು ಕಳೆದುಕೊಳ್ಳಬಾರದು. ಸಾಮಾಜಿಕ ಸಂಘಟನೆಗಳು ಈ ಕುರಿತು ಗಂಬೀರವಾಗಿ ಆಲೋಚಿಸಬೇಕು.

(ಈ ಬರಹದಲ್ಲಿ ಕನ್ನಡ ನುಡಿಗೆ ಹೊಂದದ ಮಹಾಪ್ರಾಣಗಳನ್ನು ಕೈಬಿಡಲಾಗಿದೆ ಅಥವಾ ಮಿತವಾಗಿ ಬಳಸಲಾಗಿದೆ)

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. If you stop the scholarship I think soo many people we’re not able to continue their education. Bcz of only scholarship many students are still studying including me..if this is the case we will going to spoil our life’s.

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...