HomeಮುಖಪುಟSC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು 'Pradhan Mantri Young Achievers Scholarship Award Scheme for Vibrant India (PM-YASASVI)' ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

- Advertisement -
- Advertisement -

1944ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್ಶಿಪ್” (ಪಿಎಂಎಸ್)” ಅಂಬೇಡ್ಕರ್ ಅವರ ಪ್ರಿಯವಾದ ಯೋಜನೆಯಾಗಿತ್ತು. ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಶಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಕುಟುಂಬದ ಮಕ್ಕಳಿಗೆ ಸ್ಕಾಲರ್ಶಿಪ್ ದೊರಕುತ್ತಿತ್ತು. (ಇಂದಿಗೂ ಆದಾಯದ ಮಿತಿಯನ್ನು ಹೆಚ್ಚಿಸಿಲ್ಲ ಮತ್ತು 2013 ರಿಂದ ಸ್ಕಾಲರ್ಶಿಪ್ ಮೊತ್ತವನ್ನು ಹೆಚ್ಚಿಸಿಲ್ಲ)

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುವ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಈ ಸ್ಕಾಲರ್ಶಿಪನ್ನು ಮೋದಿ ಸರಕಾರ ನಿಲ್ಲಿಸುವ ಎಲ್ಲಾ ಸೂಚನೆಗಳಿವೆ.

ಎರಡನೇ ಬಾರಿ ಗೆದ್ದ ನಂತರ ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಅಂದರೆ ಶೇ. 60 ರಶ್ಟು ಕೇಂದ್ರ, ಶೇ. 40 ರಶ್ಟು ರಾಜ್ಯಗಳು ಆರ್ಥಿಕ ಅನುದಾನವನ್ನು ಹಂಚಿಕೊಳ್ಳಬೇಕು.

ಇದನ್ನೂ ಓದಿ: ಉತ್ತರಪ್ರದೇಶ: ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡದ ಕಾರಣಕ್ಕೆ ದಲಿತ ಬಾಲಕಿಗೆ ಬೆಂಕಿಹಚ್ಚಿದ ಕ್ರೂರಿ!

ದಿಢೀರನೆ ಮೇಲೆರಗಿದ ಈ ಜವಬ್ದಾರಿಯನ್ನು ಹೊರಲು ರಾಜ್ಯ ಸರಕಾರಗಳು ತಯಾರಿಲ್ಲ. ಅಲ್ಲದೆ ಕಳೆದ ಎರಡು ವರ್ಶಗಳಿಂದ ಕೇಂದ್ರ ಸರಕಾರವು ಈ ‘ಪಿಎಂಎಸ್’ ಸ್ಕಾಲರ್ಶಿಪ್ ಗೆ ಆರ್ಥಿಕ ಅನುದಾನವನ್ನೂ ಕೊಡುತ್ತಿಲ್ಲ.

2019-20 ರಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 7,150 ಕೋಟಿ ಕೇಳಿದ್ದಕ್ಕೆ ಕೇಂದ್ರ ಹಣಕಾಸು ಇಲಾಖೆಯು ಕೇವಲ 2,927 ಕೋಟಿ ನೀಡಿದೆ. 4,198 ಕೋಟಿ ಮೊತ್ತದ ಕೊರತೆಯ ದುಶ್ಪರಿಣಾಮ ದಲಿತ ಮಕ್ಕಳ ಮೇಲಾಗಿದೆ. ಈ ಹಿಂದೆ 5.8 ಮಿಲಿಯನ್ ಮಕ್ಕಳು ಇದರ ಅನುಕೂಲ ಪಡೆದುಕೊಂಡಿದ್ದರೆ, 2019 ರಲ್ಲಿ ಆ ಸಂಖ್ಯೆ 3 ಮಿಲಿಯನ್ ಗೆ ಕುಸಿದಿದೆ. ಇನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಹಣವನ್ನು ಕೊಡದೇ ಇರುವುದರಿಂದ ದಲಿತ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುವ ಸಾಧ್ಯತೆಗಳಿಲ್ಲ.

ಇದೆಲ್ಲದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಮಾರ್ಚ್ 2020ರಲ್ಲಿ ಈಗಿರುವ ಎಲ್ಲಾ ಬಗೆಯ ಸ್ಕಾಲರ್ಶಿಪ್ ಯೋಜನೆಗಳನ್ನು ರದ್ದುಗೊಳಿಸಿ, ಎಲ್ಲಾ ಜಾತಿ ಸಮುದಾಯಗಳನ್ನು ‘Pradhan Mantri Young Achievers Scholarship Award Scheme for Vibrant India (PM-YASASVI)’ ಅಡಿಯಲ್ಲಿ ತರಲು ನಿರ್ದರಿಸಲಾಗಿದೆ.

ಇದನ್ನೂ ಓದಿ:ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಈ ಯೋಜನೆಯ ಅನುಕೂಲ ಪಡೆದುಕೊಳ್ಳಲು ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಅಂದರೆ ಸಾಮಾಜಿಕ-ಆರ್ಥಿಕ -ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪರಿಗಣಿಸದೆ ಕೇವಲ ಮೆರಿಟ್ ಆದಾರದಲ್ಲಿ ಸ್ಕಾಲರ್ಶಿಪ್ ಕೊಡಲು ಮೋದಿ ಸರಕಾರ ನಿರ್ದರಿಸಿದೆ.

ಆದರೆ ಭಾರತದಂತಹ ಜಾತಿ ಅಸಮಾನತೆ ದೇಶದಲ್ಲಿ ಮೆರಿಟ್ ಎನ್ನುವ ಪರಿಕಲ್ಪನೆಯು ‘leagalises the exclusion’ ಉಳ್ಳವರು ಮಾತ್ರ ಮುಂದುವರೆಯುತ್ತಾರೆ. ಮೋದಿ ಸರಕಾರದ ಈ ನಿರ್ದಾರದಿಂದ ಶೋಷಿತ ಸಮುದಾಯಗಳು ಶಿಕ್ಷಣದಿಂದ ವಂಚಿತಗೊಳ್ಳಲಿವೆ. ಜಾತಿ ತಾರತಮ್ಯದ ಈ ದೇಶದಲ್ಲಿ ಓಬಿಸಿ, ಪ. ಜಾತಿ, ಪ. ಪಂಗಡಗಳನ್ನು ಒಂದೇ ತಕ್ಕಡಿಯಲ್ಲಿಡುವುದು ದಲಿತ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಲಿದೆ.

ಆದರೆ ಈ ಕುರಿತು ಯಾರೂ ತಲೆಕೆಡಿಸಿಕೊಂಡಂತಿಲ್ಲ. ಸಾಮಾಜಿಕ ನ್ಯಾಯದ ಆರಂಬಿಕ ಮೆಟ್ಟಿಲಾದ ಸ್ಕಾಲರ್ಶಿಪ್, ಹಾಸ್ಟೆಲ್ ವ್ಯವಸ್ಥೆಯನ್ನು ಕಳೆದುಕೊಳ್ಳಬಾರದು. ಸಾಮಾಜಿಕ ಸಂಘಟನೆಗಳು ಈ ಕುರಿತು ಗಂಬೀರವಾಗಿ ಆಲೋಚಿಸಬೇಕು.

(ಈ ಬರಹದಲ್ಲಿ ಕನ್ನಡ ನುಡಿಗೆ ಹೊಂದದ ಮಹಾಪ್ರಾಣಗಳನ್ನು ಕೈಬಿಡಲಾಗಿದೆ ಅಥವಾ ಮಿತವಾಗಿ ಬಳಸಲಾಗಿದೆ)

ಇದನ್ನೂ ಓದಿ: ಉತ್ತರಪ್ರದೇಶ: ಮೂತ್ರ ಕುಡಿಸಿ ದಲಿತ ತಂದೆ-ಮಗನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. If you stop the scholarship I think soo many people we’re not able to continue their education. Bcz of only scholarship many students are still studying including me..if this is the case we will going to spoil our life’s.

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...