Homeಕರ್ನಾಟಕಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

ಪ.ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ: ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸಿಎಂ ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ, ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಧಾನಸೌಧದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015) ಮತ್ತು ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ರಡಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಯಿತು.

ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಗೃಹ ಮತ್ತು ಕಾನೂನು ಇಲಾಖೆಯೊಂದಿಗೆ ಸಮನ್ವಯ ವಹಿಸಿ, ತನಿಖೆಯ ಹಂತದಲ್ಲಿ, ಚಾರ್ಜ್ ಶೀಟ್ ಸಲ್ಲಿಸುವಾಗ ಹಾಗೂ ಪ್ರಾಸಿಕ್ಯೂಷನ್ ಸಂದರ್ಭದಲ್ಲಿಯೂ ವಿಳಂಬವಾಗದಂತೆ ಕ್ರಮ ವಹಿಸಬೇಕು. ಅಪರಾಧ ಸಾಬೀತು ಪ್ರಮಾಣ ಹೆಚ್ಚಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಉಸ್ತುವಾರಿ ಸಮಿತಿಯ ಸಭೆಯ ತೀರ್ಮಾನಗಳ ಕುರಿತು ಪ್ರತಿ ತಿಂಗಳೂ ಪರಿಶೀಲನೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ರಾಜ್ಯಮಟ್ಟದ ಸಮಿತಿಯು ತುರ್ತು ವಿಷಯಗಳಿದ್ದಲ್ಲಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ನಿರ್ಧರಿಸಲಾಗಿದೆ.

ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆಗಳು ನಿಯಮಿತವಾಗಿ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಮುಖ್ಯಮಂತ್ರಿಗಳು, ಒಂದು ತಿಂಗಳ ಒಳಗೆ ಸಭೆಯ ತೀರ್ಮಾನಗಳ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ನೀಡಲು ಆದೇಶಿಸಿದ್ದಾರೆ.

ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಹಲ್ಲೆ ಪ್ರಕರಣ- ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು ಎಂದ ಕರಿಯಪ್ಪ ಗುಡಿಮನಿ

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ, ಈ ಸಮುದಾಯಗಳ ಹಕ್ಕು ಕಸಿದುಕೊಳ್ಳುವವರ ವಿರುದ್ಧ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದೌರ್ಜನ್ಯ ಪ್ರಕರಣಗಳ ದೂರುದಾರರು ಮತ್ತು ಸಾಕ್ಷಿದಾರರ ರಕ್ಷಣೆಗೆ ಒತ್ತು ನೀಡಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರುದಾರರು ಮತ್ತು ಸಾಕ್ಷಿದಾರರನ್ನು ಪೊಲೀಸರೇ ಕರೆದೊಯ್ಯುವಂತೆ ತಿಳಿಸಲಾಗಿದೆ.

ಅನುಸೂಚಿತ ಬುಡಕಟ್ಟು ಹಾಗೂ ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮ 2006 ರಡಿ 1.8 ಲಕ್ಷಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಕುರಿತಂತೆ ರಾಜ್ಯಮಟ್ಟದಲ್ಲಿಯೂ ಮರು ಪರಿಶೀಲನಾ ಸಮಿತಿ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದಕ್ಕೆ ಮೂವರು ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟವರ ಅವಲಂಬಿತರಿಗೆ ಅನುಕಂಪ ಆಧಾರದಲ್ಲಿ ಸರ್ಕಾರಿ ನೌಕರಿಗೆ ಅರ್ಜಿ ಸಲ್ಲಿಸಲು 2 ವರ್ಷ ಅವಧಿ ಹಾಗೂ ಅಪ್ರಾಪ್ತ ವಯಸ್ಕರಿಗೆ ಅರ್ಜಿ ಸಲ್ಲಿಸಲು 3 ವರ್ಷಗಳ ಅವಧಿ ನಿಗದಿ ಪಡಿಸಿ ನಿಯಮಗಳಿಗೆ ತಿದ್ದುಪಡಿ ಮಾಡುವಂತೆ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಜನಾಕ್ರೋಶಕ್ಕೆ ಮಣಿದ ಮೈಸೂರು ವಿವಿ; ಮಹಿಳಾ ವಿರೋಧಿ ಸುತ್ತೋಲೆ ವಾಪಾಸ್!

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಎಸ್ಕಾಂಗಳು ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬಳಕೆ ಮಾಡುವಂತೆ ಸೂಚಿಸಲಾಗಿದೆ. ಎಸ್.ಸಿ.ಪಿ/ ಟಿಎಸ್ ಪಿ ಕಾಯ್ದೆಯನ್ವಯ ಈ ಸಮುದಾಯಗಳಿಗೆ ನಿಗದಿ ಪಡಿಸಿದ ಅನುದಾನ, ಅವರ ಕ್ಷೇಮಾಭಿವೃದ್ಧಿಗೇ ಬಳಕೆಯಾಗುವ ಕುರಿತು ಕಾಯ್ದೆಗೆ ತಿದ್ದುಪಡಿ ಮಾಡಲು ಕ್ರಮ ವಹಿಸುವಂತೆ ಕಾನೂನು ಇಲಾಖೆಗೆ ಸೂಚನೆ ನೀಡಿಲಾಗಿದೆ.

ಆದರೆ, ಇತ್ತಿಚೆಗೆ ರಾಜ್ಯದಲ್ಲಿ ಪರಿಶಿಷ್ಟ ಕಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇವೆ. ಕೆಲವು ಪ್ರಕರಣಗಳು ಪೊಲೀಸ್ ಠಾಣೆ ಮೇಟ್ಟಿಲು ಕೂಡ ಹತ್ತುವುದಿಲ್ಲ. ಇಂತಹ ಪ್ರಕರಣಗಳ ಕಡೆಗೂ ಸರ್ಕಾರ ಗಮನ ಹರಿಸುವ ಅಗತ್ಯತೆ ಇದೆ.

ಕಳೆದ ವಾರ ಮೊಹರಂ ಹಬ್ಬದ ವೇಳೆ ಗಂಗಾವತಿಯ ಸಿಂಗನಾಳ ಗ್ರಾಮದಲ್ಲಿ ಸವರ್ಣಿಯರು ದಲಿತ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 10ಕ್ಕೂ ಹೆಚ್ಚು ದಲಿತ ಸಮುದಾಯದವರಿಗೆ ಗಾಯಗಳಾಗಿದ್ದರೂ ಕೂಡ ಪೊಲೀಸರು ಎಫ್‌ಐಆರ್‌ನಲ್ಲಿ ಒಬ್ಬರಿಗೆ ಗಾಯ ಎಂದು ನಮೂದಿಸಿದ್ದಾರೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರದ ಇಂದಿನ ಸಭೆಯ ವಿಷಯಗಳು ಕೇವಲ ಸಭೆಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೂ ಬರಲಿ ಎಂಬುದು ದಲಿತಪರ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಬೆಳಗಾವಿ: ಪಾಲಿಕೆ ಚುನಾವಣೆಗೆ ಉಚಿತ ಶವಸಂಸ್ಕಾರದ ಭರವಸೆ ನೀಡಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...