Homeಮುಖಪುಟದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

ದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

- Advertisement -
- Advertisement -

“ದಲಿತ ಮುಸ್ಲಿಮರು ಮುಖ್ಯವಾಹಿನಿಯಿಂದ ದೂರವಿದ್ದಾರೆ, ಇವರಿಗೆ ಎಸ್‌ಸಿ ಸ್ಥಾನಮಾನ ಅಗತ್ಯ” ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಜಾಜ಼್ ಅಲಿ ಅಭಿಪ್ರಾಯಪಟ್ಟಿದ್ದಾರೆ.

ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕೆಂದು ಕಳೆದ 25 ವರ್ಷಗಳಿಂದ ಹೋರಾಡುತ್ತಿರುವ ಅವರು ‘ದಿ ಕ್ವಿಂಟ್‌’ ಜಾಲತಾಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಹೋರಾಡುತ್ತೇವೆ, ನಾವು ಸಾಧಿಸಿ ತೋರಿಸುತ್ತೇವೆ. ಏಕೆಂದರೆ ಅದು ಸಮಾಜಕ್ಕೆ, ದೇಶಕ್ಕೆ ಪ್ರಯೋಜನಕಾರಿಯಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲಿ ಅವರು ಹಿಂದುಳಿದ ಮುಸ್ಲಿಂ ಮೋರ್ಚಾವನ್ನು ಸ್ಥಾಪಿಸಿದವರು. ನಂತರ ಯುನೈಟೆಡ್ ಮುಸ್ಲಿಂ ಮೋರ್ಚಾ ಎಂದು ಇದಕ್ಕೆ ಮರುನಾಮಕರಣ ಮಾಡಲಾಯಿತು. ಈಗ ಆಲ್-ಇಂಡಿಯಾ ಬ್ಯಾಕ್‌ವರ್ಡ್ ಮುಸ್ಲಿಂ ಮೋರ್ಚಾ ಎಂದು ಕರೆಯಲಾಗುತ್ತಿದೆ.

ಅಲಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. 1980ರ ದಶಕದಿಂದ ಪಾಟ್ನಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಶುಲ್ಕವನ್ನಷ್ಟೇ ಪಡೆಯುವುದರಿಂದ ಅತ್ಯಂತ ಕಡುಬಡವರು ಇವರ ಕ್ಲಿನಿಕ್‌ಗೆ ಬರುತ್ತಾರೆ.

“ನಾನು ವೃತ್ತಿಯಲ್ಲಿ ವೈದ್ಯ, ನಾನು ಬಡವರ ಜೊತೆ ಕೆಲಸ ಮಾಡುತ್ತೇನೆ. ಅವರ ಸ್ಥಿತಿಯನ್ನು ನಾನು ನೇರವಾಗಿ ನೋಡಿದೆ. ಅವರಿಗೆ ಸಹಾಯ ಮಾಡಬೇಕೆಂದರೆ 341ನೇ ವಿಧಿ ಒಂದು ದಾರಿ ಎಂದು ನಾನು ಅರಿತುಕೊಂಡೆ” ಎನ್ನುತ್ತಾರೆ.

ಅನುಚ್ಛೇದ 341- ಯಾವ ಸಮುದಾಯಗಳು ಪರಿಶಿಷ್ಟ ಜಾತಿಗಳ ಪಟ್ಟಿಯ ಭಾಗವಾಗಬೇಕೆಂದು ಸೂಚಿಸಿ ಸಂಸತ್ತಿಗೆ (ರಾಷ್ಟ್ರಪತಿಯವರ ಮೂಲಕ) ಅಧಿಕಾರ ನೀಡುತ್ತದೆ. ಆದಾಗ್ಯೂ, ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ 1950ರ ಪ್ರಕಾರ ಪ್ರಸ್ತುತ ಹಿಂದೂ, ಸಿಖ್ ಅಥವಾ ಬೌದ್ಧ ಎಂದು ಪ್ರತಿಪಾದಿಸುವ ವ್ಯಕ್ತಿಗಳನ್ನು ಮಾತ್ರ ಎಸ್‌ಸಿ ಎಂದು ವರ್ಗೀಕರಿಸಲು ಸಾಧ್ಯವಾಗಿದೆ.

ದಲಿತ ಕ್ರಿಶ್ಚಿಯನ್‌, ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕೆಂಬ ಆಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿದೆ. ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಗಳಲ್ಲಿ ಅಸ್ಪೃಶ್ಯತೆ ಇಲ್ಲವಾದ ಕಾರಣ, ಇಲ್ಲಿನ ದಲಿತರನ್ನು ಎಸ್‌ಸಿ ಅಡಿ ಗುರುತಿಸಲು ಸಾಧ್ಯವಿಲ್ಲ ಎಂದಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಹಲವು ಜನರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಲ್ಲಿ ಅಲಿಯವರೂ ಒಬ್ಬರಾಗಿದ್ದಾರೆ.

“ನಾತ್, ಬಕ್ಖೋ, ಹಲಾಲ್‌ಖೋರ್, ಮೆಹ್ತಾರ್, ಭಂಗಿ, ಭಂಟ್, ಭಟಿಯಾರ, ಮೋಚಿ, ಪಾಸಿ, ಖಾತಿಕ್, ಜುಲಾಹಾ, ಕೇರಳದಲ್ಲಿ ಮಲಬಾರಿ ಮುಸ್ಲಿಮರು, ತಮಿಳುನಾಡಿನಲ್ಲಿ ಲಬ್ಬಾಯಿ, ರೌಥರ್‌ಗಳು, ಮರಕ್ಕರ್‌ಗಳು, ಆಂಧ್ರಪ್ರದೇಶದ ದೂದೇಕುಲ- ಹೀಗೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. 1950ರ ಆದೇಶದ ನಂತರ ಅವರನ್ನು ಎಸ್‌ಸಿ ಪಟ್ಟಿಯಿಂದ ಹೊರಹಾಕಲಾಯಿತು. ಈ ಕಾರಣದಿಂದಾಗಿ ಈ ಸಮುದಾಯಗಳು ಮುಖ್ಯವಾಹಿನಿಯಿಂದ ದೂರವಾಗಿವೆ” ಎಂದು ಅಲಿ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ಈ [ದಲಿತ ಮುಸ್ಲಿಂ] ಸಮುದಾಯಗಳು ಮುಖ್ಯವಾಹಿನಿಯ ಭಾಗವಾಗಬೇಕಾದರೆ ಎಸ್‌ಸಿ ಸ್ಥಾನಮಾನವನ್ನು ಪಡೆಯಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಕೋಮು ರಾಜಕೀಯ ಕೊನೆಗೊಳ್ಳಬೇಕು, ಸಾಮಾನ್ಯ ರಾಜಕೀಯ ಪ್ರಾರಂಭವಾಗಬೇಕು. ಸಾಮಾನ್ಯ ರಾಜಕೀಯ ಅಂದರೇನು? ಹಣದುಬ್ಬರವನ್ನು ಕೊನೆಗೊಳಿಸಬೇಕು, ನಿರುದ್ಯೋಗ ಕೊನೆಯಾಗಬೇಕು. ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು… ಜನರು ಈ ಸಮಸ್ಯೆಗಳ ಬಗ್ಗೆ ಹೋರಾಡಬೇಕು” ಎನ್ನುತ್ತಾರೆ ಅಲಿ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಎಸ್‌ಸಿ ಸ್ಥಾನಮಾನದ ಬೇಡಿಕೆಯನ್ನು ಪರಿಶೀಲಿಸಲು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಆಯೋಗವನ್ನು ಕೇಂದ್ರದ ಬಿಜೆಪಿ ಸರ್ಕಾರ ರಚಿಸಿದೆ. ಆಯೋಗವು ಎರಡು ವರ್ಷಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು.

70-75 ವರ್ಷಗಳ ನಂತರ ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಹೆಸರಿನಲ್ಲಿ ಆಯೋಗವನ್ನು ರಚಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ಅಲಿ ಅವರು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...