Homeಮುಖಪುಟದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

ದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

- Advertisement -
- Advertisement -

“ದಲಿತ ಮುಸ್ಲಿಮರು ಮುಖ್ಯವಾಹಿನಿಯಿಂದ ದೂರವಿದ್ದಾರೆ, ಇವರಿಗೆ ಎಸ್‌ಸಿ ಸ್ಥಾನಮಾನ ಅಗತ್ಯ” ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಜಾಜ಼್ ಅಲಿ ಅಭಿಪ್ರಾಯಪಟ್ಟಿದ್ದಾರೆ.

ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕೆಂದು ಕಳೆದ 25 ವರ್ಷಗಳಿಂದ ಹೋರಾಡುತ್ತಿರುವ ಅವರು ‘ದಿ ಕ್ವಿಂಟ್‌’ ಜಾಲತಾಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಹೋರಾಡುತ್ತೇವೆ, ನಾವು ಸಾಧಿಸಿ ತೋರಿಸುತ್ತೇವೆ. ಏಕೆಂದರೆ ಅದು ಸಮಾಜಕ್ಕೆ, ದೇಶಕ್ಕೆ ಪ್ರಯೋಜನಕಾರಿಯಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲಿ ಅವರು ಹಿಂದುಳಿದ ಮುಸ್ಲಿಂ ಮೋರ್ಚಾವನ್ನು ಸ್ಥಾಪಿಸಿದವರು. ನಂತರ ಯುನೈಟೆಡ್ ಮುಸ್ಲಿಂ ಮೋರ್ಚಾ ಎಂದು ಇದಕ್ಕೆ ಮರುನಾಮಕರಣ ಮಾಡಲಾಯಿತು. ಈಗ ಆಲ್-ಇಂಡಿಯಾ ಬ್ಯಾಕ್‌ವರ್ಡ್ ಮುಸ್ಲಿಂ ಮೋರ್ಚಾ ಎಂದು ಕರೆಯಲಾಗುತ್ತಿದೆ.

ಅಲಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. 1980ರ ದಶಕದಿಂದ ಪಾಟ್ನಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಶುಲ್ಕವನ್ನಷ್ಟೇ ಪಡೆಯುವುದರಿಂದ ಅತ್ಯಂತ ಕಡುಬಡವರು ಇವರ ಕ್ಲಿನಿಕ್‌ಗೆ ಬರುತ್ತಾರೆ.

“ನಾನು ವೃತ್ತಿಯಲ್ಲಿ ವೈದ್ಯ, ನಾನು ಬಡವರ ಜೊತೆ ಕೆಲಸ ಮಾಡುತ್ತೇನೆ. ಅವರ ಸ್ಥಿತಿಯನ್ನು ನಾನು ನೇರವಾಗಿ ನೋಡಿದೆ. ಅವರಿಗೆ ಸಹಾಯ ಮಾಡಬೇಕೆಂದರೆ 341ನೇ ವಿಧಿ ಒಂದು ದಾರಿ ಎಂದು ನಾನು ಅರಿತುಕೊಂಡೆ” ಎನ್ನುತ್ತಾರೆ.

ಅನುಚ್ಛೇದ 341- ಯಾವ ಸಮುದಾಯಗಳು ಪರಿಶಿಷ್ಟ ಜಾತಿಗಳ ಪಟ್ಟಿಯ ಭಾಗವಾಗಬೇಕೆಂದು ಸೂಚಿಸಿ ಸಂಸತ್ತಿಗೆ (ರಾಷ್ಟ್ರಪತಿಯವರ ಮೂಲಕ) ಅಧಿಕಾರ ನೀಡುತ್ತದೆ. ಆದಾಗ್ಯೂ, ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ 1950ರ ಪ್ರಕಾರ ಪ್ರಸ್ತುತ ಹಿಂದೂ, ಸಿಖ್ ಅಥವಾ ಬೌದ್ಧ ಎಂದು ಪ್ರತಿಪಾದಿಸುವ ವ್ಯಕ್ತಿಗಳನ್ನು ಮಾತ್ರ ಎಸ್‌ಸಿ ಎಂದು ವರ್ಗೀಕರಿಸಲು ಸಾಧ್ಯವಾಗಿದೆ.

ದಲಿತ ಕ್ರಿಶ್ಚಿಯನ್‌, ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕೆಂಬ ಆಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿದೆ. ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಗಳಲ್ಲಿ ಅಸ್ಪೃಶ್ಯತೆ ಇಲ್ಲವಾದ ಕಾರಣ, ಇಲ್ಲಿನ ದಲಿತರನ್ನು ಎಸ್‌ಸಿ ಅಡಿ ಗುರುತಿಸಲು ಸಾಧ್ಯವಿಲ್ಲ ಎಂದಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಹಲವು ಜನರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಲ್ಲಿ ಅಲಿಯವರೂ ಒಬ್ಬರಾಗಿದ್ದಾರೆ.

“ನಾತ್, ಬಕ್ಖೋ, ಹಲಾಲ್‌ಖೋರ್, ಮೆಹ್ತಾರ್, ಭಂಗಿ, ಭಂಟ್, ಭಟಿಯಾರ, ಮೋಚಿ, ಪಾಸಿ, ಖಾತಿಕ್, ಜುಲಾಹಾ, ಕೇರಳದಲ್ಲಿ ಮಲಬಾರಿ ಮುಸ್ಲಿಮರು, ತಮಿಳುನಾಡಿನಲ್ಲಿ ಲಬ್ಬಾಯಿ, ರೌಥರ್‌ಗಳು, ಮರಕ್ಕರ್‌ಗಳು, ಆಂಧ್ರಪ್ರದೇಶದ ದೂದೇಕುಲ- ಹೀಗೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. 1950ರ ಆದೇಶದ ನಂತರ ಅವರನ್ನು ಎಸ್‌ಸಿ ಪಟ್ಟಿಯಿಂದ ಹೊರಹಾಕಲಾಯಿತು. ಈ ಕಾರಣದಿಂದಾಗಿ ಈ ಸಮುದಾಯಗಳು ಮುಖ್ಯವಾಹಿನಿಯಿಂದ ದೂರವಾಗಿವೆ” ಎಂದು ಅಲಿ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ಈ [ದಲಿತ ಮುಸ್ಲಿಂ] ಸಮುದಾಯಗಳು ಮುಖ್ಯವಾಹಿನಿಯ ಭಾಗವಾಗಬೇಕಾದರೆ ಎಸ್‌ಸಿ ಸ್ಥಾನಮಾನವನ್ನು ಪಡೆಯಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಕೋಮು ರಾಜಕೀಯ ಕೊನೆಗೊಳ್ಳಬೇಕು, ಸಾಮಾನ್ಯ ರಾಜಕೀಯ ಪ್ರಾರಂಭವಾಗಬೇಕು. ಸಾಮಾನ್ಯ ರಾಜಕೀಯ ಅಂದರೇನು? ಹಣದುಬ್ಬರವನ್ನು ಕೊನೆಗೊಳಿಸಬೇಕು, ನಿರುದ್ಯೋಗ ಕೊನೆಯಾಗಬೇಕು. ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು… ಜನರು ಈ ಸಮಸ್ಯೆಗಳ ಬಗ್ಗೆ ಹೋರಾಡಬೇಕು” ಎನ್ನುತ್ತಾರೆ ಅಲಿ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಎಸ್‌ಸಿ ಸ್ಥಾನಮಾನದ ಬೇಡಿಕೆಯನ್ನು ಪರಿಶೀಲಿಸಲು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಆಯೋಗವನ್ನು ಕೇಂದ್ರದ ಬಿಜೆಪಿ ಸರ್ಕಾರ ರಚಿಸಿದೆ. ಆಯೋಗವು ಎರಡು ವರ್ಷಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು.

70-75 ವರ್ಷಗಳ ನಂತರ ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಹೆಸರಿನಲ್ಲಿ ಆಯೋಗವನ್ನು ರಚಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ಅಲಿ ಅವರು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...