Homeಮುಖಪುಟದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

ದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

- Advertisement -
- Advertisement -

“ದಲಿತ ಮುಸ್ಲಿಮರು ಮುಖ್ಯವಾಹಿನಿಯಿಂದ ದೂರವಿದ್ದಾರೆ, ಇವರಿಗೆ ಎಸ್‌ಸಿ ಸ್ಥಾನಮಾನ ಅಗತ್ಯ” ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಜಾಜ಼್ ಅಲಿ ಅಭಿಪ್ರಾಯಪಟ್ಟಿದ್ದಾರೆ.

ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕೆಂದು ಕಳೆದ 25 ವರ್ಷಗಳಿಂದ ಹೋರಾಡುತ್ತಿರುವ ಅವರು ‘ದಿ ಕ್ವಿಂಟ್‌’ ಜಾಲತಾಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಹೋರಾಡುತ್ತೇವೆ, ನಾವು ಸಾಧಿಸಿ ತೋರಿಸುತ್ತೇವೆ. ಏಕೆಂದರೆ ಅದು ಸಮಾಜಕ್ಕೆ, ದೇಶಕ್ಕೆ ಪ್ರಯೋಜನಕಾರಿಯಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲಿ ಅವರು ಹಿಂದುಳಿದ ಮುಸ್ಲಿಂ ಮೋರ್ಚಾವನ್ನು ಸ್ಥಾಪಿಸಿದವರು. ನಂತರ ಯುನೈಟೆಡ್ ಮುಸ್ಲಿಂ ಮೋರ್ಚಾ ಎಂದು ಇದಕ್ಕೆ ಮರುನಾಮಕರಣ ಮಾಡಲಾಯಿತು. ಈಗ ಆಲ್-ಇಂಡಿಯಾ ಬ್ಯಾಕ್‌ವರ್ಡ್ ಮುಸ್ಲಿಂ ಮೋರ್ಚಾ ಎಂದು ಕರೆಯಲಾಗುತ್ತಿದೆ.

ಅಲಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. 1980ರ ದಶಕದಿಂದ ಪಾಟ್ನಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಶುಲ್ಕವನ್ನಷ್ಟೇ ಪಡೆಯುವುದರಿಂದ ಅತ್ಯಂತ ಕಡುಬಡವರು ಇವರ ಕ್ಲಿನಿಕ್‌ಗೆ ಬರುತ್ತಾರೆ.

“ನಾನು ವೃತ್ತಿಯಲ್ಲಿ ವೈದ್ಯ, ನಾನು ಬಡವರ ಜೊತೆ ಕೆಲಸ ಮಾಡುತ್ತೇನೆ. ಅವರ ಸ್ಥಿತಿಯನ್ನು ನಾನು ನೇರವಾಗಿ ನೋಡಿದೆ. ಅವರಿಗೆ ಸಹಾಯ ಮಾಡಬೇಕೆಂದರೆ 341ನೇ ವಿಧಿ ಒಂದು ದಾರಿ ಎಂದು ನಾನು ಅರಿತುಕೊಂಡೆ” ಎನ್ನುತ್ತಾರೆ.

ಅನುಚ್ಛೇದ 341- ಯಾವ ಸಮುದಾಯಗಳು ಪರಿಶಿಷ್ಟ ಜಾತಿಗಳ ಪಟ್ಟಿಯ ಭಾಗವಾಗಬೇಕೆಂದು ಸೂಚಿಸಿ ಸಂಸತ್ತಿಗೆ (ರಾಷ್ಟ್ರಪತಿಯವರ ಮೂಲಕ) ಅಧಿಕಾರ ನೀಡುತ್ತದೆ. ಆದಾಗ್ಯೂ, ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ 1950ರ ಪ್ರಕಾರ ಪ್ರಸ್ತುತ ಹಿಂದೂ, ಸಿಖ್ ಅಥವಾ ಬೌದ್ಧ ಎಂದು ಪ್ರತಿಪಾದಿಸುವ ವ್ಯಕ್ತಿಗಳನ್ನು ಮಾತ್ರ ಎಸ್‌ಸಿ ಎಂದು ವರ್ಗೀಕರಿಸಲು ಸಾಧ್ಯವಾಗಿದೆ.

ದಲಿತ ಕ್ರಿಶ್ಚಿಯನ್‌, ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕೆಂಬ ಆಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿದೆ. ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಗಳಲ್ಲಿ ಅಸ್ಪೃಶ್ಯತೆ ಇಲ್ಲವಾದ ಕಾರಣ, ಇಲ್ಲಿನ ದಲಿತರನ್ನು ಎಸ್‌ಸಿ ಅಡಿ ಗುರುತಿಸಲು ಸಾಧ್ಯವಿಲ್ಲ ಎಂದಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಹಲವು ಜನರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಲ್ಲಿ ಅಲಿಯವರೂ ಒಬ್ಬರಾಗಿದ್ದಾರೆ.

“ನಾತ್, ಬಕ್ಖೋ, ಹಲಾಲ್‌ಖೋರ್, ಮೆಹ್ತಾರ್, ಭಂಗಿ, ಭಂಟ್, ಭಟಿಯಾರ, ಮೋಚಿ, ಪಾಸಿ, ಖಾತಿಕ್, ಜುಲಾಹಾ, ಕೇರಳದಲ್ಲಿ ಮಲಬಾರಿ ಮುಸ್ಲಿಮರು, ತಮಿಳುನಾಡಿನಲ್ಲಿ ಲಬ್ಬಾಯಿ, ರೌಥರ್‌ಗಳು, ಮರಕ್ಕರ್‌ಗಳು, ಆಂಧ್ರಪ್ರದೇಶದ ದೂದೇಕುಲ- ಹೀಗೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. 1950ರ ಆದೇಶದ ನಂತರ ಅವರನ್ನು ಎಸ್‌ಸಿ ಪಟ್ಟಿಯಿಂದ ಹೊರಹಾಕಲಾಯಿತು. ಈ ಕಾರಣದಿಂದಾಗಿ ಈ ಸಮುದಾಯಗಳು ಮುಖ್ಯವಾಹಿನಿಯಿಂದ ದೂರವಾಗಿವೆ” ಎಂದು ಅಲಿ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ಈ [ದಲಿತ ಮುಸ್ಲಿಂ] ಸಮುದಾಯಗಳು ಮುಖ್ಯವಾಹಿನಿಯ ಭಾಗವಾಗಬೇಕಾದರೆ ಎಸ್‌ಸಿ ಸ್ಥಾನಮಾನವನ್ನು ಪಡೆಯಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಕೋಮು ರಾಜಕೀಯ ಕೊನೆಗೊಳ್ಳಬೇಕು, ಸಾಮಾನ್ಯ ರಾಜಕೀಯ ಪ್ರಾರಂಭವಾಗಬೇಕು. ಸಾಮಾನ್ಯ ರಾಜಕೀಯ ಅಂದರೇನು? ಹಣದುಬ್ಬರವನ್ನು ಕೊನೆಗೊಳಿಸಬೇಕು, ನಿರುದ್ಯೋಗ ಕೊನೆಯಾಗಬೇಕು. ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು… ಜನರು ಈ ಸಮಸ್ಯೆಗಳ ಬಗ್ಗೆ ಹೋರಾಡಬೇಕು” ಎನ್ನುತ್ತಾರೆ ಅಲಿ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಎಸ್‌ಸಿ ಸ್ಥಾನಮಾನದ ಬೇಡಿಕೆಯನ್ನು ಪರಿಶೀಲಿಸಲು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಆಯೋಗವನ್ನು ಕೇಂದ್ರದ ಬಿಜೆಪಿ ಸರ್ಕಾರ ರಚಿಸಿದೆ. ಆಯೋಗವು ಎರಡು ವರ್ಷಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು.

70-75 ವರ್ಷಗಳ ನಂತರ ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಹೆಸರಿನಲ್ಲಿ ಆಯೋಗವನ್ನು ರಚಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ಅಲಿ ಅವರು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...