Homeಮುಖಪುಟದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

ದಲಿತ ಮುಸ್ಲಿಮರು ಮುಖ್ಯವಾಹಿನಿಗೆ ಬರಲು ಎಸ್‌ಸಿ ಸ್ಥಾನಮಾನ ಅಗತ್ಯ: ಡಾ.ಎಜಾಜ಼್ ಅಲಿ

- Advertisement -
- Advertisement -

“ದಲಿತ ಮುಸ್ಲಿಮರು ಮುಖ್ಯವಾಹಿನಿಯಿಂದ ದೂರವಿದ್ದಾರೆ, ಇವರಿಗೆ ಎಸ್‌ಸಿ ಸ್ಥಾನಮಾನ ಅಗತ್ಯ” ಎಂದು ಮಾಜಿ ರಾಜ್ಯಸಭಾ ಸದಸ್ಯ ಡಾ.ಎಜಾಜ಼್ ಅಲಿ ಅಭಿಪ್ರಾಯಪಟ್ಟಿದ್ದಾರೆ.

ದಲಿತ ಮುಸ್ಲಿಮರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಬೇಕೆಂದು ಕಳೆದ 25 ವರ್ಷಗಳಿಂದ ಹೋರಾಡುತ್ತಿರುವ ಅವರು ‘ದಿ ಕ್ವಿಂಟ್‌’ ಜಾಲತಾಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ನಾವು ಹೋರಾಡುತ್ತೇವೆ, ನಾವು ಸಾಧಿಸಿ ತೋರಿಸುತ್ತೇವೆ. ಏಕೆಂದರೆ ಅದು ಸಮಾಜಕ್ಕೆ, ದೇಶಕ್ಕೆ ಪ್ರಯೋಜನಕಾರಿಯಾಗಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲಿ ಅವರು ಹಿಂದುಳಿದ ಮುಸ್ಲಿಂ ಮೋರ್ಚಾವನ್ನು ಸ್ಥಾಪಿಸಿದವರು. ನಂತರ ಯುನೈಟೆಡ್ ಮುಸ್ಲಿಂ ಮೋರ್ಚಾ ಎಂದು ಇದಕ್ಕೆ ಮರುನಾಮಕರಣ ಮಾಡಲಾಯಿತು. ಈಗ ಆಲ್-ಇಂಡಿಯಾ ಬ್ಯಾಕ್‌ವರ್ಡ್ ಮುಸ್ಲಿಂ ಮೋರ್ಚಾ ಎಂದು ಕರೆಯಲಾಗುತ್ತಿದೆ.

ಅಲಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. 1980ರ ದಶಕದಿಂದ ಪಾಟ್ನಾದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಡಿಮೆ ಶುಲ್ಕವನ್ನಷ್ಟೇ ಪಡೆಯುವುದರಿಂದ ಅತ್ಯಂತ ಕಡುಬಡವರು ಇವರ ಕ್ಲಿನಿಕ್‌ಗೆ ಬರುತ್ತಾರೆ.

“ನಾನು ವೃತ್ತಿಯಲ್ಲಿ ವೈದ್ಯ, ನಾನು ಬಡವರ ಜೊತೆ ಕೆಲಸ ಮಾಡುತ್ತೇನೆ. ಅವರ ಸ್ಥಿತಿಯನ್ನು ನಾನು ನೇರವಾಗಿ ನೋಡಿದೆ. ಅವರಿಗೆ ಸಹಾಯ ಮಾಡಬೇಕೆಂದರೆ 341ನೇ ವಿಧಿ ಒಂದು ದಾರಿ ಎಂದು ನಾನು ಅರಿತುಕೊಂಡೆ” ಎನ್ನುತ್ತಾರೆ.

ಅನುಚ್ಛೇದ 341- ಯಾವ ಸಮುದಾಯಗಳು ಪರಿಶಿಷ್ಟ ಜಾತಿಗಳ ಪಟ್ಟಿಯ ಭಾಗವಾಗಬೇಕೆಂದು ಸೂಚಿಸಿ ಸಂಸತ್ತಿಗೆ (ರಾಷ್ಟ್ರಪತಿಯವರ ಮೂಲಕ) ಅಧಿಕಾರ ನೀಡುತ್ತದೆ. ಆದಾಗ್ಯೂ, ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶ 1950ರ ಪ್ರಕಾರ ಪ್ರಸ್ತುತ ಹಿಂದೂ, ಸಿಖ್ ಅಥವಾ ಬೌದ್ಧ ಎಂದು ಪ್ರತಿಪಾದಿಸುವ ವ್ಯಕ್ತಿಗಳನ್ನು ಮಾತ್ರ ಎಸ್‌ಸಿ ಎಂದು ವರ್ಗೀಕರಿಸಲು ಸಾಧ್ಯವಾಗಿದೆ.

ದಲಿತ ಕ್ರಿಶ್ಚಿಯನ್‌, ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕೆಂಬ ಆಗ್ರಹಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇತ್ತೀಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್‌ ಸಲ್ಲಿಸಿದೆ. ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮಗಳಲ್ಲಿ ಅಸ್ಪೃಶ್ಯತೆ ಇಲ್ಲವಾದ ಕಾರಣ, ಇಲ್ಲಿನ ದಲಿತರನ್ನು ಎಸ್‌ಸಿ ಅಡಿ ಗುರುತಿಸಲು ಸಾಧ್ಯವಿಲ್ಲ ಎಂದಿದೆ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಹಲವು ಜನರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರಲ್ಲಿ ಅಲಿಯವರೂ ಒಬ್ಬರಾಗಿದ್ದಾರೆ.

“ನಾತ್, ಬಕ್ಖೋ, ಹಲಾಲ್‌ಖೋರ್, ಮೆಹ್ತಾರ್, ಭಂಗಿ, ಭಂಟ್, ಭಟಿಯಾರ, ಮೋಚಿ, ಪಾಸಿ, ಖಾತಿಕ್, ಜುಲಾಹಾ, ಕೇರಳದಲ್ಲಿ ಮಲಬಾರಿ ಮುಸ್ಲಿಮರು, ತಮಿಳುನಾಡಿನಲ್ಲಿ ಲಬ್ಬಾಯಿ, ರೌಥರ್‌ಗಳು, ಮರಕ್ಕರ್‌ಗಳು, ಆಂಧ್ರಪ್ರದೇಶದ ದೂದೇಕುಲ- ಹೀಗೆ ದೊಡ್ಡ ಸಂಖ್ಯೆಯಲ್ಲಿದ್ದಾರೆ. 1950ರ ಆದೇಶದ ನಂತರ ಅವರನ್ನು ಎಸ್‌ಸಿ ಪಟ್ಟಿಯಿಂದ ಹೊರಹಾಕಲಾಯಿತು. ಈ ಕಾರಣದಿಂದಾಗಿ ಈ ಸಮುದಾಯಗಳು ಮುಖ್ಯವಾಹಿನಿಯಿಂದ ದೂರವಾಗಿವೆ” ಎಂದು ಅಲಿ ಅಭಿಪ್ರಾಯಪಡುತ್ತಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

“ಈ [ದಲಿತ ಮುಸ್ಲಿಂ] ಸಮುದಾಯಗಳು ಮುಖ್ಯವಾಹಿನಿಯ ಭಾಗವಾಗಬೇಕಾದರೆ ಎಸ್‌ಸಿ ಸ್ಥಾನಮಾನವನ್ನು ಪಡೆಯಬೇಕು ಎಂಬುದು ನನ್ನ ಬೇಡಿಕೆಯಾಗಿದೆ. ಕೋಮು ರಾಜಕೀಯ ಕೊನೆಗೊಳ್ಳಬೇಕು, ಸಾಮಾನ್ಯ ರಾಜಕೀಯ ಪ್ರಾರಂಭವಾಗಬೇಕು. ಸಾಮಾನ್ಯ ರಾಜಕೀಯ ಅಂದರೇನು? ಹಣದುಬ್ಬರವನ್ನು ಕೊನೆಗೊಳಿಸಬೇಕು, ನಿರುದ್ಯೋಗ ಕೊನೆಯಾಗಬೇಕು. ಭ್ರಷ್ಟಾಚಾರವನ್ನು ಕೊನೆಗೊಳಿಸಬೇಕು… ಜನರು ಈ ಸಮಸ್ಯೆಗಳ ಬಗ್ಗೆ ಹೋರಾಡಬೇಕು” ಎನ್ನುತ್ತಾರೆ ಅಲಿ.

ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಎಸ್‌ಸಿ ಸ್ಥಾನಮಾನದ ಬೇಡಿಕೆಯನ್ನು ಪರಿಶೀಲಿಸಲು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯ ಆಯೋಗವನ್ನು ಕೇಂದ್ರದ ಬಿಜೆಪಿ ಸರ್ಕಾರ ರಚಿಸಿದೆ. ಆಯೋಗವು ಎರಡು ವರ್ಷಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು.

70-75 ವರ್ಷಗಳ ನಂತರ ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರ ಹೆಸರಿನಲ್ಲಿ ಆಯೋಗವನ್ನು ರಚಿಸಿರುವುದು ಸಂತೋಷದ ಸಂಗತಿಯಾಗಿದೆ ಎಂದು ಅಲಿ ಅವರು ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...