Homeಕರ್ನಾಟಕಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸುಪ್ರೀಂಕೋರ್ಟ್‌ ತಡೆ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆಯ್ಕೆಯಾದ 13,352 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು. ಮಾರ್ಚ್ 8, 2023ರ ಅಂತಿಮ ಆಯ್ಕೆ ಪಟ್ಟಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳ ಪರವಾಗಿ ನೀಡಲಾದ ನೇಮಕಾತಿ ಪತ್ರಗಳನ್ನು ಅಮಾನತಿನಲ್ಲಿಡಬೇಕು ಎಂದು ಆದೇಶಿಸಿದೆ.

ಅ.12, 2023ರ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶದ ವಿರುದ್ಧ ಲೀಲಾವತಿ ಎನ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳನ್ನು ವಿಚಾರಿಸಿದ ಸುಪ್ರೀಂಕೋರ್ಟ್‌ ಜ.3ರಂದು ಹೈಕೋರ್ಟ್‌ ಆದೇಶಕ್ಕೆ ತಡೆನೀಡಿದೆ ಮತ್ತು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸುವ ಡಿಎಲ್ ಚಿದಾನಂದ ಅವರಿಗೆ ಕೋರ್ಟ್‌ ಸೂಚಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎ ಎನ್ ವೇಣುಗೋಪಾಲ ಗೌಡ ಮತ್ತು ವಕೀಲ ಬಾಲಾಜಿ ಶ್ರೀನಿವಾಸನ್, ಹಿರಿಯ ವಕೀಲ ಸಿ ಎ ಸುಂದರಂ ಮತ್ತು ವಕೀಲ ಚಿನ್ಮಯ್ ದೇಶಪಾಂಡೆ ಮತ್ತು ವಕೀಲರಾದ ಶೈಲೇಶ್ ಮಡಿಯಾಳ್, ಮಹೇಶ್ ಠಾಕೂರ್ ಮತ್ತಿತರರು ವಾದ ಮಂಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಆದೇಶದವರೆಗೆ, ಹೈಕೋರ್ಟ್‌ ತೀರ್ಪಿನ ಪ್ಯಾರಾಗ್ರಾಫ್ 45 ರಿಂದ 47 ರವರೆಗೆ ನೀಡಲಾದ ನಿರ್ದೇಶನಗಳನ್ನು ಜಾರಿಗೆ ತರಬಾರದು. ಮಾರ್ಚ್ 08, 2023ರ ಅಂತಿಮ ಆಯ್ಕೆ ಪಟ್ಟಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾದ ನೇಮಕಾತಿ ಪತ್ರಗಳನ್ನು ತಡೆ ಹಿಡಿಯಬೇಕು ಎಂದು ಕೋರ್ಟ್‌ ಹೇಳಿದೆ.

ಜ.30 2023ರಂದು ಹೈಕೋರ್ಟ್‌ನ ಏಕ ನ್ಯಾಯಾಧೀಶ ಪೀಠವು ನ.18, 2022ರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತ್ತು. ಅನುತ್ತೀರ್ಣಗೊಂಡಿದ್ದ ಅಭ್ಯರ್ಥಿಗಳು ಸಲ್ಲಿಸಿದ ರಿಟ್ ಅರ್ಜಿಗಳ  ಮೇಲೆ ಆದೇಶಿಸಿತ್ತು. ಆಯ್ಕೆಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಪಡಿಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ತಕರಾರನ್ನು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು ಎಂದು ಹೇಳಿತ್ತು.

ವಿವಾಹಿತ ಮಹಿಳೆಯರು ಪತಿಯ ಆದಾಯದ ಆಧಾರದಡಿ ತಮ್ಮ ಆದಾಯ ಪ್ರಮಾಣ ಪತ್ರವನ್ನು ನೇಮಕಾತಿ ವೇಳೆ ಸಲ್ಲಿಸಬೇಕಿತ್ತು. ಅದರೆ ತಂದೆಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂಬ ಕಾರಣ ನೀಡಿ 451 ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು. ಇದನ್ನು ಪ್ರಶ್ನಿಸಿ, ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನು ಓದಿ: ಮಣಿಪುರದಲ್ಲಿ ಪತ್ರಕರ್ತರ ಬಂಧನ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಾದ್ಯಮಗಳನ್ನು ಕಟ್ಟಿಹಾಕಲು ಯತ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...