Homeಕರ್ನಾಟಕಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸುಪ್ರೀಂಕೋರ್ಟ್‌ ತಡೆ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸುಪ್ರೀಂಕೋರ್ಟ್‌ ತಡೆ

- Advertisement -
- Advertisement -

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಆಯ್ಕೆಯಾದ 13,352 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು. ಮಾರ್ಚ್ 8, 2023ರ ಅಂತಿಮ ಆಯ್ಕೆ ಪಟ್ಟಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳ ಪರವಾಗಿ ನೀಡಲಾದ ನೇಮಕಾತಿ ಪತ್ರಗಳನ್ನು ಅಮಾನತಿನಲ್ಲಿಡಬೇಕು ಎಂದು ಆದೇಶಿಸಿದೆ.

ಅ.12, 2023ರ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶದ ವಿರುದ್ಧ ಲೀಲಾವತಿ ಎನ್ ಮತ್ತು ಇತರರು ಸಲ್ಲಿಸಿದ ಅರ್ಜಿಗಳನ್ನು ವಿಚಾರಿಸಿದ ಸುಪ್ರೀಂಕೋರ್ಟ್‌ ಜ.3ರಂದು ಹೈಕೋರ್ಟ್‌ ಆದೇಶಕ್ಕೆ ತಡೆನೀಡಿದೆ ಮತ್ತು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರವನ್ನು ಪ್ರತಿನಿಧಿಸುವ ಡಿಎಲ್ ಚಿದಾನಂದ ಅವರಿಗೆ ಕೋರ್ಟ್‌ ಸೂಚಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಎ ಎನ್ ವೇಣುಗೋಪಾಲ ಗೌಡ ಮತ್ತು ವಕೀಲ ಬಾಲಾಜಿ ಶ್ರೀನಿವಾಸನ್, ಹಿರಿಯ ವಕೀಲ ಸಿ ಎ ಸುಂದರಂ ಮತ್ತು ವಕೀಲ ಚಿನ್ಮಯ್ ದೇಶಪಾಂಡೆ ಮತ್ತು ವಕೀಲರಾದ ಶೈಲೇಶ್ ಮಡಿಯಾಳ್, ಮಹೇಶ್ ಠಾಕೂರ್ ಮತ್ತಿತರರು ವಾದ ಮಂಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಮುಂದಿನ ಆದೇಶದವರೆಗೆ, ಹೈಕೋರ್ಟ್‌ ತೀರ್ಪಿನ ಪ್ಯಾರಾಗ್ರಾಫ್ 45 ರಿಂದ 47 ರವರೆಗೆ ನೀಡಲಾದ ನಿರ್ದೇಶನಗಳನ್ನು ಜಾರಿಗೆ ತರಬಾರದು. ಮಾರ್ಚ್ 08, 2023ರ ಅಂತಿಮ ಆಯ್ಕೆ ಪಟ್ಟಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾದ ನೇಮಕಾತಿ ಪತ್ರಗಳನ್ನು ತಡೆ ಹಿಡಿಯಬೇಕು ಎಂದು ಕೋರ್ಟ್‌ ಹೇಳಿದೆ.

ಜ.30 2023ರಂದು ಹೈಕೋರ್ಟ್‌ನ ಏಕ ನ್ಯಾಯಾಧೀಶ ಪೀಠವು ನ.18, 2022ರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿತ್ತು. ಅನುತ್ತೀರ್ಣಗೊಂಡಿದ್ದ ಅಭ್ಯರ್ಥಿಗಳು ಸಲ್ಲಿಸಿದ ರಿಟ್ ಅರ್ಜಿಗಳ  ಮೇಲೆ ಆದೇಶಿಸಿತ್ತು. ಆಯ್ಕೆಪಟ್ಟಿ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಪಡಿಸಿರುವ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ತಕರಾರನ್ನು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು ಎಂದು ಹೇಳಿತ್ತು.

ವಿವಾಹಿತ ಮಹಿಳೆಯರು ಪತಿಯ ಆದಾಯದ ಆಧಾರದಡಿ ತಮ್ಮ ಆದಾಯ ಪ್ರಮಾಣ ಪತ್ರವನ್ನು ನೇಮಕಾತಿ ವೇಳೆ ಸಲ್ಲಿಸಬೇಕಿತ್ತು. ಅದರೆ ತಂದೆಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂಬ ಕಾರಣ ನೀಡಿ 451 ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು. ಇದನ್ನು ಪ್ರಶ್ನಿಸಿ, ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಇದನ್ನು ಓದಿ: ಮಣಿಪುರದಲ್ಲಿ ಪತ್ರಕರ್ತರ ಬಂಧನ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಾದ್ಯಮಗಳನ್ನು ಕಟ್ಟಿಹಾಕಲು ಯತ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...