Homeಮುಖಪುಟಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ- 2013ರ ಅಡಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದು ತೀರ್ಪು ನೀಡಿದ್ದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ (ಫೆ.20) ತಡೆ ನೀಡಿದೆ.

ಲೋಕಪಾಲ್ ಆದೇಶ ‘ತುಂಬಾ ಕಳವಳಕಾರಿ’ ಎಂದಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಲೋಕಪಾಲ್ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ನೋಟಿಸ್ ಜಾರಿಗೊಳಿಸಿ, ಕೇಂದ್ರ ಸರ್ಕಾರ, ಲೋಕಪಾಲ್ ರಿಜಿಸ್ಟ್ರಾರ್ ಮತ್ತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರು ದಾಖಲಿಸಿರುವ ವ್ಯಕ್ತಿಯಿಂದ ಪ್ರತಿಕ್ರಿಯೆ ಕೋರಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ನ್ಯಾಯಾಧೀಶರು ಎಂದಿಗೂ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ-2013 ರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಅಭಯ್ ಎಸ್ ಓಕಾ ಅವರನ್ನೂ ಒಳಗೊಂಡ ಪೀಠವು, ದೂರುದಾರರು ನ್ಯಾಯಾಧೀಶರ ಹೆಸರನ್ನು ಬಹಿರಂಗಪಡಿಸದಂತೆ ತಡೆಯಾಜ್ಞೆ ನೀಡಿದೆ ಮತ್ತು ಅವರು ಸಲ್ಲಿಸಿದ ದೂರನ್ನು ಗೌಪ್ಯವಾಗಿಡಲು ನಿರ್ದೇಶಿಸಿದೆ. ಆಕ್ಷೇಪಾರ್ಹ ಆದೇಶಕ್ಕೆ ತಡೆಯಾಜ್ಞೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಲೋಕಪಾಲ್ ಜನವರಿ 27 ರಂದು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಷಯವನ್ನು ನಿರ್ವಹಿಸುವಲ್ಲಿ ಪೀಠಕ್ಕೆ ಸಹಾಯ ಮಾಡಲು ಬಯಸುವುದಾಗಿ ಹೇಳಿದ್ದಾರೆ. ಲೋಕ್ ಪಾಲ್ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನ ಅನುಸಾರ ಮಾರ್ಚ್ 18 ರಂದು ಈ ವಿಷಯವನ್ನು ಮತ್ತೆ ವಿಚಾರಣೆಗೆ ನಡೆಸಲಾಗುವುದು ಎಂದು ಪೀಠ ತಿಳಿಸಿದೆ.

“ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಈ ವಿಷಯವು ಬಹಳ ಮಹತ್ವದ್ದಾಗಿರುವುದರಿಂದ” ಸಿಬಲ್ ಮತ್ತು ಮತ್ತೊಬ್ಬ ಹಿರಿಯ ವಕೀಲರು ನ್ಯಾಯಾಲಯಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

“ಲೋಕಪಾಲ್ ಅಧಿಕಾರಕ್ಕೆ ಮಿತಿ ಇದೆ. ಈ ಆದೇಶವನ್ನು ನಾವು ತಡೆಹಿಡಿದಿದ್ದೇವೆ. ಈ ಆದೇಶದ ಪರಿಣಾಮಗಳೇನು ಎಂದು ಅವರಿಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಇದು ಅರ್ಥವಾಗದಿದ್ದರೆ, ನಾವು ಇಲ್ಲಿದ್ದೇವೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಹೈಕೋರ್ಟ್‌ನ ಹಾಲಿ ಹೆಚ್ಚುವರಿ ನ್ಯಾಯಾಧೀಶರ ವಿರುದ್ಧ ದಾಖಲಾಗಿದ್ದ ಎರಡು ದೂರುಗಳ ಮೇರೆಗೆ ಲೋಕಪಾಲ್ ಆದೇಶ ನೀಡಿತ್ತು.

ಖಾಸಗಿ ಕಂಪನಿಯೊಂದು ದೂರುದಾರರ ವಿರುದ್ಧ ಹೂಡಿದ್ದ ಮೊಕದ್ದಮೆಯನ್ನು ನಿರ್ವಹಿಸಬೇಕಿದ್ದ ರಾಜ್ಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಅದೇ ಹೈಕೋರ್ಟ್‌ನ ನ್ಯಾಯಾಧೀಶರ ಮೇಲೆ ಅವರು ಪ್ರಭಾವ ಬೀರಿ ಆ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದಾರೆ ಎಂದು ದೂರುಗಳಲ್ಲಿ ಆರೋಪಿಸಲಾಗಿದೆ.

ಖಾಸಗಿ ಕಂಪನಿಯು ಈ ಹಿಂದೆ ಹೈಕೋರ್ಟ್ ನ್ಯಾಯಾಧೀಶರು ವಕೀಲರ ಸಂಘದ ಸದಸ್ಯರಾಗಿ ಅಭ್ಯಾಸ ಮಾಡುತ್ತಿದ್ದಾಗ ಅವರ ಕಕ್ಷಿದಾರರಾಗಿದ್ದರು ಎಂದು ಹೇಳಲಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...