Homeಮುಖಪುಟಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ- 2013ರ ಅಡಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರನ್ನು ವಿಚಾರಣೆಗೆ ಒಳಪಡಿಸುವ ಅಧಿಕಾರವಿದೆ ಎಂದು ತೀರ್ಪು ನೀಡಿದ್ದ ಲೋಕಪಾಲ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಗುರುವಾರ (ಫೆ.20) ತಡೆ ನೀಡಿದೆ.

ಲೋಕಪಾಲ್ ಆದೇಶ ‘ತುಂಬಾ ಕಳವಳಕಾರಿ’ ಎಂದಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ ಮತ್ತು ಲೋಕಪಾಲ್ ರಿಜಿಸ್ಟ್ರಾರ್‌ಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ನೋಟಿಸ್ ಜಾರಿಗೊಳಿಸಿ, ಕೇಂದ್ರ ಸರ್ಕಾರ, ಲೋಕಪಾಲ್ ರಿಜಿಸ್ಟ್ರಾರ್ ಮತ್ತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರು ದಾಖಲಿಸಿರುವ ವ್ಯಕ್ತಿಯಿಂದ ಪ್ರತಿಕ್ರಿಯೆ ಕೋರಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ನ್ಯಾಯಾಧೀಶರು ಎಂದಿಗೂ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ-2013 ರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಅಭಯ್ ಎಸ್ ಓಕಾ ಅವರನ್ನೂ ಒಳಗೊಂಡ ಪೀಠವು, ದೂರುದಾರರು ನ್ಯಾಯಾಧೀಶರ ಹೆಸರನ್ನು ಬಹಿರಂಗಪಡಿಸದಂತೆ ತಡೆಯಾಜ್ಞೆ ನೀಡಿದೆ ಮತ್ತು ಅವರು ಸಲ್ಲಿಸಿದ ದೂರನ್ನು ಗೌಪ್ಯವಾಗಿಡಲು ನಿರ್ದೇಶಿಸಿದೆ. ಆಕ್ಷೇಪಾರ್ಹ ಆದೇಶಕ್ಕೆ ತಡೆಯಾಜ್ಞೆ ನೀಡುತ್ತಿದ್ದೇವೆ ಎಂದು ಹೇಳಿದೆ.

ಲೋಕಪಾಲ್ ಜನವರಿ 27 ರಂದು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ.

ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ಈ ವಿಷಯವನ್ನು ನಿರ್ವಹಿಸುವಲ್ಲಿ ಪೀಠಕ್ಕೆ ಸಹಾಯ ಮಾಡಲು ಬಯಸುವುದಾಗಿ ಹೇಳಿದ್ದಾರೆ. ಲೋಕ್ ಪಾಲ್ ಆದೇಶಕ್ಕೆ ತಡೆ ನೀಡುವಂತೆ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನ ಅನುಸಾರ ಮಾರ್ಚ್ 18 ರಂದು ಈ ವಿಷಯವನ್ನು ಮತ್ತೆ ವಿಚಾರಣೆಗೆ ನಡೆಸಲಾಗುವುದು ಎಂದು ಪೀಠ ತಿಳಿಸಿದೆ.

“ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಈ ವಿಷಯವು ಬಹಳ ಮಹತ್ವದ್ದಾಗಿರುವುದರಿಂದ” ಸಿಬಲ್ ಮತ್ತು ಮತ್ತೊಬ್ಬ ಹಿರಿಯ ವಕೀಲರು ನ್ಯಾಯಾಲಯಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.

“ಲೋಕಪಾಲ್ ಅಧಿಕಾರಕ್ಕೆ ಮಿತಿ ಇದೆ. ಈ ಆದೇಶವನ್ನು ನಾವು ತಡೆಹಿಡಿದಿದ್ದೇವೆ. ಈ ಆದೇಶದ ಪರಿಣಾಮಗಳೇನು ಎಂದು ಅವರಿಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಇದು ಅರ್ಥವಾಗದಿದ್ದರೆ, ನಾವು ಇಲ್ಲಿದ್ದೇವೆ” ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.

ಹೈಕೋರ್ಟ್‌ನ ಹಾಲಿ ಹೆಚ್ಚುವರಿ ನ್ಯಾಯಾಧೀಶರ ವಿರುದ್ಧ ದಾಖಲಾಗಿದ್ದ ಎರಡು ದೂರುಗಳ ಮೇರೆಗೆ ಲೋಕಪಾಲ್ ಆದೇಶ ನೀಡಿತ್ತು.

ಖಾಸಗಿ ಕಂಪನಿಯೊಂದು ದೂರುದಾರರ ವಿರುದ್ಧ ಹೂಡಿದ್ದ ಮೊಕದ್ದಮೆಯನ್ನು ನಿರ್ವಹಿಸಬೇಕಿದ್ದ ರಾಜ್ಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಅದೇ ಹೈಕೋರ್ಟ್‌ನ ನ್ಯಾಯಾಧೀಶರ ಮೇಲೆ ಅವರು ಪ್ರಭಾವ ಬೀರಿ ಆ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದಾರೆ ಎಂದು ದೂರುಗಳಲ್ಲಿ ಆರೋಪಿಸಲಾಗಿದೆ.

ಖಾಸಗಿ ಕಂಪನಿಯು ಈ ಹಿಂದೆ ಹೈಕೋರ್ಟ್ ನ್ಯಾಯಾಧೀಶರು ವಕೀಲರ ಸಂಘದ ಸದಸ್ಯರಾಗಿ ಅಭ್ಯಾಸ ಮಾಡುತ್ತಿದ್ದಾಗ ಅವರ ಕಕ್ಷಿದಾರರಾಗಿದ್ದರು ಎಂದು ಹೇಳಲಾಗಿದೆ.

ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳನ್ನು ಉತ್ತೇಜಿಸುತ್ತಿದೆ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...