Homeಮುಖಪುಟಹೈದರಾಬಾದ್ ವಿವಿ 'ಕಾಂಚ ಗಚಿಬೌಲಿ' ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ (ಯುಒಹೆಚ್‌) ಜಾಗಕ್ಕೆ ಹೊಂದಿಕೊಂಡಿರುವ ‘ಕಾಂಚ ಗಚಿಬೌಲಿ’ಯ 400 ಎಕರೆ ಅರಣ್ಯ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಏ.2) ನೀಡಿರುವ ಮಧ್ಯಂತರ ಆದೇಶವನ್ನು ತೆಲಂಗಾಣ ಗುರುವಾರ ಹೈಕೋರ್ಟ್ ವಿಸ್ತರಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ನಿಗದಿಪಡಿಸಿದೆ.

ಈ ನಡುವೆ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸರ್ವೋಚ್ಚ ನ್ಯಾಯಾಲಯ ಕೂಡ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ತಡೆ ನೀಡಿದೆ. ಮುಂದಿನ ಆದೇಶದವರೆಗೆ ಮರಗಳನ್ನು ಉರುಳಿಸದಂತೆ ನೋಡಿಕೊಳ್ಳಲು ತೆಲಂಗಾಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿರುವುದರಿಂದ ಹೈಕೋರ್ಟ್‌ ವಿಚಾರಣೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಬುಧವಾರ ತೆಲಂಗಾಣ ಹೈಕೋರ್ಟ್ ಕೂಡ ಮರಗಳ ತೆರವಿಗೆ ತಡೆ ನೀಡಿತ್ತು.

ತೆಲಂಗಾಣದ ಸರ್ಕಾರದ ಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘಿ ಅವರು, “ವಿವಾದಿತ ಭೂಮಿಯು ಅರಣ್ಯ ಎಂದು ಎಲ್ಲೂ ಉಲ್ಲೇಖಿಸಿಲ್ಲ. ಅದರ ಸುತ್ತಮುತ್ತಲಿನಲ್ಲಿ ಪ್ರದೇಶಗಳಲ್ಲಿ ಗಾಲ್ಫ್ ಕೋರ್ಸ್ ಮತ್ತು ಬಯೋ ಡೈವರ್ಸಿಟಿ ಪಾರ್ಕ್‌ನಂತಹ ಹಸಿರು ಸ್ಥಳಗಳಿವೆ. ಈ ಭೂಮಿಯನ್ನು ಐಎಂಜಿ ಭಾರತ್‌ ಎಂಬ ಸಂಸ್ಥೆಗೆ ನೀಡಲಾಗಿತ್ತು ಎಂದು ಹೇಳಿದ್ದಾರೆ.

ಅರ್ಜಿದಾರರ ಪರ ಹಿರಿಯ ವಕೀಲ ನಿರಂಜನ್ ರೆಡ್ಡಿ ವಾದ ಮಂಡಿಸಿ, “ಅರಣ್ಯನಾಶದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಲಾಗಿದೆ. ಪ್ರಕರಣ ನ್ಯಾಯಾಲಯದಲ್ಲಿದ್ದರೂ ಮರ ತೆರವು ಮುಂದುವರೆದಿದೆ. ಅದರ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ವಾದ ಆಲಿಸಿದ ಸುಪ್ರೀಂ ಕೋರ್ಟ್, ಏಪ್ರಿಲ್ 7ರಂದು ನಡೆಯುವ ಮುಂದಿನ ವಿಚಾರಣೆಗೂ ಮೊದಲು ಮಧ್ಯಂತರ ಅರ್ಜಿ ಸಲ್ಲಿಸುವಂತೆ ತೆಲಂಗಾಣ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ವಿವಾದಿತ ಪ್ರದೇಶದಲ್ಲಿ ಮರಗಳನ್ನು ಕಡಿಯುವುದನ್ನು ತಡೆಹಿಡಿದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ದೊಡ್ಡ ಪ್ರಮಾಣದ ಅರಣ್ಯನಾಶದ ಆರೋಪದ ವರದಿಗಳನ್ನು ಗಮನಿಸಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು, ತೆಲಂಗಾಣ ಹೈಕೋರ್ಟ್‌ನ ರಿಜಿಸ್ಟ್ರಾರ್ (ನ್ಯಾಯಾಂಗ) ಅವರಿಗೆ ಸ್ಥಳವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಏನಿದು ಅರಣ್ಯ ನಾಶ ವಿವಾದ?

ಹೈದರಾಬಾದ್ ಕೇಂದ್ರೀಯ ವಿವಿಯ ಜಮೀನಿಗೆ ಹೊಂದಿಕೊಂಡಿರುವ ನಗರದ ‘ಕಾಂಚಿ ಗಚಿಬೌಲಿ’ಯ 400 ಎಕರೆ ಅರಣ್ಯವನ್ನು ನಾಶ ಮಾಡಿ ಅಲ್ಲಿ ಐಟಿ ಪಾರ್ಕ್‌ ಸ್ಥಾಪಿಸಲು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರೋಪಿಸಲಾಗಿದೆ.

ವಿವಾದಿತ ಜಾಗವನ್ನು ಕಾಂಕ್ರೀಟ್ ಕಾಡಾಗಿ ಮಾರ್ಪಟ್ಟಿರುವ ಹೈದಾರಾಬಾದ್‌ನ ಐಟಿ ಹಬ್‌ ಫಿನಾಶಿಯಲ್ ಡಿಸ್ಟ್ರಿಕ್‌ನ ‘ಶ್ವಾಸಕೋಶ’ ಎಂದು ಕರೆಯಲಾಗುತ್ತದೆ. ಫಿನಾಶಿಯಲ್ ಡಿಸ್ಟ್ರಿಕ್‌ ಸಂಪೂರ್ಣ ಕಾಂಕ್ರೀಟ್ ಕಟ್ಟಡಗಳಿಂದ ತುಂಬಿದ್ದು, ಈ ವಿವಾದಿತ ಜಾಗ ಮಾತ್ರ ವನ್ಯ ಜೀವಿಗಳ ಏಕೈಕ ಅಶ್ರಯ ತಾಣವಾಗಿ ಉಳಿದಿದೆ.

ಈ ಜಾಗ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿದೆ. ಜಿಂಕೆ, ನವಿಲು ಸೇರಿದಂತೆ ಅನೇಕ ವನ್ಯ ಜೀವಿಗಳ ಆಶ್ರಯ ತಾಣವಾಗಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚೆಗೆ ಸರ್ಕಾರ ಬುಲ್ಡೋಜರ್‌ಗಳನ್ನು ತಂದು ರಾತ್ರೋ ರಾತ್ರಿ ಮರಗಳ ತೆರವಿಗೆ ಮುಂದಾಗಿತ್ತು. ಇದಕ್ಕೆ ಹೈದರಾಬಾದ್ ವಿವಿಯ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳು ಮತ್ತು ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಮರಗಳ ತೆರವು ವಿರೋಧಿಸಿ ಪ್ರತಿಭಟಿಸಿದ್ದ ಹೈದರಾಬಾದ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ದಬ್ಬಾಳಿಕೆ ನಡೆಸಿದ್ದಾರೆ. ಬುಲ್ಡೋಜರ್ ತಂದು ಮರಗಳನ್ನು ಧರೆಗುಳಿಸುತ್ತಿರುವುದನ್ನು ವಿಡಿಯೋ ಮಾಡಿದ ವಿದ್ಯಾರ್ಥಿಯೊಬ್ಬರನ್ನು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ರೇವಂತ್ ರೆಡ್ಡಿ ಸರ್ಕಾರದ ವಿರುದ್ದ ದೊಡ್ಡ ಮಟ್ಟದ ಆಕ್ರೋಶ ಭುಗಿಲೆದ್ದಿದೆ. ರಾತ್ರಿ ಹೊತ್ತು ಮರಗಳನ್ನು ಉರುಳಿಸುವಾಗ ನವಿಲುಗಳು ಚೀರಾಡುವ, ಎಲ್ಲಿಗೆ ಹೋಗಬೇಕೆಂದು ದಿಕ್ಕು ತೋಚದೆ ಓಡಾಡುವ ಜಿಂಕೆಗಳು ಹಾಗೂ ಮತ್ತಿತರ ವನ್ಯ ಜೀವಿಗಳ ಮನಕಲಕುವ ವಿಡಿಯೋಗಳು ಭಾರೀ ವೈರಲ್ ಆಗಿವೆ.

ವಿವಾದಿತ ಭೂಮಿ ಹೈದರಾಬಾದ್ ವಿವಿಯದ್ದಾ?

ಸರ್ಕಾರ ಅರಣ್ಯ ನಾಶ ಮಾಡಿ ಐಟಿ ಪಾರ್ಕ್‌ ಸ್ಥಾಪಿಸಲು ಹೊರಟಿರುವ 400 ಎಕರೆ ಭೂಮಿ ಹೈದರಾಬಾದ್ ವಿವಿಯದ್ದು ಎಂದು ವಿದ್ಯಾರ್ಥಿಗಳು ಮತ್ತು ಇತರ ಹೋರಾಟಗಾರರು ವಾದಿಸುತ್ತಿದ್ದಾರೆ. ಸರ್ಕಾರ ಐಟಿ ಪಾರ್ಕ್‌ ಮಾಡಲು ಮುಂದಾಗಿರುವ ಜಾಗ ಕಂದಾಯ ಇಲಾಖೆಯದ್ದಲ್ಲ ಎಂದಿದ್ದಾರೆ.

ಆದರೆ, ಸರ್ಕಾರ, ಅದು ವಿವಿಯ ಜಾಗವಲ್ಲ, ಸರ್ಕಾರದ ಜಾಗ. ಸರ್ವೆ ನಂಬರ್ 25ರ 400 ಎಕರೆ ಜಾಗವನ್ನು 2004 ರಲ್ಲಿ ಅವಿಭಜಿತ ಆಂಧ್ರಪ್ರದೇಶ ಸರ್ಕಾರ ಕ್ರೀಡಾ ಸೌಲಭ್ಯಗಳಿಗಾಗಿ ಖಾಸಗಿ ಸಂಸ್ಥೆಯಾದ ಐಎಂಜಿ ಅಕಾಡೆಮಿಸ್ ಭಾರತ್ ಪ್ರೈವೇಟ್ ಲಿಮಿಟೆಡ್‌ಗೆ ನೀಡಿತ್ತು.

ನಂತರ, ಆ ಸಂಸ್ಥೆಯ ನಿಷ್ಕ್ರಿಯತೆಯ ಕಾರಣ 2006ರಲ್ಲಿ ಭೂಮಿ ಹಂಚಿಕೆಯನ್ನು ರದ್ದುಗೊಳಿಸಿತ್ತು. ಕಾನೂನು ಹೋರಾಟದ ನಂತರ ಸರ್ಕಾರ ಜಾಗವನ್ನು ಮರಳಿ ಪಡೆದುಕೊಂಡಿತು. ಸುಪ್ರೀಂ ಕೋರ್ಟ್ ಮೇ 2024ರಲ್ಲಿ ಸರ್ಕಾರದ ಮಾಲೀಕತ್ವವನ್ನು ಎತ್ತಿಹಿಡಿದಿದೆ.

ಕಂದಾಯ ದಾಖಲೆಗಳು ಇದನ್ನು “ಕಾಂಚ ಅಸ್ತಬಲ್ ಪೊರಂಬೋಕೆ ಸರ್ಕಾರಿ” (ಸರ್ಕಾರಿ ಭೂಮಿ) ಎಂದು ವರ್ಗೀಕರಿಸಿದೆ. ಜುಲೈ 19, 2024ರಂದು ವಿವಿ ಅಧಿಕಾರಿಗಳ ಸಮ್ಮುಖದಲ್ಲಿ ಸಮೀಕ್ಷೆ ನಡೆಸಿ ವಿವಿಯ ಭೂಮಿಯಿಂದ 400 ಎಕರೆಯನ್ನು ಬೇರ್ಪಡಿಸಿ ಗಡಿ ನಿರ್ಣಯಿಸಲಾಗಿದೆ.

ವಿವಿ ಜಾಗದಲ್ಲಿರುವ ಬಫಲೋ ಲೇಕ್‌, ಪೀಕಾಕ್ ಲೇಕ್, ಮಶ್ರೂಮ್ ರಾಕ್‌ನಂತಹ ಪ್ರಮುಖ ವೈಶಿಷ್ಟ್ಯಗಳಿಗೆ ತೆಲಂಗಾಣ ಕೈಗಾರಿಕಾ ಮೂಲಸೌಕರ್ಯ ನಿಗಮ (ಟಿಜಿಐಐಸಿ) ಅಡಿಯಲ್ಲಿ ಕೈಗೊಳ್ಳುವ ಅಭಿವೃದ್ದಿ ಕಾಮಗಾರಿಗಳಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು ವಾದಿಸಿದೆ.

ಅಂಡಮಾನ್ ನಿಕೋಬಾರ್‌ನ ನಿರ್ಬಂಧಿತ ಉತ್ತರ ಸೆಂಟಿನೆಲ್ ದ್ವೀಪಕ್ಕೆ ಭೇಟಿ ನೀಡಿದ ಅಮೆರಿಕ ಪ್ರಜೆಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...