Homeಮುಖಪುಟಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಆದೇಶ ಸಮಾನತೆಯ ವಿರೋಧಿ ಎಂದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಸಂವಿಧಾನದ 14ನೇ ವಿಧಿಯ (ಸಮಾನತೆ) ಉಲ್ಲಂಘನೆಯಾಗಿದೆ ಎಂದಿದೆ.

ಸಂಸದರು, ಶಾಸಕರು, ಅಖಿಲ ಭಾರತ ಸೇವಾ ಅಧಿಕಾರಿಗಳು, ರಾಜ್ಯ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಮೂಲ ದರದಲ್ಲಿ ಭೂ ಮಂಜೂರಾತಿಗೆ ಪ್ರತ್ಯೇಕ ವರ್ಗ ಎಂದು ವರ್ಗೀಕರಿಸಿ, ಆಗಿನ ಆಂಧ್ರ ಪ್ರದೇಶ ಸರ್ಕಾರ 2005ರಲ್ಲಿ ಹೊರಡಿಸಿದ್ದ ಜ್ಞಾಪಕ ಪತ್ರವನ್ನು ಬದಿಗೊತ್ತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಈ ವಿಭಾಗಗಳಿಗೆ ಮಂಜೂರು ಮಾಡಿ 2008ರಲ್ಲಿ ನೀಡಲಾದ ಆದೇಶವನ್ನೂ ಸರ್ಕಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಆದೇಶ ಒಂದು ಕೆಟ್ಟ ಕಾನೂನು ಮತ್ತು ಸಂವಿಧಾನದ ವಿಧಿ 14ರ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

2010ರಲ್ಲಿ ತೆಲಂಗಾಣ ಹೈಕೋರ್ಟ್ ಸರ್ಕಾರದ ಆದೇಶವನ್ನು ಭಾಗಶಃ ರದ್ದುಗೊಳಿಸಿತ್ತು. ಇದರ ವಿರುದ್ಧ ತೆಲಂಗಾಣ ಸರ್ಕಾರ, ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ.

“ಸಮಾಜದ ಅರ್ಹ ವರ್ಗಗಳಿಗೆ ಭೂಮಿ ಮಂಜೂರು ಮಾಡುವುದಾಗಿ ಹೇಳಿಕೊಂಡು ನ್ಯಾಯಸಮ್ಮತತೆಯ ವೇಷದಲ್ಲಿ ನಡೆಸುತ್ತಿರುವ ನಿರಂಕುಶ ಆಡಳಿತದ ಒಂದು ಕ್ರಮವಾಗಿದ ಈ ಆದೇಶ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಸಮಾಜದ ಶ್ರೀಮಂತ ವರ್ಗಗಳಿಗೆ ಆದ್ಯತೆಯಲ್ಲಿ ಮನೆಗಳನ್ನು ನೀಡಲು ಉದ್ದೇಶಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಅಲ್ಲದೆ, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದವರನ್ನು ದೂರವಿಡುವ ಮೂಲಕ, ಅವರ ಸಮಾನತೆಯ ಹಕ್ಕನ್ನು ನಿರಾಕರಿಸುವ ನಡೆಯಾಗಿದೆ. ಇದು ಆರ್ಥಿಕ-ಸಾಮಾಜಿಕ ನೆಲೆಗಟ್ಟಿನಲ್ಲಿ ಬಡವರು ಮತ್ತು ಶ್ರೀಮಂತರನ್ನು ಸಮಾಜದಲ್ಲಿ ಪ್ರತ್ಯೇಕಿಸುತ್ತದೆ” ಎಂದು ಹೇಳಿದೆ. ಈ ಮೂಲಕ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.

“ಸರ್ಕಾರಗಳು ಸವಲತ್ತು ಪಡೆದ ಕೆಲವರಿಗೆ ರಿಯಾಯಿತಿ ದರದಲ್ಲಿ ಭೂಮಿಯನ್ನು ಹಂಚಿದಾಗ, ಅದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇತರರು ಪ್ರವೇಶಿಸಲಾಗದ ಅನ್ಯಾಯದ ಪ್ರಯೋಜನವನ್ನು ಅವರಿಗೆ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಈ ಪ್ರಾಶಸ್ತ್ಯದ ಪರಿಗಣನೆಯು ಸಮಾಜದಲ್ಲಿ ಕೆಲವು ವ್ಯಕ್ತಿಗಳು ಮಾತ್ರ ಹೆಚ್ಚಿನದನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳು ಅವರು ಪಡೆಯುವ ಸೌಲಭ್ಯಗಳು ಸಮಾಜಕ್ಕೆ ಮಾಡಿದ ಕೆಲಸಗಳಿಗಲ್ಲ, ಅವರು ಹೊಂದಿರುವ ಸ್ಥಾನಮಾನ ದೊರೆತಿದೆ ಎಂಬ ಭಾವನೆಯನ್ನು ಮೂಡಿಸುತ್ತದೆ” ಎಂದಿದೆ.

“ಇಂತಹ ಕ್ರಮಗಳು ಸಾಮಾನ್ಯ ನಾಗರಿಕರಲ್ಲಿ ಅಸಮಾಧಾನ ಮತ್ತು ಭ್ರಮನಿರಸನವನ್ನು ಉಂಟುಮಾಡುತ್ತವೆ. ಇದನ್ನು ಅವರು ಭ್ರಷ್ಟಚಾರ ಅಥವಾ ಅನ್ಯಾಯವೆಂದು ನೋಡುತ್ತಾರೆ. ಅವರಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ದುರ್ಬಲಗೊಳ್ಳುತ್ತದೆ. ಒಗ್ಗಟ್ಟು ಮತ್ತು ಭ್ರಾತೃತ್ವವನ್ನು ಹಾಳು ಮಾಡುತ್ತದೆ. ಸಾಮಾಜದ ಶ್ರೇಣಿಕೃತ ವ್ಯವಸ್ಥೆಗಳನ್ನು ಕೆಡವುವ ಬದಲು, ಬಲಪಡಿಸುತ್ತದೆ” ಎಂದು ನ್ಯಾಯಾಲಯ ವಿವರಿಸಿದೆ.

“ಸರ್ಕಾರದ ಆದೇಶ ಪತ್ರ ಅಸಮಾನತೆಯನ್ನು ಪ್ರತಿಪಾದಿಸುತ್ತದೆ. ಸಂವಿಧಾನ ಸೂಚಿಸಿದ ಸಮಾನತೆ ಮತ್ತು ನ್ಯಾಯೋಚಿತ ಮಾನದಂಡಗಳನ್ನು ಪೂರೈಸುವುದಿಲ್ಲ” ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ನಿವೇಶನಕ್ಕಾಗಿ ಠೇವಣಿ ಮಾಡಿರುವ ಸಂಪೂರ್ಣ ಮೊತ್ತದ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಹಣ ವಾಪಸ್ ನೀಡುವ ಬಗ್ಗೆ ತೆಲಂಗಾಣ ಸರ್ಕಾರ ಪರಿಶೀಲಿಸಿ ಹಂಚಿಕೆ ಮಾಡಬೇಕಿದೆ.

ಸೊಸೈಟಿಗಳು ಮತ್ತು ಅದರ ಸದಸ್ಯರ ಪರವಾಗಿ ರಾಜ್ಯ ಸರ್ಕಾರ ಕಾರ್ಯಗತಗೊಳಿಸಿದ ಗುತ್ತಿಗೆ ಕರಾರುಗಳನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...