Homeಮುಖಪುಟಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಆದೇಶ ಸಮಾನತೆಯ ವಿರೋಧಿ ಎಂದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಸಂವಿಧಾನದ 14ನೇ ವಿಧಿಯ (ಸಮಾನತೆ) ಉಲ್ಲಂಘನೆಯಾಗಿದೆ ಎಂದಿದೆ.

ಸಂಸದರು, ಶಾಸಕರು, ಅಖಿಲ ಭಾರತ ಸೇವಾ ಅಧಿಕಾರಿಗಳು, ರಾಜ್ಯ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಮೂಲ ದರದಲ್ಲಿ ಭೂ ಮಂಜೂರಾತಿಗೆ ಪ್ರತ್ಯೇಕ ವರ್ಗ ಎಂದು ವರ್ಗೀಕರಿಸಿ, ಆಗಿನ ಆಂಧ್ರ ಪ್ರದೇಶ ಸರ್ಕಾರ 2005ರಲ್ಲಿ ಹೊರಡಿಸಿದ್ದ ಜ್ಞಾಪಕ ಪತ್ರವನ್ನು ಬದಿಗೊತ್ತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಈ ವಿಭಾಗಗಳಿಗೆ ಮಂಜೂರು ಮಾಡಿ 2008ರಲ್ಲಿ ನೀಡಲಾದ ಆದೇಶವನ್ನೂ ಸರ್ಕಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಆದೇಶ ಒಂದು ಕೆಟ್ಟ ಕಾನೂನು ಮತ್ತು ಸಂವಿಧಾನದ ವಿಧಿ 14ರ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

2010ರಲ್ಲಿ ತೆಲಂಗಾಣ ಹೈಕೋರ್ಟ್ ಸರ್ಕಾರದ ಆದೇಶವನ್ನು ಭಾಗಶಃ ರದ್ದುಗೊಳಿಸಿತ್ತು. ಇದರ ವಿರುದ್ಧ ತೆಲಂಗಾಣ ಸರ್ಕಾರ, ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ.

“ಸಮಾಜದ ಅರ್ಹ ವರ್ಗಗಳಿಗೆ ಭೂಮಿ ಮಂಜೂರು ಮಾಡುವುದಾಗಿ ಹೇಳಿಕೊಂಡು ನ್ಯಾಯಸಮ್ಮತತೆಯ ವೇಷದಲ್ಲಿ ನಡೆಸುತ್ತಿರುವ ನಿರಂಕುಶ ಆಡಳಿತದ ಒಂದು ಕ್ರಮವಾಗಿದ ಈ ಆದೇಶ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಸಮಾಜದ ಶ್ರೀಮಂತ ವರ್ಗಗಳಿಗೆ ಆದ್ಯತೆಯಲ್ಲಿ ಮನೆಗಳನ್ನು ನೀಡಲು ಉದ್ದೇಶಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಅಲ್ಲದೆ, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದವರನ್ನು ದೂರವಿಡುವ ಮೂಲಕ, ಅವರ ಸಮಾನತೆಯ ಹಕ್ಕನ್ನು ನಿರಾಕರಿಸುವ ನಡೆಯಾಗಿದೆ. ಇದು ಆರ್ಥಿಕ-ಸಾಮಾಜಿಕ ನೆಲೆಗಟ್ಟಿನಲ್ಲಿ ಬಡವರು ಮತ್ತು ಶ್ರೀಮಂತರನ್ನು ಸಮಾಜದಲ್ಲಿ ಪ್ರತ್ಯೇಕಿಸುತ್ತದೆ” ಎಂದು ಹೇಳಿದೆ. ಈ ಮೂಲಕ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.

“ಸರ್ಕಾರಗಳು ಸವಲತ್ತು ಪಡೆದ ಕೆಲವರಿಗೆ ರಿಯಾಯಿತಿ ದರದಲ್ಲಿ ಭೂಮಿಯನ್ನು ಹಂಚಿದಾಗ, ಅದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇತರರು ಪ್ರವೇಶಿಸಲಾಗದ ಅನ್ಯಾಯದ ಪ್ರಯೋಜನವನ್ನು ಅವರಿಗೆ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಈ ಪ್ರಾಶಸ್ತ್ಯದ ಪರಿಗಣನೆಯು ಸಮಾಜದಲ್ಲಿ ಕೆಲವು ವ್ಯಕ್ತಿಗಳು ಮಾತ್ರ ಹೆಚ್ಚಿನದನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳು ಅವರು ಪಡೆಯುವ ಸೌಲಭ್ಯಗಳು ಸಮಾಜಕ್ಕೆ ಮಾಡಿದ ಕೆಲಸಗಳಿಗಲ್ಲ, ಅವರು ಹೊಂದಿರುವ ಸ್ಥಾನಮಾನ ದೊರೆತಿದೆ ಎಂಬ ಭಾವನೆಯನ್ನು ಮೂಡಿಸುತ್ತದೆ” ಎಂದಿದೆ.

“ಇಂತಹ ಕ್ರಮಗಳು ಸಾಮಾನ್ಯ ನಾಗರಿಕರಲ್ಲಿ ಅಸಮಾಧಾನ ಮತ್ತು ಭ್ರಮನಿರಸನವನ್ನು ಉಂಟುಮಾಡುತ್ತವೆ. ಇದನ್ನು ಅವರು ಭ್ರಷ್ಟಚಾರ ಅಥವಾ ಅನ್ಯಾಯವೆಂದು ನೋಡುತ್ತಾರೆ. ಅವರಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ದುರ್ಬಲಗೊಳ್ಳುತ್ತದೆ. ಒಗ್ಗಟ್ಟು ಮತ್ತು ಭ್ರಾತೃತ್ವವನ್ನು ಹಾಳು ಮಾಡುತ್ತದೆ. ಸಾಮಾಜದ ಶ್ರೇಣಿಕೃತ ವ್ಯವಸ್ಥೆಗಳನ್ನು ಕೆಡವುವ ಬದಲು, ಬಲಪಡಿಸುತ್ತದೆ” ಎಂದು ನ್ಯಾಯಾಲಯ ವಿವರಿಸಿದೆ.

“ಸರ್ಕಾರದ ಆದೇಶ ಪತ್ರ ಅಸಮಾನತೆಯನ್ನು ಪ್ರತಿಪಾದಿಸುತ್ತದೆ. ಸಂವಿಧಾನ ಸೂಚಿಸಿದ ಸಮಾನತೆ ಮತ್ತು ನ್ಯಾಯೋಚಿತ ಮಾನದಂಡಗಳನ್ನು ಪೂರೈಸುವುದಿಲ್ಲ” ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ನಿವೇಶನಕ್ಕಾಗಿ ಠೇವಣಿ ಮಾಡಿರುವ ಸಂಪೂರ್ಣ ಮೊತ್ತದ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಹಣ ವಾಪಸ್ ನೀಡುವ ಬಗ್ಗೆ ತೆಲಂಗಾಣ ಸರ್ಕಾರ ಪರಿಶೀಲಿಸಿ ಹಂಚಿಕೆ ಮಾಡಬೇಕಿದೆ.

ಸೊಸೈಟಿಗಳು ಮತ್ತು ಅದರ ಸದಸ್ಯರ ಪರವಾಗಿ ರಾಜ್ಯ ಸರ್ಕಾರ ಕಾರ್ಯಗತಗೊಳಿಸಿದ ಗುತ್ತಿಗೆ ಕರಾರುಗಳನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...