Homeಮುಖಪುಟಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರದ ಆದೇಶ ಸಮಾನತೆಯ ವಿರೋಧಿ ಎಂದ ಸರ್ವೋಚ್ಚ ನ್ಯಾಯಾಲಯ

- Advertisement -
- Advertisement -

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು ಸಂವಿಧಾನದ 14ನೇ ವಿಧಿಯ (ಸಮಾನತೆ) ಉಲ್ಲಂಘನೆಯಾಗಿದೆ ಎಂದಿದೆ.

ಸಂಸದರು, ಶಾಸಕರು, ಅಖಿಲ ಭಾರತ ಸೇವಾ ಅಧಿಕಾರಿಗಳು, ರಾಜ್ಯ ಸರ್ಕಾರಿ ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರನ್ನು ಮೂಲ ದರದಲ್ಲಿ ಭೂ ಮಂಜೂರಾತಿಗೆ ಪ್ರತ್ಯೇಕ ವರ್ಗ ಎಂದು ವರ್ಗೀಕರಿಸಿ, ಆಗಿನ ಆಂಧ್ರ ಪ್ರದೇಶ ಸರ್ಕಾರ 2005ರಲ್ಲಿ ಹೊರಡಿಸಿದ್ದ ಜ್ಞಾಪಕ ಪತ್ರವನ್ನು ಬದಿಗೊತ್ತಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ವ್ಯಾಪ್ತಿಯಲ್ಲಿರುವ ಭೂಮಿಯನ್ನು ಈ ವಿಭಾಗಗಳಿಗೆ ಮಂಜೂರು ಮಾಡಿ 2008ರಲ್ಲಿ ನೀಡಲಾದ ಆದೇಶವನ್ನೂ ಸರ್ಕಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಆದೇಶ ಒಂದು ಕೆಟ್ಟ ಕಾನೂನು ಮತ್ತು ಸಂವಿಧಾನದ ವಿಧಿ 14ರ ಉಲ್ಲಂಘನೆ ಎಂದು ನ್ಯಾಯಾಲಯ ಹೇಳಿದೆ.

2010ರಲ್ಲಿ ತೆಲಂಗಾಣ ಹೈಕೋರ್ಟ್ ಸರ್ಕಾರದ ಆದೇಶವನ್ನು ಭಾಗಶಃ ರದ್ದುಗೊಳಿಸಿತ್ತು. ಇದರ ವಿರುದ್ಧ ತೆಲಂಗಾಣ ಸರ್ಕಾರ, ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ಸಲ್ಲಿಸಿದ ಅರ್ಜಿಗಳನ್ನು ನ್ಯಾಯಾಲಯವು ವಜಾಗೊಳಿಸಿದೆ.

“ಸಮಾಜದ ಅರ್ಹ ವರ್ಗಗಳಿಗೆ ಭೂಮಿ ಮಂಜೂರು ಮಾಡುವುದಾಗಿ ಹೇಳಿಕೊಂಡು ನ್ಯಾಯಸಮ್ಮತತೆಯ ವೇಷದಲ್ಲಿ ನಡೆಸುತ್ತಿರುವ ನಿರಂಕುಶ ಆಡಳಿತದ ಒಂದು ಕ್ರಮವಾಗಿದ ಈ ಆದೇಶ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

“ಸಮಾಜದ ಶ್ರೀಮಂತ ವರ್ಗಗಳಿಗೆ ಆದ್ಯತೆಯಲ್ಲಿ ಮನೆಗಳನ್ನು ನೀಡಲು ಉದ್ದೇಶಿಸಿರುವುದು ಅಧಿಕಾರದ ದುರುಪಯೋಗವಾಗಿದೆ. ಅಲ್ಲದೆ, ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದವರನ್ನು ದೂರವಿಡುವ ಮೂಲಕ, ಅವರ ಸಮಾನತೆಯ ಹಕ್ಕನ್ನು ನಿರಾಕರಿಸುವ ನಡೆಯಾಗಿದೆ. ಇದು ಆರ್ಥಿಕ-ಸಾಮಾಜಿಕ ನೆಲೆಗಟ್ಟಿನಲ್ಲಿ ಬಡವರು ಮತ್ತು ಶ್ರೀಮಂತರನ್ನು ಸಮಾಜದಲ್ಲಿ ಪ್ರತ್ಯೇಕಿಸುತ್ತದೆ” ಎಂದು ಹೇಳಿದೆ. ಈ ಮೂಲಕ ಸಂವಿಧಾನದ ಆಶಯವನ್ನು ನ್ಯಾಯಾಲಯ ಎತ್ತಿ ಹಿಡಿದಿದೆ.

“ಸರ್ಕಾರಗಳು ಸವಲತ್ತು ಪಡೆದ ಕೆಲವರಿಗೆ ರಿಯಾಯಿತಿ ದರದಲ್ಲಿ ಭೂಮಿಯನ್ನು ಹಂಚಿದಾಗ, ಅದು ಅಸಮಾನತೆಯನ್ನು ಸೃಷ್ಟಿಸುತ್ತದೆ. ಇತರರು ಪ್ರವೇಶಿಸಲಾಗದ ಅನ್ಯಾಯದ ಪ್ರಯೋಜನವನ್ನು ಅವರಿಗೆ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ.

“ಈ ಪ್ರಾಶಸ್ತ್ಯದ ಪರಿಗಣನೆಯು ಸಮಾಜದಲ್ಲಿ ಕೆಲವು ವ್ಯಕ್ತಿಗಳು ಮಾತ್ರ ಹೆಚ್ಚಿನದನ್ನು ಪಡೆಯಲು ಅರ್ಹರಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸುತ್ತದೆ. ಸಾರ್ವಜನಿಕ ವ್ಯಕ್ತಿಗಳು ಅವರು ಪಡೆಯುವ ಸೌಲಭ್ಯಗಳು ಸಮಾಜಕ್ಕೆ ಮಾಡಿದ ಕೆಲಸಗಳಿಗಲ್ಲ, ಅವರು ಹೊಂದಿರುವ ಸ್ಥಾನಮಾನ ದೊರೆತಿದೆ ಎಂಬ ಭಾವನೆಯನ್ನು ಮೂಡಿಸುತ್ತದೆ” ಎಂದಿದೆ.

“ಇಂತಹ ಕ್ರಮಗಳು ಸಾಮಾನ್ಯ ನಾಗರಿಕರಲ್ಲಿ ಅಸಮಾಧಾನ ಮತ್ತು ಭ್ರಮನಿರಸನವನ್ನು ಉಂಟುಮಾಡುತ್ತವೆ. ಇದನ್ನು ಅವರು ಭ್ರಷ್ಟಚಾರ ಅಥವಾ ಅನ್ಯಾಯವೆಂದು ನೋಡುತ್ತಾರೆ. ಅವರಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ನಂಬಿಕೆ ದುರ್ಬಲಗೊಳ್ಳುತ್ತದೆ. ಒಗ್ಗಟ್ಟು ಮತ್ತು ಭ್ರಾತೃತ್ವವನ್ನು ಹಾಳು ಮಾಡುತ್ತದೆ. ಸಾಮಾಜದ ಶ್ರೇಣಿಕೃತ ವ್ಯವಸ್ಥೆಗಳನ್ನು ಕೆಡವುವ ಬದಲು, ಬಲಪಡಿಸುತ್ತದೆ” ಎಂದು ನ್ಯಾಯಾಲಯ ವಿವರಿಸಿದೆ.

“ಸರ್ಕಾರದ ಆದೇಶ ಪತ್ರ ಅಸಮಾನತೆಯನ್ನು ಪ್ರತಿಪಾದಿಸುತ್ತದೆ. ಸಂವಿಧಾನ ಸೂಚಿಸಿದ ಸಮಾನತೆ ಮತ್ತು ನ್ಯಾಯೋಚಿತ ಮಾನದಂಡಗಳನ್ನು ಪೂರೈಸುವುದಿಲ್ಲ” ಎಂದು ನ್ಯಾಯಾಲಯ ಪುನರುಚ್ಚರಿಸಿದೆ.

ಸಹಕಾರ ಸಂಘಗಳು ಮತ್ತು ಅದರ ಸದಸ್ಯರು ನಿವೇಶನಕ್ಕಾಗಿ ಠೇವಣಿ ಮಾಡಿರುವ ಸಂಪೂರ್ಣ ಮೊತ್ತದ ವಾಪಸ್ ಪಡೆಯಲು ಅರ್ಹರಾಗಿರುತ್ತಾರೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ. ಹಣ ವಾಪಸ್ ನೀಡುವ ಬಗ್ಗೆ ತೆಲಂಗಾಣ ಸರ್ಕಾರ ಪರಿಶೀಲಿಸಿ ಹಂಚಿಕೆ ಮಾಡಬೇಕಿದೆ.

ಸೊಸೈಟಿಗಳು ಮತ್ತು ಅದರ ಸದಸ್ಯರ ಪರವಾಗಿ ರಾಜ್ಯ ಸರ್ಕಾರ ಕಾರ್ಯಗತಗೊಳಿಸಿದ ಗುತ್ತಿಗೆ ಕರಾರುಗಳನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಲಂಚ, ವಂಚನೆ ಆರೋಪ | ಅದಾನಿ ಜೊತೆಗಿನ ‘ವಿದ್ಯುತ್ ಒಪ್ಪಂದ’ ರದ್ದತಿಗೆ ಮುಂದಾದ ಆಂಧ್ರ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...