Homeಮುಖಪುಟ'ಸ್ತನ ಹಿಡಿಯುವುದು ಅತ್ಯಾಚಾರವಲ್ಲ'; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

“ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ ಎಂದು ವರದಿಗಳು ಹೇಳಿವೆ.

ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಬುಧವಾರ (ಮಾ.26) ಈ ಪ್ರಕರಣದ ವಿಚಾರಣೆ ನಡೆಸಲಿದೆ.

‘ಅತ್ಯಾಚಾರ ಆರೋಪ ಎಂದರೇನು’ ಎಂಬುದರ ಕುರಿತ ಅಲಹಾಬಾದ್ ಹೈಕೋರ್ಟ್‌ನ ಅವಲೋಕನವನ್ನು ಕಾನೂನು ತಜ್ಞರು ಖಂಡಿಸಿದ್ದರು. ನ್ಯಾಯಾಧೀಶರು ಸಂಯಮ ಪಾಲಿಸಬೇಕು ಎಂದು ಕರೆ ನೀಡಿದ್ದರು. ಇಂತಹ ಹೇಳಿಕೆಗಳಿಂದಾಗಿ ನ್ಯಾಯಾಂಗದ ಮೇಲಿನ ಸಾರ್ವಜನಿಕ ವಿಶ್ವಾಸ ಕುಸಿಯುತ್ತಿದೆ ಎಂದು ಒತ್ತಿ ಹೇಳಿದ್ದರು.

ಮಾರ್ಚ್ 17ರಂದು ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರು “ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ” ಎಂದು ಹೇಳಿದ್ದರು.

ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸೆಕ್ಷನ್‌ಗಳಡಿಯಲ್ಲಿ ಸಮನ್ಸ್ ಜಾರಿ ಮಾಡಿದ್ದ ಕಾಸ್‌ಗಂಜ್‌ ಜಿಲ್ಲಾ ನ್ಯಾಯಾಲಯದ ದೇಶವನ್ನು ಪ್ರಶ್ನಿಸಿ ಆರೋಪಿಗಳು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ಹಿನ್ನೆಲೆ : ಈ ಪ್ರಕರಣ 2021ರ ನವೆಂಬರ್‌ 10ರಂದು ನಡೆದ ಘಟನೆಗೆ ಸಂಬಂಧಿಸಿದೆ. ಅಂದು ಸಂಜೆ ದೂರುದಾರ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಮಗಳು ತಮ್ಮ ಸಂಬಂಧಿಯ ಮನೆಯಿಂದ ತಮ್ಮೂರಿಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತಮ್ಮ ಗ್ರಾಮದ ಮೂವರು ಯುವಕರಾದ ಪವನ್, ಆಕಾಶ್ ಮತ್ತು ಅಶೋಕ್ ಎದುರುಗೊಂಡಿದ್ದರು. ಅವರಲ್ಲಿ ಪವನ್ ಎಂಬಾತ ಮಹಿಳೆಯ ಮಗಳನ್ನು ತನ್ನ ಬೈಕ್‌ನಲ್ಲಿ ಮನೆಗೆ ಕರೆದೊಯ್ಯುವುದಾಗಿ ಹೇಳಿದ್ದ. ಆತನನ್ನು ನಂಬಿದ ಸಂತ್ರಸ್ತೆ ಮಗಳನ್ನು ಕಳಿಸಿದ್ದರು. ಆದರೆ, ಬಾಲಕಿಯನ್ನು ಕರೆದೊಯ್ದ ಆರೋಪಿಗಳು ದಾರಿ ಮಧ್ಯೆ ಬೈಕ್‌ ನಿಲ್ಲಿಸಿ ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾರೆ. ಪವನ್ ಮತ್ತು ಆಕಾಶ್ ಬಾಲಕಿಯ ಸ್ತನಗಳನ್ನು ಹಿಡಿದು, ಆಕೆಯ ಪೈಜಾಮದ ದಾರವನ್ನು ಬಿಚ್ಚಿ, ಪೈಜಾಮವನ್ನು ಕೆಳಗೆ ಎಳೆಯಲು ಯತ್ನಿಸಿದ್ದರು. ಈ ವೇಳೆಗೆ ಸ್ಥಳೀಯರು ಸ್ಥಳಕ್ಕೆ ಬಂದ ಕಾರಣ, ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಬಾಲಕಿಯ ತಾಯಿ ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅತ್ಯಾಚಾರ ಆರೋಪದ ಮೇಲೆ ಐಪಿಸಿ ಸೆಕ್ಷನ್‌ 376(ಅತ್ಯಾಚಾರ) ಅಡಿಯಲ್ಲಿ ಆರೋಪಿಗಳಾದ ಪವನ್‌ ಮತ್ತು ಆಕಾಶ್‌ಗೆ ಸಮನ್ಸ್ ಜಾರಿ ಮಾಡಲು ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಆರೋಪಿಗಳು ಅಲಹಾಬಾದ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ರಾಮ್ ಮೋಹನ್‌ ನಾರಾಯನ್ ಮಿಶ್ರಾ ಅವರು “ಸ್ತನ ಮುಟ್ಟುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರವಲ್ಲ. ಅದು ವಿವಸ್ತ್ರಗೊಳಿಸಿ ಹಲ್ಲೆ ನಡೆಸುವ ಅಪರಾಧ” ಎಂದು ಹೇಳಿದ್ದರು.

ಸೇನಾ ಅಧಿಕಾರಿ ಮೇಲೆ ಹಲ್ಲೆ | ಪಂಜಾಬ್ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...