Homeಮುಖಪುಟ‘ಪ್ರತಿಭಟಿಸುವುದು ಸಂಪೂರ್ಣ ಹಕ್ಕು’: ಸುಪ್ರೀಂ ನಿರ್ಧಾರ ಏನಾಗಬಹುದು?

‘ಪ್ರತಿಭಟಿಸುವುದು ಸಂಪೂರ್ಣ ಹಕ್ಕು’: ಸುಪ್ರೀಂ ನಿರ್ಧಾರ ಏನಾಗಬಹುದು?

- Advertisement -
- Advertisement -

ಉತ್ತರ ಪ್ರದೇಶದ ಲಿಖಿಂಪುರ ಜಿಲ್ಲೆಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಕೊಂದ ಪ್ರಕರಣವನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಪ್ರತಿಭಟಿಸುವ ಹಕ್ಕನ್ನು ‘ಸಂಪೂರ್ಣ ಹಕ್ಕು’ ಎನ್ನಬಹುದೇ, ಇಲ್ಲವೇ ಎಂದು ನಿರ್ಧರಿಸಲಿದೆ ಎಂದು ವರದಿಯಾಗಿದೆ.

ದಿಲ್ಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರೈತರ ಸಂಘಟನೆಯಾದ ಕಿಸಾನ್ ಮಹಾಪಂಚಾಯತ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

“ಮೂರು ವಿವಾದಾತ್ಮಕ ಕಾನೂನುಗಳನ್ನು ಜಾರಿಗೊಳಿಸದಂತೆ ಸುಪ್ರೀಂಕೋರ್ಟ್ ತಡೆ ಹಿಡಿದಿರುವಾಗ ಪ್ರತಿಭಟನೆ ಮಾಡುತ್ತಿರುವುದು ಸರಿಯೇ?” ಎಂದು ಜಸ್ಟೀಸ್‌ ಎ.ಎಂ.ಖಾನ್‌ವಿಲ್ಕರ್‌ ಮತ್ತು ಜಸ್ಟೀಸ್‌ ಸಿ.ಟಿ.ರವಿಕುಮಾರ್‌ ಅವರಿದ್ದ ಪೀಠವು ರೈತರ ಸಂಘಟನೆಯನ್ನು ಪ್ರಶ್ನಿಸಿದೆ.

“ಮೂರು ವಿವಾದಿತ ಕಾನೂನುಗಳ ಪ್ರಕರಣ ನ್ಯಾಯಾಲಯದಲ್ಲಿರುವಾಗ ರೈತರು ಪ್ರತಿಭಟಿಸಬಹುದೇ ಎಂದು ಕೋರ್ಟ್‌ ನಿರ್ಧರಿಸಲಿದೆ” ಎಂದು ಪೀಠವು ಹೇಳಿರುವುದಾಗಿ ವರದಿಯಾಗಿದೆ.

ಕಳೆದ 2020ರ ಸೆಪ್ಟೆಂಬರ್‌‌ನಲ್ಲಿ ಕೇಂದ್ರ ಸರ್ಕಾರ ವಿವಾದಿತ ಕಾಯ್ದೆಗಳನ್ನು ಜಾರಿಗೊಳಿಸಿತ್ತು. ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಶುರುವಾಗಿ ಇಡೀ ದೇಶವನ್ನು ವ್ಯಾಪಿಸಿ, ಪ್ರತಿಭಟನೆ ಮುಂದುವರಿದಿದೆ. ರೈತರ ಪ್ರತಿಭಟನೆಯ ಕಾವು ಹೆಚ್ಚಾದ ಬಳಿಕ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸದಂತೆ ತಡೆ ನೀಡಿತ್ತು.

ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌, ಭಾನುವಾರ ನಡೆದ ಘಟನೆಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದರು. ಜಸ್ಟೀಸ್‌ ಖಾನ್‌ವಿಲ್ಕರ್‌ ಮಾತನಾಡಿ, “ಈ ರೀತಿಯ ಘಟನೆಗಳು ನಡೆದಾಗ ಯಾರೂ ಜವಾಬ್ದಾರಿಯನ್ನು ಹೊರುವುದಿಲ್ಲ. ದೈಹಿಕ ಹಾಗೂ ಆಸ್ತಿಪಾಸ್ತಿ ಹಾನಿಯಾಗುತ್ತದೆ. ಯಾರೂ ಹೊಣೆಗಾರಿಕೆ ಹೊರುವುದಿಲ್ಲ” ಎಂದಿದ್ದಾರೆ.

“ಕೃಷಿ ಕಾನೂನುಗಳ ವಿಷಯವನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವುದರಿಂದ ಯಾವುದೇ ಪ್ರತಿಭಟನೆ ನಡೆಸಬಾರದು” ಎಂದು ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಬ್ಬರೂ ವಾದಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.

“ಉನ್ನತ ಮಟ್ಟದ ಸಾಂವಿಧಾನಿಕ ನ್ಯಾಯಾಂಗದ ಮುಂದೆ ಪ್ರಕರಣ ಇದ್ದಾಗ , ಯಾರೂ ರಸ್ತೆಗಿಳಿಯಬಾರದು. ಅವರು ನಮ್ಮನ್ನು ನಂಬಬೇಕು” ಎಂದು ಮೆಹ್ತಾ ಹೇಳಿದ್ದಾರೆ.

`ಪ್ರತಿಭಟಿಸುವುದು ಸಂಪೂರ್ಣ ಹಕ್ಕು’ ಎಂಬುದನ್ನು ಸುಪ್ರೀಂ ಕೋರ್ಟ್ ಯಾವ ರೀತಿ ನೋಡಬಹುದು, ರೈತರ ಬೇಡಿಕೆಯಾದ ಮೂರು ವಿವಾದಿತ ಕಾಯ್ದೆಗಳ ಸಂಪೂರ್ಣ ರದ್ದು ಬೇಡಿಕೆಯನ್ನು ಯಾವ ರೀತಿ ವಿಶ್ಲೇಷಿಸಬಹುದು ಎಂಬುದು ಸದ್ಯದ ಕುತೂಹಲವಾಗಿದೆ.

ಇದನ್ನೂ ಓದಿರಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...