Homeಮುಖಪುಟ‘ಪ್ರತಿಭಟಿಸುವುದು ಸಂಪೂರ್ಣ ಹಕ್ಕು’: ಸುಪ್ರೀಂ ನಿರ್ಧಾರ ಏನಾಗಬಹುದು?

‘ಪ್ರತಿಭಟಿಸುವುದು ಸಂಪೂರ್ಣ ಹಕ್ಕು’: ಸುಪ್ರೀಂ ನಿರ್ಧಾರ ಏನಾಗಬಹುದು?

- Advertisement -
- Advertisement -

ಉತ್ತರ ಪ್ರದೇಶದ ಲಿಖಿಂಪುರ ಜಿಲ್ಲೆಯಲ್ಲಿ ರೈತರ ಮೇಲೆ ವಾಹನ ಚಲಾಯಿಸಿ ಕೊಂದ ಪ್ರಕರಣವನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಪ್ರತಿಭಟಿಸುವ ಹಕ್ಕನ್ನು ‘ಸಂಪೂರ್ಣ ಹಕ್ಕು’ ಎನ್ನಬಹುದೇ, ಇಲ್ಲವೇ ಎಂದು ನಿರ್ಧರಿಸಲಿದೆ ಎಂದು ವರದಿಯಾಗಿದೆ.

ದಿಲ್ಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರೈತರ ಸಂಘಟನೆಯಾದ ಕಿಸಾನ್ ಮಹಾಪಂಚಾಯತ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

“ಮೂರು ವಿವಾದಾತ್ಮಕ ಕಾನೂನುಗಳನ್ನು ಜಾರಿಗೊಳಿಸದಂತೆ ಸುಪ್ರೀಂಕೋರ್ಟ್ ತಡೆ ಹಿಡಿದಿರುವಾಗ ಪ್ರತಿಭಟನೆ ಮಾಡುತ್ತಿರುವುದು ಸರಿಯೇ?” ಎಂದು ಜಸ್ಟೀಸ್‌ ಎ.ಎಂ.ಖಾನ್‌ವಿಲ್ಕರ್‌ ಮತ್ತು ಜಸ್ಟೀಸ್‌ ಸಿ.ಟಿ.ರವಿಕುಮಾರ್‌ ಅವರಿದ್ದ ಪೀಠವು ರೈತರ ಸಂಘಟನೆಯನ್ನು ಪ್ರಶ್ನಿಸಿದೆ.

“ಮೂರು ವಿವಾದಿತ ಕಾನೂನುಗಳ ಪ್ರಕರಣ ನ್ಯಾಯಾಲಯದಲ್ಲಿರುವಾಗ ರೈತರು ಪ್ರತಿಭಟಿಸಬಹುದೇ ಎಂದು ಕೋರ್ಟ್‌ ನಿರ್ಧರಿಸಲಿದೆ” ಎಂದು ಪೀಠವು ಹೇಳಿರುವುದಾಗಿ ವರದಿಯಾಗಿದೆ.

ಕಳೆದ 2020ರ ಸೆಪ್ಟೆಂಬರ್‌‌ನಲ್ಲಿ ಕೇಂದ್ರ ಸರ್ಕಾರ ವಿವಾದಿತ ಕಾಯ್ದೆಗಳನ್ನು ಜಾರಿಗೊಳಿಸಿತ್ತು. ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಶುರುವಾಗಿ ಇಡೀ ದೇಶವನ್ನು ವ್ಯಾಪಿಸಿ, ಪ್ರತಿಭಟನೆ ಮುಂದುವರಿದಿದೆ. ರೈತರ ಪ್ರತಿಭಟನೆಯ ಕಾವು ಹೆಚ್ಚಾದ ಬಳಿಕ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸದಂತೆ ತಡೆ ನೀಡಿತ್ತು.

ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ್‌, ಭಾನುವಾರ ನಡೆದ ಘಟನೆಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದರು. ಜಸ್ಟೀಸ್‌ ಖಾನ್‌ವಿಲ್ಕರ್‌ ಮಾತನಾಡಿ, “ಈ ರೀತಿಯ ಘಟನೆಗಳು ನಡೆದಾಗ ಯಾರೂ ಜವಾಬ್ದಾರಿಯನ್ನು ಹೊರುವುದಿಲ್ಲ. ದೈಹಿಕ ಹಾಗೂ ಆಸ್ತಿಪಾಸ್ತಿ ಹಾನಿಯಾಗುತ್ತದೆ. ಯಾರೂ ಹೊಣೆಗಾರಿಕೆ ಹೊರುವುದಿಲ್ಲ” ಎಂದಿದ್ದಾರೆ.

“ಕೃಷಿ ಕಾನೂನುಗಳ ವಿಷಯವನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವುದರಿಂದ ಯಾವುದೇ ಪ್ರತಿಭಟನೆ ನಡೆಸಬಾರದು” ಎಂದು ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಬ್ಬರೂ ವಾದಿಸಿದರು ಎಂದು ಲೈವ್ ಲಾ ವರದಿ ಮಾಡಿದೆ.

“ಉನ್ನತ ಮಟ್ಟದ ಸಾಂವಿಧಾನಿಕ ನ್ಯಾಯಾಂಗದ ಮುಂದೆ ಪ್ರಕರಣ ಇದ್ದಾಗ , ಯಾರೂ ರಸ್ತೆಗಿಳಿಯಬಾರದು. ಅವರು ನಮ್ಮನ್ನು ನಂಬಬೇಕು” ಎಂದು ಮೆಹ್ತಾ ಹೇಳಿದ್ದಾರೆ.

`ಪ್ರತಿಭಟಿಸುವುದು ಸಂಪೂರ್ಣ ಹಕ್ಕು’ ಎಂಬುದನ್ನು ಸುಪ್ರೀಂ ಕೋರ್ಟ್ ಯಾವ ರೀತಿ ನೋಡಬಹುದು, ರೈತರ ಬೇಡಿಕೆಯಾದ ಮೂರು ವಿವಾದಿತ ಕಾಯ್ದೆಗಳ ಸಂಪೂರ್ಣ ರದ್ದು ಬೇಡಿಕೆಯನ್ನು ಯಾವ ರೀತಿ ವಿಶ್ಲೇಷಿಸಬಹುದು ಎಂಬುದು ಸದ್ಯದ ಕುತೂಹಲವಾಗಿದೆ.

ಇದನ್ನೂ ಓದಿರಿ: ಯುಪಿ ರೈತರ ಕೊಲೆ ಖಂಡಿಸಿ ದೇಶಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು: ಚಿತ್ರಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....