Homeಮುಖಪುಟಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್...

ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್ ಮೇವಾನಿ

- Advertisement -
- Advertisement -

ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 17 ವರ್ಷದ ಆರ್ಯನ್ ಮಖಿಯಾಲಾ ಎಂಬ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಕೊಟ್ಟು, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ವಡ್ಗಾಮ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 15ರ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ವಹಿಸಬೇಕೆಂದು ಜಿಗ್ನೇಶ್ ಮೇವಾನಿ ಕೋರಿದ್ದಾರೆ.

ಮಾನವ ಹಕ್ಕು ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಈ ಪ್ರಕರಣದಲ್ಲಿ, ಪೊಲೀಸ್ ಕಸ್ಟಡಿಯಲ್ಲಿದ್ದಾಗ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪಿಸಲಾಗಿದೆ. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ, ಜಿಗ್ನೇಶ್ ಮೇವಾನಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಇದಕ್ಕೂ ಮೊದಲು, ಸಂಚಾಲಕ ಮುಜಾಹಿದ್ ನಫೀಸ್ ನೇತೃತ್ವದ ಅಲ್ಪಸಂಖ್ಯಾತ ಸಮನ್ವಯ ಸಮಿತಿ (ಎಂಸಿಸಿ) ಸೆಪ್ಟೆಂಬರ್ 5ರಂದು ಗುಜರಾತ್ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು, ಸಂತ್ರಸ್ತ ಬಾಲಕನಿಗೆ ಪರಿಹಾರ ನೀಡಬೇಕು ಮತ್ತು ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿತ್ತು.

ದೂರು ಮತ್ತು ಸಾಂಸ್ಥಿಕ ಮುಚ್ಚಿಹಾಕುವಿಕೆಯ ಆರೋಪಗಳಿಗೆ ಸಂಬಂಧಿಸಿದಂತೆ ಶನಿವಾರ ಬೋಟಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೋಟಾಡ್ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಬೋಟಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ ಚಿಂತನ್ ಜೆ. ಟೆರೈಯಾ ಹೇಳಿದ್ದಾರೆ.

“ಬೋಟಾಡ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಪೊಲೀಸರು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ನಾವು ಭಾವಿಸುತ್ತೇವೆ. ಸರ್ಕಾರ ನಡೆಸುವ ತನಿಖೆಯ ಆಧಾರದ ಮೇಲೆ ನಮ್ಮ ಮುಂದಿನ ನಡೆ ಇರುತ್ತದೆ” ಎಂದು ಎಂಸಿಸಿ ಸಂಚಾಲಕ ಮುಜಾಹಿದ್ ನಫೀಸ್ ತಿಳಿಸಿದ್ದಾರೆ.

ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ವಕೀಲ ರೋಹಿನ್ ಭಟ್ ರಿಟ್ ಅರ್ಜಿಯನ್ನು ಪ್ರಸ್ತಾಪಿಸಿದ್ದಾರೆ. ಸಂತ್ರಸ್ತ ಬಾಲಕನ ಸಹೋದರಿಯ ಪರವಾಗಿ ಸಂವಿಧಾನದ ವಿಧಿ 32ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ.

“ಇದು ವಿಧಿ 32ರ ಅಡಿ ಸಲ್ಲಿಸಲಾದ ಅರ್ಜಿಯಾಗಿದೆ. ಅರ್ಜಿದಾರರ ಅಪ್ರಾಪ್ತ ಸಹೋದರನನ್ನು ಪೊಲೀಸರು ಎಳೆದೊಯ್ದು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತನ ಗುದದ್ವಾರಕ್ಕೆ ಕೋಲುಗಳನ್ನು ತುರುಕಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದೆ. ಹಾಗಾಗಿ, ದೆಹಲಿ ಏಮ್ಸ್‌ನಿಂದ ತುರ್ತು ವೈದ್ಯಕೀಯ ಮಂಡಳಿ ರಚನೆಗಾಗಿ ನಾವು ಮನವಿ ಮಾಡುತ್ತೇವೆ” ಎಂದು ಅರ್ಜಿದಾರರ ಪರ ವಕೀಲ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಪ್ರಸ್ತಾಪಿಸುವಾಗ ಹೇಳಿದ್ದಾರೆ.

ವರದಿಗಳ ಪ್ರಕಾರ, ಸಂತ್ರಸ್ತ ಬಾಲಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮ್ಯಾಜಿಸ್ಟ್ರೇಟ್ ಕಚೇರಿಯಿಂದ ಬಂದವರು ಎಂದು ಹೇಳಿಕೊಂಡ ಕೆಲ ವ್ಯಕ್ತಿಗಳು, ಆತನಿಂದ ಕಾಗದದ ಮೇಲೆ ಬಲವಂತವಾಗಿ ಸಹಿ ಹಾಕಿಸಿಕೊಂಡಿದ್ದಾರೆ. ಅಲ್ಲದೆ, ಸೈಕಲ್‌ನಿಂದ ಬಿದ್ದು ಗಾಯಗಳಾಗಿವೆ ಎಂದು ಹೇಳುವ ಕಾಗದಗಳಿಗೆ ಸಹಿ ಹಾಕುವಂತೆ ಬಾಲಕನ ಕುಟುಂಬದ ಮೇಲೆ ಒತ್ತಡ ಹೇರಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಆರೋಪಿಸಲಾಗಿದೆ.

ವಕೀಲರಾದ ರೋಹಿನ್ ಭಟ್ ಮತ್ತು ಪಣಿಷ್ಠ ಭಟ್ ರಚಿಸಿದ ಮತ್ತು ವಕೀಲ ಪರಸ್ ನಾಥ್ ಸಿಂಗ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್, ಪೋಕ್ಸೊ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು, ಗುಜರಾತ್‌ನಿಂದ ಹೊರಗೆ ಎಸ್‌ಐಟಿ, ಸಿಬಿಐ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪರ್ಯಾಯ ತಂಡದ ಮೂಲಕ ತನಿಖೆ ನಡೆಸಬೇಕು, ಬೋಟಾಡ್ ಪೊಲೀಸ್ ಠಾಣೆಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು ಮತ್ತು ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸಬೇಕು ಎಂದು ಕೋರಲಾಗಿದೆ.

ಬಾಲಕನ ದೇಹದಲ್ಲಿ ಆದ ಆಂತರಿಕ ಮತ್ತು ಬಾಹ್ಯ ಗಾಯಗಳ ಬಗ್ಗೆ ನಿರ್ಣಯಿಸಲು ದೆಹಲಿ ಏಮ್ಸ್‌ನಲ್ಲಿ ವೈದ್ಯಕೀಯ ತಂಡವನ್ನು ರಚಿಸಬೇಕು, ಸಂತ್ರಸ್ತನಿಗೆ ಆರ್ಥಿಕ ನೆರವು, ಆಪ್ತ ಸಮಾಲೋಚನೆ ಒದಗಿಸಬೇಕು. ಆತನ ಕುಟುಂಬಕ್ಕೆ ಪರಿಹಾರ ಕೊಡಬೇಕು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಬೇಕು ಮತ್ತು ಸಂತ್ರಸ್ತನ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...