Homeಮುಖಪುಟಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್...

ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್ ಮೇವಾನಿ

- Advertisement -
- Advertisement -

ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 17 ವರ್ಷದ ಆರ್ಯನ್ ಮಖಿಯಾಲಾ ಎಂಬ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಕೊಟ್ಟು, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ವಡ್ಗಾಮ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 15ರ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ವಹಿಸಬೇಕೆಂದು ಜಿಗ್ನೇಶ್ ಮೇವಾನಿ ಕೋರಿದ್ದಾರೆ.

ಮಾನವ ಹಕ್ಕು ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಈ ಪ್ರಕರಣದಲ್ಲಿ, ಪೊಲೀಸ್ ಕಸ್ಟಡಿಯಲ್ಲಿದ್ದಾಗ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪಿಸಲಾಗಿದೆ. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ, ಜಿಗ್ನೇಶ್ ಮೇವಾನಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಇದಕ್ಕೂ ಮೊದಲು, ಸಂಚಾಲಕ ಮುಜಾಹಿದ್ ನಫೀಸ್ ನೇತೃತ್ವದ ಅಲ್ಪಸಂಖ್ಯಾತ ಸಮನ್ವಯ ಸಮಿತಿ (ಎಂಸಿಸಿ) ಸೆಪ್ಟೆಂಬರ್ 5ರಂದು ಗುಜರಾತ್ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು, ಸಂತ್ರಸ್ತ ಬಾಲಕನಿಗೆ ಪರಿಹಾರ ನೀಡಬೇಕು ಮತ್ತು ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿತ್ತು.

ದೂರು ಮತ್ತು ಸಾಂಸ್ಥಿಕ ಮುಚ್ಚಿಹಾಕುವಿಕೆಯ ಆರೋಪಗಳಿಗೆ ಸಂಬಂಧಿಸಿದಂತೆ ಶನಿವಾರ ಬೋಟಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೋಟಾಡ್ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಬೋಟಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ ಚಿಂತನ್ ಜೆ. ಟೆರೈಯಾ ಹೇಳಿದ್ದಾರೆ.

“ಬೋಟಾಡ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಪೊಲೀಸರು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ನಾವು ಭಾವಿಸುತ್ತೇವೆ. ಸರ್ಕಾರ ನಡೆಸುವ ತನಿಖೆಯ ಆಧಾರದ ಮೇಲೆ ನಮ್ಮ ಮುಂದಿನ ನಡೆ ಇರುತ್ತದೆ” ಎಂದು ಎಂಸಿಸಿ ಸಂಚಾಲಕ ಮುಜಾಹಿದ್ ನಫೀಸ್ ತಿಳಿಸಿದ್ದಾರೆ.

ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ವಕೀಲ ರೋಹಿನ್ ಭಟ್ ರಿಟ್ ಅರ್ಜಿಯನ್ನು ಪ್ರಸ್ತಾಪಿಸಿದ್ದಾರೆ. ಸಂತ್ರಸ್ತ ಬಾಲಕನ ಸಹೋದರಿಯ ಪರವಾಗಿ ಸಂವಿಧಾನದ ವಿಧಿ 32ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ.

“ಇದು ವಿಧಿ 32ರ ಅಡಿ ಸಲ್ಲಿಸಲಾದ ಅರ್ಜಿಯಾಗಿದೆ. ಅರ್ಜಿದಾರರ ಅಪ್ರಾಪ್ತ ಸಹೋದರನನ್ನು ಪೊಲೀಸರು ಎಳೆದೊಯ್ದು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತನ ಗುದದ್ವಾರಕ್ಕೆ ಕೋಲುಗಳನ್ನು ತುರುಕಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದೆ. ಹಾಗಾಗಿ, ದೆಹಲಿ ಏಮ್ಸ್‌ನಿಂದ ತುರ್ತು ವೈದ್ಯಕೀಯ ಮಂಡಳಿ ರಚನೆಗಾಗಿ ನಾವು ಮನವಿ ಮಾಡುತ್ತೇವೆ” ಎಂದು ಅರ್ಜಿದಾರರ ಪರ ವಕೀಲ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಪ್ರಸ್ತಾಪಿಸುವಾಗ ಹೇಳಿದ್ದಾರೆ.

ವರದಿಗಳ ಪ್ರಕಾರ, ಸಂತ್ರಸ್ತ ಬಾಲಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮ್ಯಾಜಿಸ್ಟ್ರೇಟ್ ಕಚೇರಿಯಿಂದ ಬಂದವರು ಎಂದು ಹೇಳಿಕೊಂಡ ಕೆಲ ವ್ಯಕ್ತಿಗಳು, ಆತನಿಂದ ಕಾಗದದ ಮೇಲೆ ಬಲವಂತವಾಗಿ ಸಹಿ ಹಾಕಿಸಿಕೊಂಡಿದ್ದಾರೆ. ಅಲ್ಲದೆ, ಸೈಕಲ್‌ನಿಂದ ಬಿದ್ದು ಗಾಯಗಳಾಗಿವೆ ಎಂದು ಹೇಳುವ ಕಾಗದಗಳಿಗೆ ಸಹಿ ಹಾಕುವಂತೆ ಬಾಲಕನ ಕುಟುಂಬದ ಮೇಲೆ ಒತ್ತಡ ಹೇರಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಆರೋಪಿಸಲಾಗಿದೆ.

ವಕೀಲರಾದ ರೋಹಿನ್ ಭಟ್ ಮತ್ತು ಪಣಿಷ್ಠ ಭಟ್ ರಚಿಸಿದ ಮತ್ತು ವಕೀಲ ಪರಸ್ ನಾಥ್ ಸಿಂಗ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್, ಪೋಕ್ಸೊ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು, ಗುಜರಾತ್‌ನಿಂದ ಹೊರಗೆ ಎಸ್‌ಐಟಿ, ಸಿಬಿಐ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪರ್ಯಾಯ ತಂಡದ ಮೂಲಕ ತನಿಖೆ ನಡೆಸಬೇಕು, ಬೋಟಾಡ್ ಪೊಲೀಸ್ ಠಾಣೆಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು ಮತ್ತು ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸಬೇಕು ಎಂದು ಕೋರಲಾಗಿದೆ.

ಬಾಲಕನ ದೇಹದಲ್ಲಿ ಆದ ಆಂತರಿಕ ಮತ್ತು ಬಾಹ್ಯ ಗಾಯಗಳ ಬಗ್ಗೆ ನಿರ್ಣಯಿಸಲು ದೆಹಲಿ ಏಮ್ಸ್‌ನಲ್ಲಿ ವೈದ್ಯಕೀಯ ತಂಡವನ್ನು ರಚಿಸಬೇಕು, ಸಂತ್ರಸ್ತನಿಗೆ ಆರ್ಥಿಕ ನೆರವು, ಆಪ್ತ ಸಮಾಲೋಚನೆ ಒದಗಿಸಬೇಕು. ಆತನ ಕುಟುಂಬಕ್ಕೆ ಪರಿಹಾರ ಕೊಡಬೇಕು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಬೇಕು ಮತ್ತು ಸಂತ್ರಸ್ತನ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...