Homeಮುಖಪುಟಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್...

ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್ ಮೇವಾನಿ

- Advertisement -
- Advertisement -

ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 17 ವರ್ಷದ ಆರ್ಯನ್ ಮಖಿಯಾಲಾ ಎಂಬ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಕೊಟ್ಟು, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ವಡ್ಗಾಮ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 15ರ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ವಹಿಸಬೇಕೆಂದು ಜಿಗ್ನೇಶ್ ಮೇವಾನಿ ಕೋರಿದ್ದಾರೆ.

ಮಾನವ ಹಕ್ಕು ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಈ ಪ್ರಕರಣದಲ್ಲಿ, ಪೊಲೀಸ್ ಕಸ್ಟಡಿಯಲ್ಲಿದ್ದಾಗ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪಿಸಲಾಗಿದೆ. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ, ಜಿಗ್ನೇಶ್ ಮೇವಾನಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಇದಕ್ಕೂ ಮೊದಲು, ಸಂಚಾಲಕ ಮುಜಾಹಿದ್ ನಫೀಸ್ ನೇತೃತ್ವದ ಅಲ್ಪಸಂಖ್ಯಾತ ಸಮನ್ವಯ ಸಮಿತಿ (ಎಂಸಿಸಿ) ಸೆಪ್ಟೆಂಬರ್ 5ರಂದು ಗುಜರಾತ್ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು, ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು, ಸಂತ್ರಸ್ತ ಬಾಲಕನಿಗೆ ಪರಿಹಾರ ನೀಡಬೇಕು ಮತ್ತು ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿತ್ತು.

ದೂರು ಮತ್ತು ಸಾಂಸ್ಥಿಕ ಮುಚ್ಚಿಹಾಕುವಿಕೆಯ ಆರೋಪಗಳಿಗೆ ಸಂಬಂಧಿಸಿದಂತೆ ಶನಿವಾರ ಬೋಟಾಡ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೋಟಾಡ್ ಪೊಲೀಸ್ ಠಾಣೆಯ ನಾಲ್ವರು ಸಿಬ್ಬಂದಿ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಹಲವು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಬೋಟಾಡ್ ಉಪ ಪೊಲೀಸ್ ವರಿಷ್ಠಾಧಿಕಾರಿ ಚಿಂತನ್ ಜೆ. ಟೆರೈಯಾ ಹೇಳಿದ್ದಾರೆ.

“ಬೋಟಾಡ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಪೊಲೀಸರು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ನಾವು ಭಾವಿಸುತ್ತೇವೆ. ಸರ್ಕಾರ ನಡೆಸುವ ತನಿಖೆಯ ಆಧಾರದ ಮೇಲೆ ನಮ್ಮ ಮುಂದಿನ ನಡೆ ಇರುತ್ತದೆ” ಎಂದು ಎಂಸಿಸಿ ಸಂಚಾಲಕ ಮುಜಾಹಿದ್ ನಫೀಸ್ ತಿಳಿಸಿದ್ದಾರೆ.

ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ವಕೀಲ ರೋಹಿನ್ ಭಟ್ ರಿಟ್ ಅರ್ಜಿಯನ್ನು ಪ್ರಸ್ತಾಪಿಸಿದ್ದಾರೆ. ಸಂತ್ರಸ್ತ ಬಾಲಕನ ಸಹೋದರಿಯ ಪರವಾಗಿ ಸಂವಿಧಾನದ ವಿಧಿ 32ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ.

“ಇದು ವಿಧಿ 32ರ ಅಡಿ ಸಲ್ಲಿಸಲಾದ ಅರ್ಜಿಯಾಗಿದೆ. ಅರ್ಜಿದಾರರ ಅಪ್ರಾಪ್ತ ಸಹೋದರನನ್ನು ಪೊಲೀಸರು ಎಳೆದೊಯ್ದು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತನ ಗುದದ್ವಾರಕ್ಕೆ ಕೋಲುಗಳನ್ನು ತುರುಕಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದೆ. ಹಾಗಾಗಿ, ದೆಹಲಿ ಏಮ್ಸ್‌ನಿಂದ ತುರ್ತು ವೈದ್ಯಕೀಯ ಮಂಡಳಿ ರಚನೆಗಾಗಿ ನಾವು ಮನವಿ ಮಾಡುತ್ತೇವೆ” ಎಂದು ಅರ್ಜಿದಾರರ ಪರ ವಕೀಲ ಸುಪ್ರೀಂ ಕೋರ್ಟ್ ಮುಂದೆ ಅರ್ಜಿ ಪ್ರಸ್ತಾಪಿಸುವಾಗ ಹೇಳಿದ್ದಾರೆ.

ವರದಿಗಳ ಪ್ರಕಾರ, ಸಂತ್ರಸ್ತ ಬಾಲಕ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮ್ಯಾಜಿಸ್ಟ್ರೇಟ್ ಕಚೇರಿಯಿಂದ ಬಂದವರು ಎಂದು ಹೇಳಿಕೊಂಡ ಕೆಲ ವ್ಯಕ್ತಿಗಳು, ಆತನಿಂದ ಕಾಗದದ ಮೇಲೆ ಬಲವಂತವಾಗಿ ಸಹಿ ಹಾಕಿಸಿಕೊಂಡಿದ್ದಾರೆ. ಅಲ್ಲದೆ, ಸೈಕಲ್‌ನಿಂದ ಬಿದ್ದು ಗಾಯಗಳಾಗಿವೆ ಎಂದು ಹೇಳುವ ಕಾಗದಗಳಿಗೆ ಸಹಿ ಹಾಕುವಂತೆ ಬಾಲಕನ ಕುಟುಂಬದ ಮೇಲೆ ಒತ್ತಡ ಹೇರಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಆರೋಪಿಸಲಾಗಿದೆ.

ವಕೀಲರಾದ ರೋಹಿನ್ ಭಟ್ ಮತ್ತು ಪಣಿಷ್ಠ ಭಟ್ ರಚಿಸಿದ ಮತ್ತು ವಕೀಲ ಪರಸ್ ನಾಥ್ ಸಿಂಗ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್, ಪೋಕ್ಸೊ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕು, ಗುಜರಾತ್‌ನಿಂದ ಹೊರಗೆ ಎಸ್‌ಐಟಿ, ಸಿಬಿಐ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪರ್ಯಾಯ ತಂಡದ ಮೂಲಕ ತನಿಖೆ ನಡೆಸಬೇಕು, ಬೋಟಾಡ್ ಪೊಲೀಸ್ ಠಾಣೆಯಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂರಕ್ಷಿಸಬೇಕು ಮತ್ತು ಎಲ್ಲಾ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸಬೇಕು ಎಂದು ಕೋರಲಾಗಿದೆ.

ಬಾಲಕನ ದೇಹದಲ್ಲಿ ಆದ ಆಂತರಿಕ ಮತ್ತು ಬಾಹ್ಯ ಗಾಯಗಳ ಬಗ್ಗೆ ನಿರ್ಣಯಿಸಲು ದೆಹಲಿ ಏಮ್ಸ್‌ನಲ್ಲಿ ವೈದ್ಯಕೀಯ ತಂಡವನ್ನು ರಚಿಸಬೇಕು, ಸಂತ್ರಸ್ತನಿಗೆ ಆರ್ಥಿಕ ನೆರವು, ಆಪ್ತ ಸಮಾಲೋಚನೆ ಒದಗಿಸಬೇಕು. ಆತನ ಕುಟುಂಬಕ್ಕೆ ಪರಿಹಾರ ಕೊಡಬೇಕು, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಬೇಕು ಮತ್ತು ಸಂತ್ರಸ್ತನ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ.

ರೈತ ವಿರೋಧಿ ಟ್ವೀಟ್: ಬಿಜೆಪಿ ಸಂಸದೆ ಕಂಗನಾ ರಣಾವತ್‌ಗೆ ಸುಪ್ರೀಂ ಕೋರ್ಟ್ ತರಾಟೆ; ಪ್ರಕರಣ ರದ್ದತಿಗೆ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...