Homeಚಳವಳಿರೈತರ ಹತ್ಯಾಕಾಂಡ: ಮಾ.11ಕ್ಕೆ ಆರೋಪಿ ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಅರ್ಜಿ ವಿಚಾರಣೆ

ರೈತರ ಹತ್ಯಾಕಾಂಡ: ಮಾ.11ಕ್ಕೆ ಆರೋಪಿ ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಅರ್ಜಿ ವಿಚಾರಣೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ನೀಡಲಾದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಂತ್ರಸ್ತ ರೈತರ ಕುಟುಂಬಗಳು ಸಲ್ಲಿಸಿರುವ ಅರ್ಜಿಯನ್ನು ಮಾರ್ಚ್ 11 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿತೆಗೆದುಕೊಂಡ ಲಖಿಂಪುರ್‌ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು.

ಈ ಪ್ರಕರಣದ ಹೆಚ್ಚಿನ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ಗೆ ಬರುತ್ತಿದ್ದಾರೆ. ಇದರಿಂದ ಸಾಕ್ಷ್ಯ ಹಾಳೂ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಇದನ್ನು ನಿಲ್ಲಿಸಬೇಕು ಎಂದು ವಕೀಲ ಪ್ರಶಾಂತ್ ಭೂಷಣ್ ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದರಿಂದ ಮಾರ್ಚ್ 11 ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸುವಂತೆ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ತಿಳಿಸಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡದ ಆರೋಪಿಗೆ ಜಾಮೀನು: ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

“ಲಖಿಂಪುರ ಖೇರಿ ಪ್ರಕರಣದ ಇತರ ಆರೋಪಿಗಳು ಈ ಆರೋಪಿಗೆ (ಆಶಿಶ್ ಮಿಶ್ರಾ) ಜಾಮೀನು ಮಂಜೂರು ಮಾಡಿದ ನಂತರ ಜಾಮೀನು ಕೋರುತ್ತಿದ್ದಾರೆ. ಇದು ಸಾಕ್ಷ್ಯವನ್ನು ಹಾಳುಮಾಡುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಅಪಾಯವಿದೆ. ಸದ್ಯಕ್ಕೆ ಇತರೆ ಆರೋಪಿಗಳ ಜಾಮೀನು ಅರ್ಜಿಯನ್ನು ಪರಿಗಣಿಸದಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಬೇಕು” ಎಂದು ಪ್ರಶಾಂತ್ ಭೂಷಣ್‌ ಕೋರಿದ್ದರು.

“ಮಾರ್ಚ್ 11 ರಂದು ನಾವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೈಕೋರ್ಟ್‌ಗೆ ಮೆಮೊ ಸಲ್ಲಿಸಿ” ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠ ತಿಳಿಸಿದೆ.

ರೈತರ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ ರೈತರ ಕುಟುಂಬ ಸದಸ್ಯರು ಫೆಬ್ರವರಿ 10 ರಂದು ಹೈಕೋರ್ಟ್‌ನ ಜಾಮೀನು ಆದೇಶಕ್ಕೆ ತಡೆಯಾಜ್ಞೆ ಕೋರಿದ್ದಾರೆ. ಈ ತೀರ್ಪು ಕಾನೂನಿನ ದೃಷ್ಟಿಯಲ್ಲಿ ಸಮರ್ಥನೀಯವಲ್ಲ ಎಂದು ಮನವಿ ಮಾಡಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...