Homeಮುಖಪುಟಮಾಜಿ ಸಿಜೆಐ ಡಿ.ವೈ ಚಂದ್ರಚೂಡ್‌ ಅವರಿಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ...

ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್‌ ಅವರಿಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪತ್ರ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ನಿವಾಸದಲ್ಲಿ ಅವಧಿ ಮೀರಿ ವಾಸಿಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಆಡಳಿತ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಬಂಗಲೆಯನ್ನು ಖಾಲಿ ಮಾಡಲು ಸೂಚಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ.

ನವೆಂಬರ್ 2022 ರಿಂದ ನವೆಂಬರ್ 2024ರವರೆಗೆ 50ನೇ ಸಿಜೆಐ ಆಗಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಕೆಲಸದಿಂದ ನಿವೃತ್ತರಾಗಿ ಎಂಟು ತಿಂಗಳ ಕಳೆದರೂ ದೆಹಲಿ 5 ಕೃಷ್ಣ ಮೆನನ್ ಮಾರ್ಗದಲ್ಲಿರುವ ಟೈಪ್ VIII ಬಂಗಲೆಯನ್ನು ಖಾಲಿ ಮಾಡಿಲ್ಲ ಎನ್ನಲಾಗಿದೆ.

ಸರ್ಕಾರಿ ನಿಯಮಗಳ ಪ್ರಕಾರ, ಸೇವೆಯಲ್ಲಿರುವ ಸಿಜೆಐ ಟೈಪ್ VIII ಬಂಗಲೆಗೆ ಅರ್ಹರಾಗಿರುತ್ತಾರೆ. ನಿವೃತ್ತಿಯ ನಂತರ ಅವರು ಆರು ತಿಂಗಳವರೆಗೆ ಟೈಪ್ VII ಬಾಡಿಗೆ ಮುಕ್ತ ವಸತಿಯಲ್ಲಿ ಉಳಿಯಬಹುದು.

ಜುಲೈ 1ರಂದು ಬರೆದ ಪತ್ರದಲ್ಲಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಬಂಗಲೆಯನ್ನು ತಕ್ಷಣವೇ ಖಾಲಿ ಮಾಡಿಸಿ ನ್ಯಾಯಾಲಯದ ವಸತಿ ಪೂಲ್‌ಗೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಆಡಳಿತ ಒತ್ತಾಯಿಸಿದೆ.

“ನ್ಯಾಯಮೂರ್ತಿ ಡಾ. ಡಿ.ವೈ ಚಂದ್ರಚೂಡ್ ಅವರಿಂದ ಕೃಷ್ಣ ಮೆನನ್ ಮಾರ್ಗದ 5 ನೇ ಬಂಗಲೆಯನ್ನು ಯಾವುದೇ ವಿಳಂಬವಿಲ್ಲದೆ ಸ್ವಾಧೀನಪಡಿಸಿಕೊಳ್ಳಲು ನಾವು ವಿನಂತಿಸುತ್ತೇವೆ. ಏಕೆಂದರೆ, ಬಂಗಲೆಯಲ್ಲಿ ಉಳಿಯಲು ಅವರಿಗೆ ನೀಡಲಾದ ಅನುಮತಿಯು ಮೇ 31, 2025 ರಂದು ಮುಕ್ತಾಯಗೊಂಡಿದೆ” ಪತ್ರದಲ್ಲಿ ತಿಳಿಸಲಾಗಿದೆ.

ಗಮನಾರ್ಹವಾಗಿ, ಚಂದ್ರಚೂಡ್ ಅವರ ಬಳಿಕ ಬಂದ ಇಬ್ಬರು ಸಿಜೆಐಗಳಾದ ನ್ಯಾಯಮೂರ್ತಿ ಸಂಜೀವ್ ಖನ್ನಾ (ಈಗ ನಿವೃತ್ತರಾಗಿದ್ದಾರೆ) ಮತ್ತು ಪ್ರಸ್ತುತ ಸಿಜೆಐ ಬಿಆರ್ ಗವಾಯಿ, 5 ಕೃಷ್ಣ ಮೆನನ್ ಮಾರ್ಗದ ಬಂಗಲೆಗೆ ಸ್ಥಳಾಂತರಗೊಳ್ಳದಿರಲು ನಿರ್ಧರಿಸಿದ್ದರು. ಇಬ್ಬರೂ ಅವರಿಗೆ ಈ ಹಿಂದೆ ಹಂಚಿಕೆಯಾದ ಬಂಗಲೆಗಳಲ್ಲಿ ವಾಸಿಸುವುದನ್ನು ಮುಂದುವರೆಸಿದ್ದಾರೆ ಎಂದು ವರದಿಗಳು ಹೇಳಿವೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಬಂಗಲೆ ಬಿಟ್ಟು ಕೊಡಲು ವಿಳಂಬ ಆಗಿರುವುದಕ್ಕೆ ಕೆಲವು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...