Homeಮುಖಪುಟಮಾಜಿ ಸಿಜೆಐ ಡಿ.ವೈ ಚಂದ್ರಚೂಡ್‌ ಅವರಿಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ...

ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್‌ ಅವರಿಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪತ್ರ

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ನಿವಾಸದಲ್ಲಿ ಅವಧಿ ಮೀರಿ ವಾಸಿಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಆಡಳಿತ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಬಂಗಲೆಯನ್ನು ಖಾಲಿ ಮಾಡಲು ಸೂಚಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ.

ನವೆಂಬರ್ 2022 ರಿಂದ ನವೆಂಬರ್ 2024ರವರೆಗೆ 50ನೇ ಸಿಜೆಐ ಆಗಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಕೆಲಸದಿಂದ ನಿವೃತ್ತರಾಗಿ ಎಂಟು ತಿಂಗಳ ಕಳೆದರೂ ದೆಹಲಿ 5 ಕೃಷ್ಣ ಮೆನನ್ ಮಾರ್ಗದಲ್ಲಿರುವ ಟೈಪ್ VIII ಬಂಗಲೆಯನ್ನು ಖಾಲಿ ಮಾಡಿಲ್ಲ ಎನ್ನಲಾಗಿದೆ.

ಸರ್ಕಾರಿ ನಿಯಮಗಳ ಪ್ರಕಾರ, ಸೇವೆಯಲ್ಲಿರುವ ಸಿಜೆಐ ಟೈಪ್ VIII ಬಂಗಲೆಗೆ ಅರ್ಹರಾಗಿರುತ್ತಾರೆ. ನಿವೃತ್ತಿಯ ನಂತರ ಅವರು ಆರು ತಿಂಗಳವರೆಗೆ ಟೈಪ್ VII ಬಾಡಿಗೆ ಮುಕ್ತ ವಸತಿಯಲ್ಲಿ ಉಳಿಯಬಹುದು.

ಜುಲೈ 1ರಂದು ಬರೆದ ಪತ್ರದಲ್ಲಿ, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಬಂಗಲೆಯನ್ನು ತಕ್ಷಣವೇ ಖಾಲಿ ಮಾಡಿಸಿ ನ್ಯಾಯಾಲಯದ ವಸತಿ ಪೂಲ್‌ಗೆ ಹಿಂತಿರುಗಿಸುವಂತೆ ಸುಪ್ರೀಂ ಕೋರ್ಟ್ ಆಡಳಿತ ಒತ್ತಾಯಿಸಿದೆ.

“ನ್ಯಾಯಮೂರ್ತಿ ಡಾ. ಡಿ.ವೈ ಚಂದ್ರಚೂಡ್ ಅವರಿಂದ ಕೃಷ್ಣ ಮೆನನ್ ಮಾರ್ಗದ 5 ನೇ ಬಂಗಲೆಯನ್ನು ಯಾವುದೇ ವಿಳಂಬವಿಲ್ಲದೆ ಸ್ವಾಧೀನಪಡಿಸಿಕೊಳ್ಳಲು ನಾವು ವಿನಂತಿಸುತ್ತೇವೆ. ಏಕೆಂದರೆ, ಬಂಗಲೆಯಲ್ಲಿ ಉಳಿಯಲು ಅವರಿಗೆ ನೀಡಲಾದ ಅನುಮತಿಯು ಮೇ 31, 2025 ರಂದು ಮುಕ್ತಾಯಗೊಂಡಿದೆ” ಪತ್ರದಲ್ಲಿ ತಿಳಿಸಲಾಗಿದೆ.

ಗಮನಾರ್ಹವಾಗಿ, ಚಂದ್ರಚೂಡ್ ಅವರ ಬಳಿಕ ಬಂದ ಇಬ್ಬರು ಸಿಜೆಐಗಳಾದ ನ್ಯಾಯಮೂರ್ತಿ ಸಂಜೀವ್ ಖನ್ನಾ (ಈಗ ನಿವೃತ್ತರಾಗಿದ್ದಾರೆ) ಮತ್ತು ಪ್ರಸ್ತುತ ಸಿಜೆಐ ಬಿಆರ್ ಗವಾಯಿ, 5 ಕೃಷ್ಣ ಮೆನನ್ ಮಾರ್ಗದ ಬಂಗಲೆಗೆ ಸ್ಥಳಾಂತರಗೊಳ್ಳದಿರಲು ನಿರ್ಧರಿಸಿದ್ದರು. ಇಬ್ಬರೂ ಅವರಿಗೆ ಈ ಹಿಂದೆ ಹಂಚಿಕೆಯಾದ ಬಂಗಲೆಗಳಲ್ಲಿ ವಾಸಿಸುವುದನ್ನು ಮುಂದುವರೆಸಿದ್ದಾರೆ ಎಂದು ವರದಿಗಳು ಹೇಳಿವೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಬಂಗಲೆ ಬಿಟ್ಟು ಕೊಡಲು ವಿಳಂಬ ಆಗಿರುವುದಕ್ಕೆ ಕೆಲವು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ದೇಶದ ಅತಿ ದೊಡ್ಡ ವೈದ್ಯಕೀಯ ಕಾಲೇಜು ಹಗರಣ: ಕರ್ನಾಟಕದ ಇಬ್ಬರು ಸೇರಿ 35 ಮಂದಿ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...