Homeಕರ್ನಾಟಕ’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

ಶತಮಾನಗಳಿಂದ ಶೋಷಣೆ/ದಮನಕ್ಕೆ ಒಳಗಾದ ತಳ ಸಮುದಾಯಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು

- Advertisement -
- Advertisement -

ಶತಮಾನಗಳಿಂದ ಶೋಷಣೆ/ದಮನಕ್ಕೆ ಒಳಗಾದ ತಳ ಸಮುದಾಯಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ “ಎಸ್‌ಸಿಎಸ್‌ಪಿ/ಟಿಎಸ್‌ಪಿ” (ಪರಿಶಿಷ್ಟ ಜಾತಿ ಉಪಯೋಜನೆ/ ಪರಿಶಿಷ್ಟ ಪಂಗಡ ಉಪಯೋಜನೆ) ಯೋಜನೆಯನ್ನು ಜಾರಿಗೊಳಿಸಲಾಯಿತು. ಕರ‍್ನಾಟಕದಲ್ಲಿ ಅದನ್ನು ಪರಿಶ್ಕರಿಸಿ 2013ರಲ್ಲಿ “ಎಸ್‌ಸಿಎಸ್‌ಪಿ/ಟಿಎಸ್‌ಪಿ (ಯೋಜನೆ, ಹಂಚಿಕೆ, ಹಣಕಾಸು ಸಂಪನ್ಮೂಲದ ಬಳಕೆ) ಕಾಯಿದೆ” ಜಾರಿಗೊಳಿಸಲಾಯಿತು.

2011ರ ಜನಗಣತಿಯ ಆದಾರದಲ್ಲಿ “ಎಸ್‌ಸಿಎಸ್‌ಪಿ/ಟಿಎಸ್‌ಪಿ” ಯೋಜನೆಗೆ ಪ್ರತಿ ಇಲಾಖೆಯು ಶೇ.24.1 ಪ್ರಮಾಣದ ಆರ್ಥಿಕ ಅನುದಾನವನ್ನು ಮೀಸಲಿಡಬೇಕು. ಇದರ ಅನುಸಾರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವ್ಯಕ್ತಿಗೆ/ಕುಟುಂಬಕ್ಕೆ ಈ ಯೋಜನೆಯ ಅನುದಾನವು ನೇರವಾಗಿ ತಲುಪಬೇಕು. ಯೋಜನೆಗಳನ್ನು ರೂಪಿಸುವುದಕ್ಕೂ ಮೊದಲು ರಾಜ್ಯ ಮಟ್ಟದ ನೋಡಲ್ ಏಜೆನ್ಸಿ ಸಂಬಂದಪಟ್ಟ ಸಮುದಾಯಗಳೊಂದಿಗೆ ಸಮಾಲೋಚಿಸಬೇಕು. ಖರ್ಚಿನ ವಿವರಗಳು ಪಾರದರ್ಶಕವಾಗಿರಬೇಕು, ಇದರ ಸಮರ್ಪಕ ಜಾರಿಯ ಕುರಿತು ನಿಗಾ ವಹಿಸಲು ಒಂದು ಅಂತರ್ಜಾಲ ತಾಣವನ್ನು ಆರಂಬಿಸಬೇಕು, ಈ ಯೋಜನೆಯ ಜಾರಿಯಾಗಿರುವುದರ ವಿವರಗಳನ್ನು ಕಾಲಕಾಲಕ್ಕೆ ಪ್ರಕಟಿಸಬೇಕು. ಮತ್ತು ಮುಖ್ಯವಾಗಿ ಈ ಯೋಜನೆಗೆ ಮೀಸಲಿಟ್ಟ ಹಣವನ್ನು ಸಾಮಾನ್ಯ ಯೋಜನೆಗಳಿಗೆ ಬಳಸಿಕೊಳ್ಳಬಾರದು.

PC: Mahima A Jain

ಇದನ್ನೂ ಓದಿ: ‘ಮಹಾಡ್ – ಮೊದಲ ದಲಿತ ಬಂಡಾಯ’ ಪುಸ್ತಕದ ಆಯ್ದ ಭಾಗಗಳು

ಆದರೆ ಈ ಎಲ್ಲಾ ನಿಯಾಮವಳಿಗಳು ಕೇವಲ ಕಾಗದದ ಮೇಲೆ ಮಾತ್ರ ಉಳಿದುಕೊಂಡಿವೆ. ಮೊದಲಿಗೆ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿಗಳನ್ನು ಸೂಕ್ತವಾಗಿ ರಚಿಸಲ್ಪಟ್ಟಿರುವುದಿಲ್ಲ, ಮತ್ತು ರಚಿತಗೊಂಡ ಸಮಿತಿಗಳು ಕಾಲ ಕಾಲಕ್ಕೆ ಸಬೆಗಳನ್ನು ನಡೆಸುವುದಿಲ್ಲ. ಇನ್ನು ಇಲ್ಲಿನ ಬಹುತೇಕ ಅದಿಕಾರಿಗಳಿಗೆ ಈ ಯೋಜನೆ ಕುರಿತು ಯಾವುದೇ ತಿಳುವಳಿಕೆಯಿರುವುದಿಲ್ಲ ಮತ್ತು ಅವರಿಗೆ ತರಬೇತಿಯನ್ನು ಸಹ ಕೊಟ್ಟಿರುವುದಿಲ್ಲ.

ದಲಿತ ಸಂಘಟನೆಗಳು “ಎಸ್‌ಸಿಎಸ್‌ಪಿ/ಟಿಎಸ್‌ಪಿ ಹೆಸರಿನಲ್ಲಿ ಪ್ರತ್ಯೇಕವಾಗಿ ಎರಡು ಬ್ಯಾಂಕ್ ಖಾತೆ ತೆರೆಯಬೇಕು ಮತ್ತು ಈ ಖಾತೆಯನ್ನು ನೋಡಲ್ ಇಲಾಖೆಗಳು ನಿರ್ವಹಿಸಬೇಕು. ಈ ಯೋಜನೆಯ ನಿಗಾ ವಹಿಸಲು ಲೋಕಪಾಲರನ್ನು ನೇಮಿಸಬೇಕು” ಎಂದು ಆಗ್ರಹಪಡಿಸಿದ್ದರು. ಈ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ವಿಶ್ಲೇಷಿಸಿದಾಗ ಮೇಲಿನ ಎಲ್ಲಾ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಮತ್ತು ತಮಾಶೆಯೆಂದರೆ ಸಬಂದಪಟ್ಟ ಅದಿಕಾರಿಗಳಿಗೆ ಯಾವುದೇ ವಿಚಾರಣೆ ನಡಸಿಲ್ಲ

2020-21ರ ಹಣಕಾಸು ವರ್ಶವನ್ನು ಪರಿಶೀಲನೆ ಮಾಡೋಣ. ಈ ವರ್ಶಕ್ಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ 27,699.52 ಕೋಟಿ ಮೊತ್ತವನ್ನು ಹಂಚಿಕೆ ಮಾಡಲಾಯಿತು. ಆದರೆ ನಂತರ 1,084 ಕೋಟಿಯನ್ನು ಕಡಿತಗೊಳಿಸಲಾಯಿತು. ನಂತರ ಉಳಿದ ಅನುದಾನ 26,614.69 ಕೋಟಿ. ಇದಕ್ಕೆ ಯಾವುದೇ ಕಾರಣವನ್ನು ಕೊಟ್ಟಲ್ಲ.

ಇದನ್ನೂ ಓದಿ: ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಎಸ್‌ಸಿಎಸ್‌ಪಿ ಯೋಜನೆ:

ಹಂಚಿಕೆ : 19,432.22 ಕೋಟಿ.
ಕಡಿತಗೊಳಿಸಿದ ನಂತರದ ಮೊತ್ತ : 18,659.65 ಕೋಟಿ.
ವೆಚ್ಚ : 5,856.84 ಕೋಟಿ (ಶೇಕಡ. 31%)
ಬಳಕೆಯಾಗದೆ ಉಳಿದ ಮೊತ್ತ : 12,802.81 ಕೋಟಿ.

ಟಿಎಸ್‌ಪಿ ಯೋಜನೆ:

ಹಂಚಿಕೆ : 8,267.30 ಕೋಟಿ.
ಕಡಿತಗೊಳಿಸಿದ ನಂತರದ ಮೊತ್ತ : 7,955.69 ಕೋಟಿ.
ವೆಚ್ಚ : 2307.25 ಕೋಟಿ (ಶೇಕಡ. 32%)
ಬಳಕೆಯಾಗದೆ ಉಳಿದ ಮೊತ್ತ : 5648.44 ಕೋಟಿ.

ಒಟ್ಟಾಗಿ 2020-21ರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಗೆ ಕೇವಲ 8164 ಕೋಟಿ ವೆಚ್ಚವಾಗಿದ್ದರೆ, 18,451.25 ಕೋಟಿ ಬಳಕೆಯಾಗದೆ ಉಳಿದುಕೊಂಡಿದೆ

  • ಮೊದಲಿಗೆ ಅಗತ್ಯವಾದ ಹಣಕಾಸು ಮೊತ್ತವನ್ನು ಹಂಚಿಕೆ ಮಾಡಿಲ್ಲ.
  • ಎರಡನೆಯದಾಗಿ ಹಂಚಿಕೆಯಾದ ಮೊತ್ತವನ್ನು ಕಡಿತಗೊಳಿಸಲಾಗಿದೆ.
  • ಮೂರನೆಯದಾಗಿ ಕಡಿತಗೊಳಿಸದ ಮೊತ್ತದಲ್ಲಿ ಶೇಕಡಾ 31ರಶ್ಟನ್ನು ಮಾತ್ರ ವೆಚ್ಚ ಮಾಡಲಾಗಿದೆ ಮತ್ತು ಶೇಕಡಾ 69ರಶ್ಟನ್ನು ಬಳಸಿಕೊಂಡಿಲ್ಲ.
  • ನಾಲ್ಕನೆಯದಾಗಿ ವೆಚ್ಚ ಮಾಡಿದ ಮೊತ್ತವನ್ನು ಈ ಯೋಜನೆಗೆ ಬಳಸಿಕೊಂಡಿಲ್ಲ, ಇತರೆ ಸಾಮಾನ್ಯ ಕೆಲಸಗಳಿಗೆ ವೆಚ್ಚ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಇದು ದ್ರೋಹದ ಕೆಲಸ. ಇದು ಒಂದು ಮಹಾವಂಚನೆ. ಉದಾಹರಣೆಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಗೆ ಮೀಸಲಿಟ್ಟ ಹಣವನ್ನು ಮೆಟ್ರೋ ರೈಲು ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ವೆಚ್ಚ ಮಾಡಲಾಗಿದೆ. ಹೆದ್ದಾರಿಗಳ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಅಂದರೆ ಬ್ರಶ್ಟಾಚಾರಕ್ಕೆ ಭರಪೂರು ಅವಕಾಶವಿರುವ ‘ಕಾಮಗಾರಿ’ ಯೋಜನೆಗಳಿಗೆ ಈ ಆರ್ಥಿಕ ಅನುದಾನವನ್ನು ಬಳಸಿಕೊಳ್ಳಲಾಗಿದೆ. ಇದು ಶಿಕ್ಷಾರ್ಹ ಅಪರಾದವಾಗಿದೆ. ಆದರೆ ಇಲ್ಲಿ ಪ್ರಬುತ್ವವೇ ಈ ಬ್ರಶ್ಟಾಚಾರದಲ್ಲಿ ತೊಡಗಿಕೊಂಡಿರುವುದರಿಂದ ಇದರ ವಿರುದ್ದದ ಕೂಗು ಅರಣ್ಯರೋದನವಾಗಿದೆ.

ದಲಿತ ಬಹುಜನ ಸಂಘಟನೆಯು (ದಬಸ) ಈ ಹಿಂದೆ ರಾಜ್ಯದ ಅಬಿವೃದ್ದಿಗೂ ಮತ್ತು ಪ.ಜಾತಿ/ಪ.ಪಂಗಡದ ಅಬಿವೃದ್ದಿ ಸೂಚಕಗಳಿಗೂ ನಡುವಿನ ವ್ಯತ್ಯಾಸವನ್ನು ‘ಅಬಿವೃದ್ದಿಗಳ ಅಂತರ’ದ ಮೂಲಕ ವಿಶ್ಲೇಷಣೆ ಮಾಡಿದೆ.

‘ದಬಸ’ ಮುಂದಿಟ್ಟ ಮುಖ್ಯ ಪ್ರಶ್ನೆಗಳು:

  • ಬಡತನ ರೇಖೆಗಿಂತ ಮೇಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆಯ ಪ್ರಮಾಣವೇನು?
  • ಆರ್ಥಿಕವಾಗಿ ಸಬಲೀಕರಣಗೊಂಡವರೆಶ್ಟು?
  • ಇದಕ್ಕೂ ಮತ್ತು ಕರ‍್ನಾಟಕದ ಸೂಚ್ಯಕಂಗಳಿಗೂ ದಲಿತ ಸಮುದಾಯದ ಅಬಿವೃದ್ದಿ ಸೂಚ್ಯಂಕಗಳ ನಡುವಿನ ವ್ಯತ್ಯಾಸವೇನು?
  • ಕರ‍್ನಾಟಕ ರಾಜ್ಯದ/ ಜಿಲ್ಲೆಗಳ ಮುನ್ನೋಟ ಮತ್ತು ಅದಕ್ಕೆ ಪ್ರತಿಯಾಗಿ ಪ.ಜಾತಿ/ಪ.ಪಂಗಡದ ಮಾನವ ಅಬಿವೃದ್ದಿ ಸೂಚ್ಯಂಕದ ಕುರಿತು ದತ್ತಾಂಶವಿದೆಯೇ?
  • ಮಾನವ ಅಬಿವೃದ್ದಿ ಆದಾಯದ ಅಂತರದ ಕುರಿತು ದತ್ತಾಂಶ ಸಂಚಯವಿದೆಯೇ?
  • ಉದಾಹರಣೆಗೆ ಇತರ ಜಾತಿಗಳಿಗೆ ಹೋಲಿಸಿದರೆ ಪ.ಜಾತಿ/ಪ.ಪಂಗಡದ 100 ಮಕ್ಕಳ ಪೈಕೆ ಎಶ್ಟು ಮಕ್ಕಳು ಒಂದನೆ ತರಗತಿಗೆ ದಾಖಲಾಗಿದ್ದಾರೆ?

ಇದನ್ನೂ ಓದಿ: ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಆದರೆ ‘ದಬಸ’ ಪ್ರಕಾರ ‘ಅಬಿವೃದ್ದಿಯಲ್ಲಿನ ಅಂತರ’ದ ಕುರಿತು ಯಾವುದೇ ದಾಖಲೆಗಳಿಲ್ಲ, ದತ್ತಾಂಶ ಸಂಚಯಗಳಿಲ್ಲ. ಅಂದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಹಣಕಾಸು ಹಂಚಿಕೆ ಮಾಡುವಾಗ ಆ ಸಮುದಾಯಗಳ ಜನಸಂಖ್ಯೆಯ ಪ್ರಮಾಣವೆಶ್ಟು? ಅದರಲ್ಲಿ ಅಗತ್ಯವಿರುವ ಪ್ರಮಾಣವೆಶ್ಟು? ಮುಂತಾದ ಸಂಗತಿಗಳ ಕುರಿತು ಸರಕಾರಕ್ಕೆ ಯಾವುದೇ ಮಾಹಿತಿಯಿಲ್ಲ. ಸಂಶೋದನೆ ನೆರವು, ಪ.ಜಾತಿ/ಪ.ಪಂಗಡಗಳಿಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ಪ.ಜಾತಿ/ಪ.ಪಂಗಡ ಪಂಚಾಯತ್‌ಗೆ ಅನುದಾನ, ಪುಸ್ತಕ ಅನುದಾನ, ಕೌಶಲ್ಯ ಅಬಿವೃದ್ದಿ ಮುಂತಾದ ಹೊಸ ಬಗೆಯ ಕಾರ್ಯಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಆದ್ಯತೆಯ ಮೇರೆಗೆ ಕೆಲಸ ಮಾಡಬೇಕಿತ್ತು. ಆದರೆ ಪ್ರಬುತ್ವಕ್ಕೆ ಇದರ ಖಬರೂ ಸಹ ಇಲ್ಲ.

ಮುಂದೇನು?

ದಲಿತ ಸಂಘಟನೆಗಳು, ಎಡ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಒಗ್ಗಟ್ಟಾಗಿ ಈ ಕುರಿತು ತುರ್ತಾಗಿ ಸಮಾಲೋಚನೆ ಸಬೆ ನಡೆಸಬೇಕು ಮತ್ತು ಪ್ರಬುತ್ವದ ಈ ತಾರತಮ್ಯ ಮತ್ತು ವಂಚನೆಯ ವಿರುದ್ದ ಜನಾಂದೋಲನ ರೂಪಿಸಬೇಕು, ಇದನ್ನು ಹೊರತುಪಡಿಸಿ ಮತ್ಯಾವುದೇ ಮಾರ್ಗಗಳಿಲ್ಲ.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...