Homeಕರ್ನಾಟಕ’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

’ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ’ಯಲ್ಲಿನ ವಂಚನೆಗಳು!

ಶತಮಾನಗಳಿಂದ ಶೋಷಣೆ/ದಮನಕ್ಕೆ ಒಳಗಾದ ತಳ ಸಮುದಾಯಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು

- Advertisement -
- Advertisement -

ಶತಮಾನಗಳಿಂದ ಶೋಷಣೆ/ದಮನಕ್ಕೆ ಒಳಗಾದ ತಳ ಸಮುದಾಯಗಳಿಗೆ ಸಮಾಜೋ-ಆರ್ಥಿಕ ನ್ಯಾಯ ಒದಗಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ “ಎಸ್‌ಸಿಎಸ್‌ಪಿ/ಟಿಎಸ್‌ಪಿ” (ಪರಿಶಿಷ್ಟ ಜಾತಿ ಉಪಯೋಜನೆ/ ಪರಿಶಿಷ್ಟ ಪಂಗಡ ಉಪಯೋಜನೆ) ಯೋಜನೆಯನ್ನು ಜಾರಿಗೊಳಿಸಲಾಯಿತು. ಕರ‍್ನಾಟಕದಲ್ಲಿ ಅದನ್ನು ಪರಿಶ್ಕರಿಸಿ 2013ರಲ್ಲಿ “ಎಸ್‌ಸಿಎಸ್‌ಪಿ/ಟಿಎಸ್‌ಪಿ (ಯೋಜನೆ, ಹಂಚಿಕೆ, ಹಣಕಾಸು ಸಂಪನ್ಮೂಲದ ಬಳಕೆ) ಕಾಯಿದೆ” ಜಾರಿಗೊಳಿಸಲಾಯಿತು.

2011ರ ಜನಗಣತಿಯ ಆದಾರದಲ್ಲಿ “ಎಸ್‌ಸಿಎಸ್‌ಪಿ/ಟಿಎಸ್‌ಪಿ” ಯೋಜನೆಗೆ ಪ್ರತಿ ಇಲಾಖೆಯು ಶೇ.24.1 ಪ್ರಮಾಣದ ಆರ್ಥಿಕ ಅನುದಾನವನ್ನು ಮೀಸಲಿಡಬೇಕು. ಇದರ ಅನುಸಾರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವ್ಯಕ್ತಿಗೆ/ಕುಟುಂಬಕ್ಕೆ ಈ ಯೋಜನೆಯ ಅನುದಾನವು ನೇರವಾಗಿ ತಲುಪಬೇಕು. ಯೋಜನೆಗಳನ್ನು ರೂಪಿಸುವುದಕ್ಕೂ ಮೊದಲು ರಾಜ್ಯ ಮಟ್ಟದ ನೋಡಲ್ ಏಜೆನ್ಸಿ ಸಂಬಂದಪಟ್ಟ ಸಮುದಾಯಗಳೊಂದಿಗೆ ಸಮಾಲೋಚಿಸಬೇಕು. ಖರ್ಚಿನ ವಿವರಗಳು ಪಾರದರ್ಶಕವಾಗಿರಬೇಕು, ಇದರ ಸಮರ್ಪಕ ಜಾರಿಯ ಕುರಿತು ನಿಗಾ ವಹಿಸಲು ಒಂದು ಅಂತರ್ಜಾಲ ತಾಣವನ್ನು ಆರಂಬಿಸಬೇಕು, ಈ ಯೋಜನೆಯ ಜಾರಿಯಾಗಿರುವುದರ ವಿವರಗಳನ್ನು ಕಾಲಕಾಲಕ್ಕೆ ಪ್ರಕಟಿಸಬೇಕು. ಮತ್ತು ಮುಖ್ಯವಾಗಿ ಈ ಯೋಜನೆಗೆ ಮೀಸಲಿಟ್ಟ ಹಣವನ್ನು ಸಾಮಾನ್ಯ ಯೋಜನೆಗಳಿಗೆ ಬಳಸಿಕೊಳ್ಳಬಾರದು.

PC: Mahima A Jain

ಇದನ್ನೂ ಓದಿ: ‘ಮಹಾಡ್ – ಮೊದಲ ದಲಿತ ಬಂಡಾಯ’ ಪುಸ್ತಕದ ಆಯ್ದ ಭಾಗಗಳು

ಆದರೆ ಈ ಎಲ್ಲಾ ನಿಯಾಮವಳಿಗಳು ಕೇವಲ ಕಾಗದದ ಮೇಲೆ ಮಾತ್ರ ಉಳಿದುಕೊಂಡಿವೆ. ಮೊದಲಿಗೆ ಜಿಲ್ಲಾ ಮಟ್ಟದ ಪರಿಶೀಲನ ಸಮಿತಿಗಳನ್ನು ಸೂಕ್ತವಾಗಿ ರಚಿಸಲ್ಪಟ್ಟಿರುವುದಿಲ್ಲ, ಮತ್ತು ರಚಿತಗೊಂಡ ಸಮಿತಿಗಳು ಕಾಲ ಕಾಲಕ್ಕೆ ಸಬೆಗಳನ್ನು ನಡೆಸುವುದಿಲ್ಲ. ಇನ್ನು ಇಲ್ಲಿನ ಬಹುತೇಕ ಅದಿಕಾರಿಗಳಿಗೆ ಈ ಯೋಜನೆ ಕುರಿತು ಯಾವುದೇ ತಿಳುವಳಿಕೆಯಿರುವುದಿಲ್ಲ ಮತ್ತು ಅವರಿಗೆ ತರಬೇತಿಯನ್ನು ಸಹ ಕೊಟ್ಟಿರುವುದಿಲ್ಲ.

ದಲಿತ ಸಂಘಟನೆಗಳು “ಎಸ್‌ಸಿಎಸ್‌ಪಿ/ಟಿಎಸ್‌ಪಿ ಹೆಸರಿನಲ್ಲಿ ಪ್ರತ್ಯೇಕವಾಗಿ ಎರಡು ಬ್ಯಾಂಕ್ ಖಾತೆ ತೆರೆಯಬೇಕು ಮತ್ತು ಈ ಖಾತೆಯನ್ನು ನೋಡಲ್ ಇಲಾಖೆಗಳು ನಿರ್ವಹಿಸಬೇಕು. ಈ ಯೋಜನೆಯ ನಿಗಾ ವಹಿಸಲು ಲೋಕಪಾಲರನ್ನು ನೇಮಿಸಬೇಕು” ಎಂದು ಆಗ್ರಹಪಡಿಸಿದ್ದರು. ಈ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ವಿಶ್ಲೇಷಿಸಿದಾಗ ಮೇಲಿನ ಎಲ್ಲಾ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಮತ್ತು ತಮಾಶೆಯೆಂದರೆ ಸಬಂದಪಟ್ಟ ಅದಿಕಾರಿಗಳಿಗೆ ಯಾವುದೇ ವಿಚಾರಣೆ ನಡಸಿಲ್ಲ

2020-21ರ ಹಣಕಾಸು ವರ್ಶವನ್ನು ಪರಿಶೀಲನೆ ಮಾಡೋಣ. ಈ ವರ್ಶಕ್ಕೆ ಎಸ್‌ಸಿಎಸ್‌ಪಿ/ಟಿಎಸ್‌ಪಿಗೆ 27,699.52 ಕೋಟಿ ಮೊತ್ತವನ್ನು ಹಂಚಿಕೆ ಮಾಡಲಾಯಿತು. ಆದರೆ ನಂತರ 1,084 ಕೋಟಿಯನ್ನು ಕಡಿತಗೊಳಿಸಲಾಯಿತು. ನಂತರ ಉಳಿದ ಅನುದಾನ 26,614.69 ಕೋಟಿ. ಇದಕ್ಕೆ ಯಾವುದೇ ಕಾರಣವನ್ನು ಕೊಟ್ಟಲ್ಲ.

ಇದನ್ನೂ ಓದಿ: ದೇಶದಲ್ಲಿ ಹಚ್ಚಿರುವ ಕಿಚ್ಚು ಮುಸಲ್ಮಾನರನ್ನು ಮುಕ್ಕತೊಡಗಿದೆ. ಮುಂದಿನ ಸರದಿ ದಲಿತರದು, ಕ್ರೈಸ್ತರದು ಇದ್ದೀತು

ಎಸ್‌ಸಿಎಸ್‌ಪಿ ಯೋಜನೆ:

ಹಂಚಿಕೆ : 19,432.22 ಕೋಟಿ.
ಕಡಿತಗೊಳಿಸಿದ ನಂತರದ ಮೊತ್ತ : 18,659.65 ಕೋಟಿ.
ವೆಚ್ಚ : 5,856.84 ಕೋಟಿ (ಶೇಕಡ. 31%)
ಬಳಕೆಯಾಗದೆ ಉಳಿದ ಮೊತ್ತ : 12,802.81 ಕೋಟಿ.

ಟಿಎಸ್‌ಪಿ ಯೋಜನೆ:

ಹಂಚಿಕೆ : 8,267.30 ಕೋಟಿ.
ಕಡಿತಗೊಳಿಸಿದ ನಂತರದ ಮೊತ್ತ : 7,955.69 ಕೋಟಿ.
ವೆಚ್ಚ : 2307.25 ಕೋಟಿ (ಶೇಕಡ. 32%)
ಬಳಕೆಯಾಗದೆ ಉಳಿದ ಮೊತ್ತ : 5648.44 ಕೋಟಿ.

ಒಟ್ಟಾಗಿ 2020-21ರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಗೆ ಕೇವಲ 8164 ಕೋಟಿ ವೆಚ್ಚವಾಗಿದ್ದರೆ, 18,451.25 ಕೋಟಿ ಬಳಕೆಯಾಗದೆ ಉಳಿದುಕೊಂಡಿದೆ

  • ಮೊದಲಿಗೆ ಅಗತ್ಯವಾದ ಹಣಕಾಸು ಮೊತ್ತವನ್ನು ಹಂಚಿಕೆ ಮಾಡಿಲ್ಲ.
  • ಎರಡನೆಯದಾಗಿ ಹಂಚಿಕೆಯಾದ ಮೊತ್ತವನ್ನು ಕಡಿತಗೊಳಿಸಲಾಗಿದೆ.
  • ಮೂರನೆಯದಾಗಿ ಕಡಿತಗೊಳಿಸದ ಮೊತ್ತದಲ್ಲಿ ಶೇಕಡಾ 31ರಶ್ಟನ್ನು ಮಾತ್ರ ವೆಚ್ಚ ಮಾಡಲಾಗಿದೆ ಮತ್ತು ಶೇಕಡಾ 69ರಶ್ಟನ್ನು ಬಳಸಿಕೊಂಡಿಲ್ಲ.
  • ನಾಲ್ಕನೆಯದಾಗಿ ವೆಚ್ಚ ಮಾಡಿದ ಮೊತ್ತವನ್ನು ಈ ಯೋಜನೆಗೆ ಬಳಸಿಕೊಂಡಿಲ್ಲ, ಇತರೆ ಸಾಮಾನ್ಯ ಕೆಲಸಗಳಿಗೆ ವೆಚ್ಚ ಮಾಡಿದ್ದಾರೆ.

ಇದನ್ನೂ ಓದಿ: ದಲಿತ ಸಮರ್ಥನೆಯ ಆದ್ಯಪ್ರವರ್ತಕನ ಪಾತ್ರವಹಿಸಿದ್ದ ಮೂಕನಾಯಕ

ಇದು ದ್ರೋಹದ ಕೆಲಸ. ಇದು ಒಂದು ಮಹಾವಂಚನೆ. ಉದಾಹರಣೆಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಗೆ ಮೀಸಲಿಟ್ಟ ಹಣವನ್ನು ಮೆಟ್ರೋ ರೈಲು ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ವೆಚ್ಚ ಮಾಡಲಾಗಿದೆ. ಹೆದ್ದಾರಿಗಳ ಕಾಮಗಾರಿಗೆ ಬಳಸಿಕೊಳ್ಳಲಾಗಿದೆ. ಅಂದರೆ ಬ್ರಶ್ಟಾಚಾರಕ್ಕೆ ಭರಪೂರು ಅವಕಾಶವಿರುವ ‘ಕಾಮಗಾರಿ’ ಯೋಜನೆಗಳಿಗೆ ಈ ಆರ್ಥಿಕ ಅನುದಾನವನ್ನು ಬಳಸಿಕೊಳ್ಳಲಾಗಿದೆ. ಇದು ಶಿಕ್ಷಾರ್ಹ ಅಪರಾದವಾಗಿದೆ. ಆದರೆ ಇಲ್ಲಿ ಪ್ರಬುತ್ವವೇ ಈ ಬ್ರಶ್ಟಾಚಾರದಲ್ಲಿ ತೊಡಗಿಕೊಂಡಿರುವುದರಿಂದ ಇದರ ವಿರುದ್ದದ ಕೂಗು ಅರಣ್ಯರೋದನವಾಗಿದೆ.

ದಲಿತ ಬಹುಜನ ಸಂಘಟನೆಯು (ದಬಸ) ಈ ಹಿಂದೆ ರಾಜ್ಯದ ಅಬಿವೃದ್ದಿಗೂ ಮತ್ತು ಪ.ಜಾತಿ/ಪ.ಪಂಗಡದ ಅಬಿವೃದ್ದಿ ಸೂಚಕಗಳಿಗೂ ನಡುವಿನ ವ್ಯತ್ಯಾಸವನ್ನು ‘ಅಬಿವೃದ್ದಿಗಳ ಅಂತರ’ದ ಮೂಲಕ ವಿಶ್ಲೇಷಣೆ ಮಾಡಿದೆ.

‘ದಬಸ’ ಮುಂದಿಟ್ಟ ಮುಖ್ಯ ಪ್ರಶ್ನೆಗಳು:

  • ಬಡತನ ರೇಖೆಗಿಂತ ಮೇಲಿರುವ ಪ.ಜಾತಿ/ಪ.ಪಂಗಡದ ಜನಸಂಖ್ಯೆಯ ಪ್ರಮಾಣವೇನು?
  • ಆರ್ಥಿಕವಾಗಿ ಸಬಲೀಕರಣಗೊಂಡವರೆಶ್ಟು?
  • ಇದಕ್ಕೂ ಮತ್ತು ಕರ‍್ನಾಟಕದ ಸೂಚ್ಯಕಂಗಳಿಗೂ ದಲಿತ ಸಮುದಾಯದ ಅಬಿವೃದ್ದಿ ಸೂಚ್ಯಂಕಗಳ ನಡುವಿನ ವ್ಯತ್ಯಾಸವೇನು?
  • ಕರ‍್ನಾಟಕ ರಾಜ್ಯದ/ ಜಿಲ್ಲೆಗಳ ಮುನ್ನೋಟ ಮತ್ತು ಅದಕ್ಕೆ ಪ್ರತಿಯಾಗಿ ಪ.ಜಾತಿ/ಪ.ಪಂಗಡದ ಮಾನವ ಅಬಿವೃದ್ದಿ ಸೂಚ್ಯಂಕದ ಕುರಿತು ದತ್ತಾಂಶವಿದೆಯೇ?
  • ಮಾನವ ಅಬಿವೃದ್ದಿ ಆದಾಯದ ಅಂತರದ ಕುರಿತು ದತ್ತಾಂಶ ಸಂಚಯವಿದೆಯೇ?
  • ಉದಾಹರಣೆಗೆ ಇತರ ಜಾತಿಗಳಿಗೆ ಹೋಲಿಸಿದರೆ ಪ.ಜಾತಿ/ಪ.ಪಂಗಡದ 100 ಮಕ್ಕಳ ಪೈಕೆ ಎಶ್ಟು ಮಕ್ಕಳು ಒಂದನೆ ತರಗತಿಗೆ ದಾಖಲಾಗಿದ್ದಾರೆ?

ಇದನ್ನೂ ಓದಿ: ಮೊದಲ ದಲಿತ ರಾಷ್ಟ್ರಪತಿ ಕೆ.ಆರ್ ನಾರಾಯಣನ್ ಸ್ಮರಣೆ: ಡಾ.ಬಿ.ಪಿ.ಮಹೇಶ ಚಂದ್ರ ಗುರು

ಆದರೆ ‘ದಬಸ’ ಪ್ರಕಾರ ‘ಅಬಿವೃದ್ದಿಯಲ್ಲಿನ ಅಂತರ’ದ ಕುರಿತು ಯಾವುದೇ ದಾಖಲೆಗಳಿಲ್ಲ, ದತ್ತಾಂಶ ಸಂಚಯಗಳಿಲ್ಲ. ಅಂದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಹಣಕಾಸು ಹಂಚಿಕೆ ಮಾಡುವಾಗ ಆ ಸಮುದಾಯಗಳ ಜನಸಂಖ್ಯೆಯ ಪ್ರಮಾಣವೆಶ್ಟು? ಅದರಲ್ಲಿ ಅಗತ್ಯವಿರುವ ಪ್ರಮಾಣವೆಶ್ಟು? ಮುಂತಾದ ಸಂಗತಿಗಳ ಕುರಿತು ಸರಕಾರಕ್ಕೆ ಯಾವುದೇ ಮಾಹಿತಿಯಿಲ್ಲ. ಸಂಶೋದನೆ ನೆರವು, ಪ.ಜಾತಿ/ಪ.ಪಂಗಡಗಳಿಗೆ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ಪ.ಜಾತಿ/ಪ.ಪಂಗಡ ಪಂಚಾಯತ್‌ಗೆ ಅನುದಾನ, ಪುಸ್ತಕ ಅನುದಾನ, ಕೌಶಲ್ಯ ಅಬಿವೃದ್ದಿ ಮುಂತಾದ ಹೊಸ ಬಗೆಯ ಕಾರ್ಯಯೋಜನೆಗಳಿಗೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಆದ್ಯತೆಯ ಮೇರೆಗೆ ಕೆಲಸ ಮಾಡಬೇಕಿತ್ತು. ಆದರೆ ಪ್ರಬುತ್ವಕ್ಕೆ ಇದರ ಖಬರೂ ಸಹ ಇಲ್ಲ.

ಮುಂದೇನು?

ದಲಿತ ಸಂಘಟನೆಗಳು, ಎಡ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಒಗ್ಗಟ್ಟಾಗಿ ಈ ಕುರಿತು ತುರ್ತಾಗಿ ಸಮಾಲೋಚನೆ ಸಬೆ ನಡೆಸಬೇಕು ಮತ್ತು ಪ್ರಬುತ್ವದ ಈ ತಾರತಮ್ಯ ಮತ್ತು ವಂಚನೆಯ ವಿರುದ್ದ ಜನಾಂದೋಲನ ರೂಪಿಸಬೇಕು, ಇದನ್ನು ಹೊರತುಪಡಿಸಿ ಮತ್ಯಾವುದೇ ಮಾರ್ಗಗಳಿಲ್ಲ.

ಇದನ್ನೂ ಓದಿ: ಕೇರಳ: ದಲಿತ ವ್ಯಕ್ತಿಯನ್ನು ಅರ್ಚಕರಾಗಿ ನೇಮಿಸುತ್ತಿರುವ ದೇವಸ್ವಂ ಬೋರ್ಡ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...