Homeಮುಖಪುಟಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

- Advertisement -
- Advertisement -

ಕಳೆದ ವರ್ಷ ಕೋವಿಡ್‍ನ ಆರಂಭದ ಬಿಕ್ಕಟ್ಟಿನ ಸಮಯ. ಆಗ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ ಕಾಂಗ್ರೆಸ್‍ ನಾಯಕ ಮಾಧವರಾವ ಸಿಂಧಿಯಾ ಅವರ ಪುತ್ರ ಜ್ಯೋತಿರಾಧಿತ್ಯ ಸಿಂಧಿಯಾ 22 ಕಾಂಗ್ರೆಸ್‍ ಶಾಸಕರೊಂದಿಗೆ ಸೇರಿ ಕಾಂಗ್ರೆಸ್‍ನ ಕಮಲನಾಥ್‍ ನೇತೃತ್ವದ ಸರ್ಕಾರವನ್ನು ಉರುಳಿಸಿದ್ದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಾದ ಮೇಲೆಯಷ್ಟೇ ಕೇಂದ್ರ ಸರ್ಕಾರ ಲಾಕ್‍ಡೌನ್‍ ಹೇರಿತು ಎಂಬ ಆರೋಪವಿದೆ.

ಈಗ ಕೋವಿಡ್‍ ಎರಡನೆ ಅಲೆ ಸಂದರ್ಭದಲ್ಲಿ ಇನ್ನೊಬ್ಬ ಯುವನಾಯಕ ಜಿತಿನ್‍ ಪ್ರಸಾದ್‍ ಕಾಂಗ್ರೆಸ್‍ ತೊರೆದು ಬಿಜೆಪಿ ಸೇರಿದ್ದಾರೆ. ಇದು ವರ್ಷದೊಳಗೆ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಗುರಿಯಾಗಿ ಇಟ್ಟುಕೊಂಡು ನಡೆದ ವಿದ್ಯಮಾನ.

ಈ ನಡುವೆ ರಾಜಸ್ತಾನದಲ್ಲಿ ಕಾಂಗ್ರೆಸ್‍ ಯುವ ನಾಯಕ ಸಚಿನ್‍ ಪೈಲಟ್‍ ಕೂಡ ಬಿಜೆಪಿಗೆ ಹೊರಟು ವಾಪಸ್‍ ಬಂದರು.

ಮೇಲಿನ ವಿದ್ಯಮಾನಗಳು ಏನನ್ನು ಸೂಚಿಸುತ್ತವೆ? ರಾಹುಲ್‍ ಗಾಂಧಿಯವರ ಇಬ್ಬರು ಆಪ್ತ ಯುವನಾಯಕರನ್ನು ಬಿಜೆಪಿ ಬೇಟೆಯಾಡಿದೆ. ಸಾಂಕ್ರಾಮಿಕವೋ ಇನ್ನೊಂದೋ, ಬಿಜೆಪಿಗೆ ರಾಜಕೀಯ ಅಧಿಕಾರ ಮುಖ್ಯ ಎಂಬುದನ್ನೂ, ಕಾಂಗ್ರೆಸ್‍ ಒಳಗಡೆ ಆಂತರಿಕ ಸಮಸ್ಯೆ ಇದೆ ಎಂಬುದನ್ನೂ ಈ ವಿದ್ಯಮಾನಗಳು ಸೂಚಿಸುತ್ತಿವೆ ಅಲ್ಲವೇ?

ವರ್ಷದ ಹಿಂದೆ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿದ್ದ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇಂದು ಕಾಂಗ್ರೆಸ್ ಯುವ ನಾಯಕ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡ  ಕೂಡಲೇ, ಅವರಿಗೆ ವಿಶೇಷ ಸ್ವಾಗತ ನೀಡಿದ್ದಾರೆ.

“ಅವರು ನನ್ನ ಕಿರಿಯ ಸಹೋದರನಂತೆ ಇದ್ದಾರೆ. ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ. ಅವರನ್ನು ಅಭಿನಂದಿಸುತ್ತೇನೆ” ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ಸಿನ ಪ್ರಮುಖ ಬ್ರಾಹ್ಮಣ ಮುಖವಾದ ಜಿತಿನ್ ಪ್ರಸಾದ,  ‘ಇಂದು ದೇಶದ ಏಕೈಕ ರಾಷ್ಟ್ರೀಯ ಪಕ್ಷ’ ಎಂದು ಬಿಜೆಪಿಯನ್ನು ಹೊಗಳುವ ಮೂಲಕ ಆ ಪಕ್ಷಕ್ಕೆ ಸೇರಿಕೊಂಡರು. “ನಿಮ್ಮ ಜನರನ್ನು ನೋಡಿಕೊಳ್ಳಲು ನೀವು ಅಸಮರ್ಥರಾಗಿದ್ದರೆ ಅದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಜಿತಿನ್‍ ಹೇಳಿದರು.

ಒಂದು ವರ್ಷ‍ಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‍ಗೆ  ಈ ವಿದ್ಯಮಾನ ತೊಂದರೆ ಮಾಡಬಹುದು. ಆದರೆ ಅದಕ್ಕಿಂತ ಹೆಚ್ಚಾಗಿ, ಯೋಗಿ ಆದಿತ್ಯನಾಥ್ ಸರ್ಕಾರವು ಟೀಕೆ, ಆಕ್ರೋಶಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಹೊಸ ನರೇಟಿವ್ ಕಟ್ಟಲು ಇದು ಸಹಾಯ ಮಾಡುತ್ತದೆ.

ಬಿಜೆಪಿಯೊಂದಿಗೆ ನೇರ ಮುಖಾಮುಖಿಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ಈ ಉನ್ನತ ಮಟ್ಟದ ಪಕ್ಷಾಂತರಗಳು ಕಾಂಗ್ರೆಸ್‍ಗೆ ಬಿಕ್ಕಟ್ಟನ್ನು ಸೂಚಿಸುತ್ತವೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ 2020ರ ಮಾರ್ಚ್‍ನಲ್ಲಿ ಕಾಂಗ್ರೆಸ್ ತೊರೆದು 22 ಶಾಸಕರೊಂದಿಗೆ ಬಿಜೆಪಿಗೆ ಸೇರಿಕೊಂಡರು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ ಪಕ್ಷದ ಸರ್ಕಾರವನ್ನು ಉರುಳಿಸಿದರು.

ಸಿಂಧಿಯಾ ಅಂದಿನ ತಮ್ಮ ಕಾಂಗ್ರೆಸ್‍ ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನಿರಂತರ ಆಂತರಿಕ ಕಿತ್ತಾಟವನ್ನು ಎದುರಿಸಬೇಕಾಗಿತ್ತು.

19 ವರ್ಷ ಕಾಂಗ್ರೆಸ್‍ನಲ್ಲಿದ್ದ ಸಿಂಧಿಯಾ ಪಕ್ಷವನ್ನು ತೊರೆಯುವ ಮೊದಲು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ತಿಂಗಳುಗಟ್ಟಲೆ ಕಾಯ್ದು ವಿಫಲರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದವು.

ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್‍ ಮತ್ತು ಕಾಂಗ್ರೆಸ್‍ನ ಮತ್ತೊಬ್ಬ ಬಂಡಾಯಗಾರ ಸಚಿನ್ ಪೈಲಟ್- ಈ ಮೂವರೂ ರಾಹುಲ್ ಗಾಂಧಿಯವರ ವಿಶ್ವಾಸಾರ್ಹ ವಲಯದ ಭಾಗವಾಗಿದ್ದರು.

ಆದರೆ 2014ರಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ನಂತರ, ಕಾಂಗ್ರೆಸ್‍ ಪಕ್ಷವು ಹೆಚ್ಚಿನ ರಾಜ್ಯ ಚುನಾವಣೆಗಳಲ್ಲಿ ಸೋಲು ಕಂಡಿತು. ಇದರಿಂದ ರಾಹುಲ್ ಗಾಂಧಿಯವರ ನಾಯಕತ್ವದ  ಬಗ್ಗೆ  ಎದ್ದ ಪ್ರಶ್ನೆಗಳ ಮಧ್ಯೆ, ಅವರ ಆಪ್ತವಲಯದಲ್ಲಿದ್ದ ಯುವ ನಾಯಕರು ತಾವು ಸೈಡ್‍ಲೈನ್‍ಗೆ ತಳ್ಳಲ್ಪಟ್ಟೆವು ಎಂದು ಭಾವಿಸಿದರು.

ಇತ್ತೀಚೆಗೆ ರಾಹುಲ್‍ ಗಾಂಧಿಯವರು, “ಬಿಜೆಪಿಯಲ್ಲಿ ಕೊನೆ ಬೆಂಚ್‍ನವರಾಗುತ್ತಾರೆ’ ಎಂದು ಸಿಂಧಿಯಾ ಅವರನ್ನು ಕೆಣಕಿದಾಗ, “ನಾನು ಕಾಂಗ್ರೆಸ್‍ನಲ್ಲಿದ್ದಾಗ ರಾಹುಲ್ ಗಾಂಧಿಯವರು ಈಗಿರುವ ರೀತಿಯಲ್ಲಿಯೇ ಕಾಳಜಿ ವಹಿಸಿದ್ದರೆ ಪರಿಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು’ ಎಂದು ಸಿಂಧಿಯಾ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...