Homeಮುಖಪುಟಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

ಕೊರೊನಾ ಮೊದಲ ಅಲೆಯಲ್ಲಿ ಸಿಂಧಿಯಾ, ಎರಡನೆ ಅಲೆಯಲ್ಲಿ ಜಿತಿನ್‍: ರಾಹುಲ್‍ ತೊರೆದ ಆಪ್ತರು!

- Advertisement -
- Advertisement -

ಕಳೆದ ವರ್ಷ ಕೋವಿಡ್‍ನ ಆರಂಭದ ಬಿಕ್ಕಟ್ಟಿನ ಸಮಯ. ಆಗ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿತ್ತು. ವಿಮಾನ ಅಪಘಾತದಲ್ಲಿ ದುರ್ಮರಣ ಹೊಂದಿದ ಕಾಂಗ್ರೆಸ್‍ ನಾಯಕ ಮಾಧವರಾವ ಸಿಂಧಿಯಾ ಅವರ ಪುತ್ರ ಜ್ಯೋತಿರಾಧಿತ್ಯ ಸಿಂಧಿಯಾ 22 ಕಾಂಗ್ರೆಸ್‍ ಶಾಸಕರೊಂದಿಗೆ ಸೇರಿ ಕಾಂಗ್ರೆಸ್‍ನ ಕಮಲನಾಥ್‍ ನೇತೃತ್ವದ ಸರ್ಕಾರವನ್ನು ಉರುಳಿಸಿದ್ದರು. ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಬಂದಾದ ಮೇಲೆಯಷ್ಟೇ ಕೇಂದ್ರ ಸರ್ಕಾರ ಲಾಕ್‍ಡೌನ್‍ ಹೇರಿತು ಎಂಬ ಆರೋಪವಿದೆ.

ಈಗ ಕೋವಿಡ್‍ ಎರಡನೆ ಅಲೆ ಸಂದರ್ಭದಲ್ಲಿ ಇನ್ನೊಬ್ಬ ಯುವನಾಯಕ ಜಿತಿನ್‍ ಪ್ರಸಾದ್‍ ಕಾಂಗ್ರೆಸ್‍ ತೊರೆದು ಬಿಜೆಪಿ ಸೇರಿದ್ದಾರೆ. ಇದು ವರ್ಷದೊಳಗೆ ನಡೆಯಲಿರುವ ಉತ್ತರಪ್ರದೇಶ ಚುನಾವಣೆ ಗುರಿಯಾಗಿ ಇಟ್ಟುಕೊಂಡು ನಡೆದ ವಿದ್ಯಮಾನ.

ಈ ನಡುವೆ ರಾಜಸ್ತಾನದಲ್ಲಿ ಕಾಂಗ್ರೆಸ್‍ ಯುವ ನಾಯಕ ಸಚಿನ್‍ ಪೈಲಟ್‍ ಕೂಡ ಬಿಜೆಪಿಗೆ ಹೊರಟು ವಾಪಸ್‍ ಬಂದರು.

ಮೇಲಿನ ವಿದ್ಯಮಾನಗಳು ಏನನ್ನು ಸೂಚಿಸುತ್ತವೆ? ರಾಹುಲ್‍ ಗಾಂಧಿಯವರ ಇಬ್ಬರು ಆಪ್ತ ಯುವನಾಯಕರನ್ನು ಬಿಜೆಪಿ ಬೇಟೆಯಾಡಿದೆ. ಸಾಂಕ್ರಾಮಿಕವೋ ಇನ್ನೊಂದೋ, ಬಿಜೆಪಿಗೆ ರಾಜಕೀಯ ಅಧಿಕಾರ ಮುಖ್ಯ ಎಂಬುದನ್ನೂ, ಕಾಂಗ್ರೆಸ್‍ ಒಳಗಡೆ ಆಂತರಿಕ ಸಮಸ್ಯೆ ಇದೆ ಎಂಬುದನ್ನೂ ಈ ವಿದ್ಯಮಾನಗಳು ಸೂಚಿಸುತ್ತಿವೆ ಅಲ್ಲವೇ?

ವರ್ಷದ ಹಿಂದೆ ಕಾಂಗ್ರೆಸ್‍ನಿಂದ ಬಿಜೆಪಿಗೆ ಸೇರಿದ್ದ ಯುವನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ಇಂದು ಕಾಂಗ್ರೆಸ್ ಯುವ ನಾಯಕ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಂಡ  ಕೂಡಲೇ, ಅವರಿಗೆ ವಿಶೇಷ ಸ್ವಾಗತ ನೀಡಿದ್ದಾರೆ.

“ಅವರು ನನ್ನ ಕಿರಿಯ ಸಹೋದರನಂತೆ ಇದ್ದಾರೆ. ನಾನು ಅವರನ್ನು ಬಿಜೆಪಿಗೆ ಸ್ವಾಗತಿಸುತ್ತೇನೆ. ಅವರನ್ನು ಅಭಿನಂದಿಸುತ್ತೇನೆ” ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ಸಿನ ಪ್ರಮುಖ ಬ್ರಾಹ್ಮಣ ಮುಖವಾದ ಜಿತಿನ್ ಪ್ರಸಾದ,  ‘ಇಂದು ದೇಶದ ಏಕೈಕ ರಾಷ್ಟ್ರೀಯ ಪಕ್ಷ’ ಎಂದು ಬಿಜೆಪಿಯನ್ನು ಹೊಗಳುವ ಮೂಲಕ ಆ ಪಕ್ಷಕ್ಕೆ ಸೇರಿಕೊಂಡರು. “ನಿಮ್ಮ ಜನರನ್ನು ನೋಡಿಕೊಳ್ಳಲು ನೀವು ಅಸಮರ್ಥರಾಗಿದ್ದರೆ ಅದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಜಿತಿನ್‍ ಹೇಳಿದರು.

ಒಂದು ವರ್ಷ‍ಕ್ಕಿಂತ ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‍ಗೆ  ಈ ವಿದ್ಯಮಾನ ತೊಂದರೆ ಮಾಡಬಹುದು. ಆದರೆ ಅದಕ್ಕಿಂತ ಹೆಚ್ಚಾಗಿ, ಯೋಗಿ ಆದಿತ್ಯನಾಥ್ ಸರ್ಕಾರವು ಟೀಕೆ, ಆಕ್ರೋಶಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಹೊಸ ನರೇಟಿವ್ ಕಟ್ಟಲು ಇದು ಸಹಾಯ ಮಾಡುತ್ತದೆ.

ಬಿಜೆಪಿಯೊಂದಿಗೆ ನೇರ ಮುಖಾಮುಖಿಯನ್ನು ಎದುರಿಸುತ್ತಿರುವ ರಾಜ್ಯಗಳಲ್ಲಿ ಈ ಉನ್ನತ ಮಟ್ಟದ ಪಕ್ಷಾಂತರಗಳು ಕಾಂಗ್ರೆಸ್‍ಗೆ ಬಿಕ್ಕಟ್ಟನ್ನು ಸೂಚಿಸುತ್ತವೆ ಎನ್ನಲಾಗಿದೆ.

ಜ್ಯೋತಿರಾದಿತ್ಯ ಸಿಂಧಿಯಾ 2020ರ ಮಾರ್ಚ್‍ನಲ್ಲಿ ಕಾಂಗ್ರೆಸ್ ತೊರೆದು 22 ಶಾಸಕರೊಂದಿಗೆ ಬಿಜೆಪಿಗೆ ಸೇರಿಕೊಂಡರು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ ಪಕ್ಷದ ಸರ್ಕಾರವನ್ನು ಉರುಳಿಸಿದರು.

ಸಿಂಧಿಯಾ ಅಂದಿನ ತಮ್ಮ ಕಾಂಗ್ರೆಸ್‍ ಮುಖ್ಯಮಂತ್ರಿ ಕಮಲ್ ನಾಥ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಆ ಸಂದರ್ಭದಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ನಿರಂತರ ಆಂತರಿಕ ಕಿತ್ತಾಟವನ್ನು ಎದುರಿಸಬೇಕಾಗಿತ್ತು.

19 ವರ್ಷ ಕಾಂಗ್ರೆಸ್‍ನಲ್ಲಿದ್ದ ಸಿಂಧಿಯಾ ಪಕ್ಷವನ್ನು ತೊರೆಯುವ ಮೊದಲು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ತಿಂಗಳುಗಟ್ಟಲೆ ಕಾಯ್ದು ವಿಫಲರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದವು.

ಜ್ಯೋತಿರಾದಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್‍ ಮತ್ತು ಕಾಂಗ್ರೆಸ್‍ನ ಮತ್ತೊಬ್ಬ ಬಂಡಾಯಗಾರ ಸಚಿನ್ ಪೈಲಟ್- ಈ ಮೂವರೂ ರಾಹುಲ್ ಗಾಂಧಿಯವರ ವಿಶ್ವಾಸಾರ್ಹ ವಲಯದ ಭಾಗವಾಗಿದ್ದರು.

ಆದರೆ 2014ರಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡ ನಂತರ, ಕಾಂಗ್ರೆಸ್‍ ಪಕ್ಷವು ಹೆಚ್ಚಿನ ರಾಜ್ಯ ಚುನಾವಣೆಗಳಲ್ಲಿ ಸೋಲು ಕಂಡಿತು. ಇದರಿಂದ ರಾಹುಲ್ ಗಾಂಧಿಯವರ ನಾಯಕತ್ವದ  ಬಗ್ಗೆ  ಎದ್ದ ಪ್ರಶ್ನೆಗಳ ಮಧ್ಯೆ, ಅವರ ಆಪ್ತವಲಯದಲ್ಲಿದ್ದ ಯುವ ನಾಯಕರು ತಾವು ಸೈಡ್‍ಲೈನ್‍ಗೆ ತಳ್ಳಲ್ಪಟ್ಟೆವು ಎಂದು ಭಾವಿಸಿದರು.

ಇತ್ತೀಚೆಗೆ ರಾಹುಲ್‍ ಗಾಂಧಿಯವರು, “ಬಿಜೆಪಿಯಲ್ಲಿ ಕೊನೆ ಬೆಂಚ್‍ನವರಾಗುತ್ತಾರೆ’ ಎಂದು ಸಿಂಧಿಯಾ ಅವರನ್ನು ಕೆಣಕಿದಾಗ, “ನಾನು ಕಾಂಗ್ರೆಸ್‍ನಲ್ಲಿದ್ದಾಗ ರಾಹುಲ್ ಗಾಂಧಿಯವರು ಈಗಿರುವ ರೀತಿಯಲ್ಲಿಯೇ ಕಾಳಜಿ ವಹಿಸಿದ್ದರೆ ಪರಿಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು’ ಎಂದು ಸಿಂಧಿಯಾ ಪ್ರತಿಕ್ರಿಯಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ : ಜಿತಿನ್ ಪ್ರಸಾದ ಬಿಜೆಪಿ ಸೇರ್ಪಡೆ ಮತ್ತು ಬಿಜೆಪಿಯ ರಾಜಕೀಯ ಲೆಕ್ಕಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...